ಬಿಎಂಟಿಸಿ ಬಸ್‌ನಲ್ಲಿ ಎಸ್‌ಒಎಸ್ ಪ್ಯಾನಿಕ್ ಬಟನ್ ಪರಿಶೀಲಿಸುತ್ತಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ. 
ರಾಜ್ಯ

ಮಹಿಳಾ ಪ್ರಯಾಣಿಕರ ಸುರಕ್ಷತೆ, ಅಪಘಾತ ನಿಯಂತ್ರಣಕ್ಕೆ ಬಿಎಂಟಿಸಿ ಒತ್ತು: ಬಸ್‌ಗಳಲ್ಲಿ ಎಡಿಎಎಸ್‌ ತಂತ್ರಜ್ಞಾನ ಅಳವಡಿಕೆ!

ಮಹಿಳಾ ಪ್ರಯಾಣಿಕರ ಸುರಕ್ಷತೆ ಹಾಗ ಅಪಘಾತ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಿರುವ  ಬಿಎಂಟಿಸಿ, ಬಸ್ಗಳಲ್ಲಿ ಎಡಿಎಎಸ್‌ (ಅಡ್ವಾನ್ಸ್‌ ಡ್ರೈವರ್‌ ಅಸಿಸ್ಟೆನ್ಸ್‌ ಸಿಸ್ಟಂ) ತಂತ್ರಜ್ಞಾನವನ್ನು ಅಳವಡಿಸಿದೆ.

ಬೆಂಗಳೂರು: ಮಹಿಳಾ ಪ್ರಯಾಣಿಕರ ಸುರಕ್ಷತೆ ಹಾಗ ಅಪಘಾತ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಿರುವ  ಬಿಎಂಟಿಸಿ, ಬಸ್ಗಳಲ್ಲಿ ಎಡಿಎಎಸ್‌ (ಅಡ್ವಾನ್ಸ್‌ ಡ್ರೈವರ್‌ ಅಸಿಸ್ಟೆನ್ಸ್‌ ಸಿಸ್ಟಂ) ತಂತ್ರಜ್ಞಾನವನ್ನು ಅಳವಡಿಸಿದೆ.

ಸಾರಿಗೆ ಸಚಿವ ಆರ್ ರಾಮಲಿಂಗಾ ರೆಡ್ಡಿ ಮಾತನಾಡಿ, ಬಸ್‌ಗಳಲ್ಲಿ ಅಳವಡಿಸಲಾಗಿರುವ “ಮೊಬೈಲ್ 8 ಕನೆಕ್ಟ್” ಎಂದು ಕರೆಯಲ್ಪಡುವ ಈ ಸಾಧನವು ವಿಷನ್‌ ಸೆನ್ಸಾರ್‌ ಕ್ಯಾಮೆರಾ, ಡಿಎಂಎಸ್‌ (ಚಾಲಕರ ಮೇಲ್ವಿಚಾರಣಾ ವ್ಯವಸ್ಥೆ) ಕ್ಯಾಮೆರಾ, ಜಿಪಿಎಸ್‌ ಮತ್ತು ಐ ವಾಚ್‌ ತಂತ್ರಜ್ಞಾನವನ್ನು ಒಳಗೊಂಡಿದೆ. ಇವೆಲ್ಲವೂ ಬಸ್‌ನ ಮುಂಭಾಗದ ವಿಂಡ್‌ ಶೀಲ್ಡ್‌ ಗಾಜಿನಲ್ಲಿ ಜೋಡಿಸಲ್ಪಟ್ಟಿದ್ದು, ಒಂದಕ್ಕೊಂದು ಪರಸ್ಪರ ಸಂಪರ್ಕ ಹೊಂದಿವೆ ಎಂದು ಹೇಳಿದ್ದಾರೆ.

ವಿಷನ್‌ ಸೆನ್ಸಾರ್‌ ಕ್ಯಾಮೆರಾದ ಮೂಲಕ ಬಸ್‌ ಮುಂಬದಿಯಲ್ಲಿ ಚಲಿಸುವ ವಾಹನಗಳನ್ನು ಗುರುತಿಸಬಹುದಾಗಿದೆ. ವಾಹನಗಳ ನಡುವೆ ಸುರಕ್ಷಿತ ಅಂತರ ಕಾಯ್ದುಕೊಳ್ಳಲು, ವಾಹನ ಮುಂಭಾಗ ಆಕಸ್ಮಿಕವಾಗಿ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು, ಪಾದಚಾರಿಗಳು ಡಿಕ್ಕಿ ಹೊಡೆಯುವುದು ಹಾಗೂ ವೇಗ ಮಿತಿ ಎಚ್ಚರಿಕೆ ನೀಡಲು ನೆರವಾಗಲಿದೆ.

ಐ ವಾಚ್‌ ತಂತ್ರಜ್ಞಾನವು ಆಡಿಯೊ ಮತ್ತು ವಿಡಿಯೊ ತುಣುಕುಗಳನ್ನು ಸೆರೆ ಹಿಡಿದು ಎಚ್ಚರಿಕೆಯ ಸಂದೇಶವನ್ನು ನಿಯಂತ್ರಣ ಕೊಠಡಿಗೆ ರವಾನಿಸುತ್ತದೆ. ಅಲ್ಲದೆ, ಚಾಲಕನಿಗೆ ನಾನಾ ರೀತಿಯ ಅಲಾರಾಂ, ಎಚ್ಚರಿಕೆ ಗಂಟೆಯ ಮೂಲಕ ಎಚ್ಚರಿಕೆ ನೀಡುತ್ತದೆ. ಈ ಸಾಧನವನ್ನು ಚಾಲಕನ ಮುಂಬದಿಯ ಬಲ ಭಾಗದಲ್ಲಿಅಳವಡಿಸಲಾಗಿದೆ ಎಂದು ತಿಳಿಸಿದರು.

ಇದಲ್ಲದೆ, ಪ್ಯಾನಿಕ್ ಬಟನ್'ನ್ನೂ ಕೂಡ ಅಳವಡಿಸಲಾಗುತ್ತಿದ್ದು, ನಿರ್ಭಯ ಯೋಜನೆ ಮತ್ತು ರಾಜ್ಯ ಸರ್ಕಾರದ ಅನುದಾನದ ಅಡಿಯಲ್ಲಿ ಬಿಎಂಟಿಸಿಯ 5,000 ಬಸ್‌ಗಳಲ್ಲಿ ಈ ಹೊಸ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ಎಲ್ಲಾ ಡಿಪೋಗಳು ಕ್ರಮೇಣ ಈ ವ್ಯವಸ್ಥೆಯನ್ನು ಬಳಸಲು ಪ್ರಾರಂಭಿಸುತ್ತವೆ. ಮಹಿಳೆಯರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಮಹಿಳಾ ಪ್ರಯಾಣಿಕರು ಯಾವುದೇ ತೊಂದರೆ ಅಥವಾ ಸಮಸ್ಯೆ ಎದುರಿಸಿದರೆ ಪ್ಯಾನಿಕ್ ಬಟನ್ ಮತ್ತು ಆಪ್ ಆಧಾರಿತ ಎಸ್‌ಒಎಸ್ ಬಟನ್ ಅನ್ನು ಒತ್ತಬಹುದು ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT