ಸಿಎಂ ಸಿದ್ದರಾಮಯ್ಯ 
ರಾಜ್ಯ

Siddaramaiah: ನರೇಗಾ ಉದ್ಯೋಗ ಮಿತಿ ಹೆಚ್ಚಿಸಲು ಅನುಮತಿ ನೀಡದ ಕೇಂದ್ರ ಸರ್ಕಾರ, ಸಿಎಂ ವಾಗ್ದಾಳಿ

ಬರಗಾಲ ಸಮಯದಲ್ಲಿ ನರೇಗಾ ಯೋಜನೆಯಡಿ 150 ದಿನಗಳವರೆಗೆ ಕೆಲಸ ಕೊಡಬೇಕೆನ್ನುವ ನಿಯಮ ಇದ್ದರೂ ದುಡಿಮೆಯ ದಿನ ಹೆಚ್ಚಿಸಲು ಅನುಮತಿ ನೀಡುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ವಾಗ್ದಾಳಿ ನಡೆಸಿದರು.

ಹಾವೇರಿ: 'ಬರಗಾಲ ಸಮಯದಲ್ಲಿ ನರೇಗಾ ಯೋಜನೆಯಡಿ 150 ದಿನಗಳವರೆಗೆ ಕೆಲಸ ಕೊಡಬೇಕೆನ್ನುವ ನಿಯಮ ಇದ್ದರೂ ದುಡಿಮೆಯ ದಿನ ಹೆಚ್ಚಿಸಲು ಅನುಮತಿ ನೀಡುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ವಾಗ್ದಾಳಿ ನಡೆಸಿದರು.

ಕಾಗಿನೆಲೆ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ‌ಮಾತ್ರ ಅಲ್ಲ, ದೇಶದ 12 ರಾಜ್ಯಗಳಲ್ಲಿ ಬರಗಾಲ ಆವರಿಸಿದೆ. ಇಂತಹ ಸಂದರ್ಭದಲ್ಲಿ ದುಡಿಯುವ ಜನರಿಗೆ ಹೆಚ್ಚಿನ ದುಡಿಯುವ ಅವಕಾಶಗಳನ್ನು ನೀಡಬೇಕಾಗಿದೆ. ನರೇಗಾ ಯೋಜನೆಯಡಿ ಈಗ ನೀಡಲಾಗುತ್ತಿರುವ 100 ದಿನಗಳ ಉದ್ಯೋಗವನ್ನು 150 ದಿನಗಳಿಗೆ ಹೆಚ್ಚಿಸಲು ರಾಜ್ಯ ಸರ್ಕಾರ ಸಿದ್ಧವಿದೆ. ಆದರೆ, ಕೇಂದ್ರ ಸರ್ಕಾರ ಇದುವರೆಗೆ ಅನುಮತಿ ನೀಡಿಲ್ಲ ಎಂದು ಹೇಳಿದರು.

ಬರ ಪರಿಹಾರ ಕಾಮಗಾರಿಗಳನ್ನು ರಾಜ್ಯ ಸರ್ಕಾರ ಕೈಗೊಳ್ಳುತ್ತಿದೆ. ಆದರೆ, ಕೇಂದ್ರ ಸರ್ಕಾರ ತನ್ನ ಪಾಲಿನ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಇದುವರೆಗೆ ಒಂದು ಪೈಸೆಯೂ ಕೊಟ್ಟಿಲ್ಲ. ರಾಜ್ಯ ಕೊಟ್ಟಿರುವ ತೆರಿಗೆ ಹಣವನ್ನೂ ವಾಪಸ್ ನಮಗೆ ಕೊಡುತ್ತಿಲ್ಲ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ನೋಡಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ. ನಿರಂತರ ಸಭೆ ನಡೆಸಿ, ಕಾಮಗಾರಿಗಳ ಮೇಲ್ವಿಚಾರಣೆ ನಡೆಸುವಂತೆ ಎಲ್ಲ ಜಿಲ್ಲೆಗಳ ಉಸ್ತುವಾರಿ ಸಚಿವರಿಗೂ ತಿಳಿಸಿದ್ದೇನೆ ಎಂದರು.

ಬಳಿಕ ಕನಕಗುರುಪೀಠ ಆಯೋಜಿಸಿದ್ದ 536ನೇ ಕನಕ ಜಯಂತ್ಯೋತ್ಸವ ಹಾಗೂ ಭಾವೈಕ್ಯ ಸಮ್ಮೇಳನವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನಕಪೀಠ ಶೋಷಿತ ಸಮುದಾಯಗಳ ಪಾಲಿಗೆ ನೆಲೆಯಾಗಬೇಕು. ಎಲ್ಲಾ ಸಮುದಾಯಗಳಿಗೆ ಮುಕ್ತವಾಗಿಸುವುದು ಪೀಠವನ್ನು ಸ್ಥಾಪಿಸುವ ಮುಖ್ಯ ಉದ್ದೇಶವಾಗಿದ್ದು, ಇದು ಕುರುಬರಿಗೆ ಮಾತ್ರ ಸೀಮಿತವಾಗಿರಬಾರದು ಎಂದು ಎಂದು ಹೇಳಿದರು.

ನಮ್ಮ ಇಚ್ಛೆ ಹಾಗೂ ಆಯ್ಕೆಗೆ ಅನುಗುಣವಾಗಿ ನಾವು ಭೂಮಿಗೆ ಬಂದಿಲ್ಲ. ಮನುಷ್ಯರು ಪರಸ್ಪರ ಗೌರವಿಸಬೇಕು, ಜಾತಿ ಮತ್ತು ಧರ್ಮದ ಆಧಾರದ ಮೇಲೆ ಮನುಷ್ಯರನ್ನು ಗೌರವಿಸುವುದನ್ನು ಕನಕದಾಸರು ವಿರೋಧಿಸಿದರ ಎಂದು ತಿಳಿಸಿದರು.

ನಮ್ಮ ನಡುವೆ ಧರ್ಮವಿದೆ, ನಾವು ಧರ್ಮಕ್ಕಾಗಿ ಬದುಕುತ್ತಿಲ್ಲ, ಮಹಾನ್ ಸಮಾಜ ಸುಧಾರಕರಾದ ಕನಕದಾಸ, ಬಸವಣ್ಣ, ಅಂಬೇಡ್ಕರ್ ಅವರು ಸಮಾನ ಸಮಾಜವನ್ನು ಪ್ರತಿಪಾದಿಸಿದ್ದಾರೆ, ಶರಣರು, ದಾಸರು, ಸೂಫಿಗಳು, ಕುವೆಂಪು ಅವರ ಬೋಧನೆಗಳು ಕೂಡ ಒಂದೇ ಆಗಿದ್ದು, ಅದನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದರು,

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT