ಡಿಸಿಎಂ ಡಿಕೆ.ಶಿವಕುಮಾರ್ 
ರಾಜ್ಯ

ನಾನೇನೂ ತಪ್ಪು ಮಾಡಿಲ್ಲ, ಪಕ್ಷಕ್ಕಾಗಿ ದುಡಿದು ಸಮಸ್ಯೆಗಳ ಎದುರಿಸಿದ್ದೇನೆ: ಡಿಕೆ.ಶಿವಕುಮಾರ್

ನಾನೇನೂ ತಪ್ಪು ಮಾಡಿಲ್ಲ, ಪಕ್ಷಕ್ಕಾಗಿ ದುಡಿದು ಸಮಸ್ಯೆಗಳ ಎದುರಿಸಿದ್ದೇನೆಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಬುಧವಾರ ಹೇಳಿದರು.

ಬೆಂಗಳೂರು: ನಾನೇನೂ ತಪ್ಪು ಮಾಡಿಲ್ಲ, ಪಕ್ಷಕ್ಕಾಗಿ ದುಡಿದು ಸಮಸ್ಯೆಗಳ ಎದುರಿಸಿದ್ದೇನೆಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಬುಧವಾರ ಹೇಳಿದರು.

ಅರಮನೆ ಮೈದಾನದಲ್ಲಿ ನಡೆದ ಟೆಕ್ ಸಮಿಟ್ ಕಾರ್ಯಕ್ರಮದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿಮ್ಮ ವಿರುದ್ಧದ ಪ್ರಕರಣದಲ್ಲಿ ಹೈಕೋರ್ಟ್ ರಿಲೀಫ್ ನೀಡುವ ಆದೇಶ ನೀಡಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು.

“ಈ ವಿಚಾರವಾಗಿ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಸದ್ಯಕ್ಕೆ ನಾನು ಟೆಕ್ ಸಮಿಟ್ ನಲ್ಲಿ ಭಾಗವಹಿಸಲು ಬಂದಿದ್ದೇನೆ. ನಮ್ಮ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಎಂ.ಬಿ ಪಾಟೀಲ್ ಅವರು ರಾಜ್ಯದಲ್ಲಿ ಬಂಡವಾಳ ಆಕರ್ಷಿಸಿ ರಾಜ್ಯದ ಯುವಕರಿಗೆ ಉದ್ಯೋಗ ಸೃಷ್ಟಿಸಲು, ರಾಜ್ಯವನ್ನು ಸಮೃದ್ಧಿಗೊಳಿಸಲು ಈ ಪ್ರಯತ್ನಕ್ಕೆ ಮುಂದಾಗಿದ್ದು, ಅವರಿಗೆ ಬೆಂಬಲವಾಗಿ ನಾನು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ.

ನಮ್ಮ ಸರ್ಕಾರ ನೂತನ ಬಿಟಿ ನೀತಿ ಹಾಗೂ ಅನ್ವೇಷಣಾ ನೀತಿಗಳನ್ನು ಇಂದು ಪರಿಚಯಿಸಿದೆ. ಇಂದು ಸಾವಿರಾರು ಮಂದಿ ವಿದೇಶಿ ಬಂಡವಾಳ ಹೂಡಿಕೆದಾರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ನ್ಯಾಯಾಲಯದಲ್ಲಿ ಆಗಿರುವ ಬೆಳವಣಿಗೆ ಬಗ್ಗೆ ತಿಳಿಯದೆ ಮಾತನಾಡುವುದು ಸರಿಯಲ್ಲ. ವಕೀಲರು ನಮಗೆ ಮಾಹಿತಿ ನೀಡದ ಹೊರತಾಗಿ ನಾನು ಮಾತನಾಡುವುದಿಲ್ಲ ಎಂದು ಹೇಳಿದರು.

ನಾನೇನು ತಪ್ಪು ಮಾಡಿಲ್ಲ. ಎಲ್ಲಾ ಬೆಳವಣಿಗೆಗಳನ್ನು ನೀವು (ಮಾಧ್ಯಮದವರು) ಜನರು ನೋಡಿದ್ದಾರೆ. ನಾನು ಕೇವಲ ಪಕ್ಷದ ಕೆಲಸ ಮಾತ್ರ ಮಾಡಿದ್ದೇನೆ. ಪಕ್ಷದ ಕೆಲಸ ಮಾಡಿದ ಕಾರಣ ಸಾಕಷ್ಟು ತೊಂದರೆ ಅನುಭವಿಸಿದ್ದೇನೆ. ಮುಂದಕ್ಕೂ ತೊಂದರೆ ಕೊಟ್ಟರೆ ಕಾಪಾಡಲು ಆ ಭಗವಂತನಿದ್ದಾನೆ, ಈ ನಾಡಿನ ಜನರಿದ್ದಾರೆ. ನನಗೆ ತೊಂದರೆ ಕೊಟ್ಟ ಕಾರಣಕ್ಕೆ ಈ ರಾಜ್ಯದಲ್ಲಿ ಏನಾಯಿತು ಎಂದು ತಿಳಿದಿದೆ. ನನ್ನ ಪರವಾಗಿ ನಿಂತವರು ಹಾಗೂ ಪ್ರಾರ್ಥನೆ ಮಾಡಿದ ಜನರಿಗೆ ಕೋಟಿ ನಮಸ್ಕಾರ” ಎಂದು ಹೇಳಿದರು.

ಯತ್ನಾಳ್ ಅವರು ನಿಮ್ಮ ವಿರುದ್ದ ಮೇಲ್ಮನವಿ ಸಲ್ಲಿಸಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿ, ಎಲ್ಲರ ಆಚಾರ ವಿಚಾರ, ಭಾವನೆ ಮತ್ತು ಅವರುಗಳ ಮನಸ್ಸಿನಲ್ಲಿ ಏನಿದೆ ಎಂಬುದನ್ನು ಬಹಳ ನಮ್ರತೆಯಿಂದ ಗಮನಿಸಿದ್ದೇನೆ. ಸೂಕ್ತ ಕಾಲದಲ್ಲಿ ಇದಕ್ಕೆಲ್ಲಾ ಉತ್ತರ ಕೊಡುತ್ತೇನೆ” ಎಂದು ತಿಳಿಸಿದರು.

ಬಿ.ಆರ್. ಪಾಟೀಲ್ ಅವರ ಅಸಮಾಧಾನದ ಬಗ್ಗೆ ಕುರಿತ ಪ್ರಶ್ನೆಗೆ ಉತ್ತರಿಸಿ, ಅವರು ಪತ್ರ ಬರೆದಿರುವ ವಿಚಾರ ತಿಳಿದಿಲ್ಲ. ಅದರ ಬಗ್ಗೆ ಮಾಹಿತಿ ಪಡೆದುಕೊಂಡು ಮಾತನಾಡುತ್ತೇನೆ. ಮಾಹಿತಿ ಗೊತ್ತಿಲ್ಲದೇ ಮಾತನಾಡಲು ನನಗೆ ಇಷ್ಟವಿಲ್ಲ. ಯಾವುದೇ ಶಾಸಕರಾಗಲಿ ಮಾತನಾಡಲು, ದನಿ ಎತ್ತಲು ಅವಕಾಶವಿದೆ. ಸದನದಲ್ಲಿ ಮಾತನಾಡುವಾಗ ತನಿಖೆಯಾಗಲಿ ಎಂದು ಹೇಳಿರಬಹುದು. ಕಂದಾಯ ಸಚಿವ ಕೃಷ್ಣಬೈರೇಗೌಡರು ಈಗಾಗಲೇ ತನಿಖೆ ಮಾಡಲು ಸೂಕ್ತ ತೀರ್ಮಾನಗಳನ್ನು ತೆಗೆದುಕೊಂಡಿದ್ದಾರೆ, ತನಿಖೆಗಳು ನಡೆಯುತ್ತಿರುವ ವಿಚಾರ ನನಗೂ ಗೊತ್ತಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಂಡು ಮಾತನಾಡುತ್ತೇನೆ” ಎಂದು ಹೇಳಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT