ಪ್ರಾತಿನಿಧಿಕ ಚಿತ್ರ 
ರಾಜ್ಯ

ಮೈಸೂರು: ಪುತ್ರನ ಮೊಬೈಲ್ ಚಟಕ್ಕೆ ಬೇಸತ್ತು ಚಾಕುವಿನಿಂದ ಇರಿದು ಕೊಂದ ತಂದೆ!

ಮೈಸೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಮೊಬೈಲ್ ಚಟದಿಂದ ಬೇಸತ್ತು ಸ್ವಂತ ಮಗನನ್ನೇ ಕೊಂದಿರುವ ಘಟನೆ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಮೈಸೂರು ನಗರದ ಬನ್ನಿಮಂಟಪದಲ್ಲಿ ಈ ಘಟನೆ ನಡೆದಿದೆ.

ಮೈಸೂರು: ಮೈಸೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಮೊಬೈಲ್ ಚಟದಿಂದ ಬೇಸತ್ತು ಸ್ವಂತ ಮಗನನ್ನೇ ಕೊಂದಿರುವ ಘಟನೆ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಮೈಸೂರು ನಗರದ ಬನ್ನಿಮಂಟಪದಲ್ಲಿ ಈ ಘಟನೆ ನಡೆದಿದೆ.

ಮೃತನನ್ನು ಉಮೈಜ್ ಎಂದು ಗುರುತಿಸಲಾಗಿದ್ದು, ಕೃತ್ಯಕ್ಕೆ ಸಂಬಂಧಿಸಿದಂತೆ ಆತನ ತಂದೆ ಅಸ್ಲಂ ಪಾಷಾನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಸಂತ್ರಸ್ತ ಮೊಬೈಲ್ ಫೋನಿನ ಚಟ ಹೊಂದಿದ್ದು, ತಂದೆ ಇದನ್ನು ವಿರೋಧಿಸಿದಾಗ ಇಬ್ಬರ ನಡುವೆ ಆಗಾಗ್ಗೆ ಜಗಳವಾಗುತ್ತಿತ್ತು.

ಇದೇ ವಿಚಾರವಾಗಿ ಬುಧವಾರ ತಂದೆ ಮತ್ತು ಮಗನ ನಡುವೆ ತೀವ್ರ ವಾಗ್ವಾದ ನಡೆದಿದೆ. ಈ ವೇಳೆ ಆರೋಪಿ ಚಾಕುವಿನಿಂದ ಮಗನಿಗೆ ಇರಿದಿದ್ದಾರೆ.

ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT