ನಿರ್ಮಲಾ ಸೀತಾರಾಮನ್ 
ರಾಜ್ಯ

ಕೇಂದ್ರದಿಂದ ಕರ್ನಾಟಕಕ್ಕೆ ಯಾವುದೇ ಬಾಕಿ ಉಳಿದಿಲ್ಲ: ಕಾಂಗ್ರೆಸ್ ಸರ್ಕಾರದ ಆರೋಪ ತಿರಸ್ಕರಿಸಿದ ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಯಾವುದೇ ಬಾಕಿ ಉಳಿದಿಲ್ಲ ಎಂದು ಗುರುವಾರ ಹೇಳಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಾಜ್ಯಕ್ಕೆ ಬರ ಪರಿಹಾರವಾಗಿ ಬರಬೇಕಾದ ಎನ್ ಡಿ ಆರ್ ಎಫ್ ಹಣ ಬಿಡುಗಡೆಗೆ ಒಂದು ಕಮಿಟಿ ಇದೆ. ಅದು ನಿರ್ಧಾರ ಮಾಡುತ್ತದೆ ಎಂದು ತಿಳಿಸಿದರು. 

ಬೆಂಗಳೂರು: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಯಾವುದೇ ಬಾಕಿ ಉಳಿದಿಲ್ಲ ಎಂದು ಗುರುವಾರ ಹೇಳಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಾಜ್ಯಕ್ಕೆ ಬರ ಪರಿಹಾರವಾಗಿ ಬರಬೇಕಾದ ಎನ್ ಡಿ ಆರ್ ಎಫ್ ಹಣ ಬಿಡುಗಡೆಗೆ ಒಂದು ಕಮಿಟಿ ಇದೆ. ಅದು ನಿರ್ಧಾರ ಮಾಡುತ್ತದೆ ಎಂದು ತಿಳಿಸಿದರು. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿಯವರು ಪ್ರಧಾನಿ ಆಗುವ ಮುನ್ನವೇ 10 ವರ್ಷ ಕಾಲ ಗುಜರಾತ್ ಸಿಎಂ ಆಗಿದ್ದವರು. ಹೀಗಾಗಿ ಅವರಿಗೆ ಕೇಂದ್ರದಿಂದ ಹಣವನ್ನು ಸೂಕ್ತ ಕಾಲಕ್ಕೆ ಪಡೆಯುವುದು ಹೇಗೆಂಬುದು ಗೊತ್ತಿದೆ, ''ರಾಜ್ಯ ಸರಕಾರದ ಆರೋಪಗಳಲ್ಲಿ ಹುರುಳಿಲ್ಲ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯದ ಕೃಷಿ, ಕಂದಾಯ ಸಚಿವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಆರೋಪಗಳನ್ನು ಮಾಡಬಹುದು. ಆ‌ ಪತ್ರ  ನನಗೆ ತಲುಪುವ ಮುನ್ನವೇ ಸಾಮಾಜಿಕ ಜಾಲತಾಣದಲ್ಲಿ ಹಾಕ್ತಾರೆ. ಬೆಂಗಳೂರಿನಲ್ಲಿ ಮಾತ್ರ ಈ ವಿಚಾರವನ್ನು ಹೇಳುತ್ತಿಲ್ಲ. ಎರಡು ದಿನಗಳ ಹಿಂದೆ, ಕೇರಳದಲ್ಲಿದ್ದಾಗಲೂ ಹೀಗೆ ಹೇಳಿದ್ದೇನೆ. “ನಮ್ಮ ಕಡೆಯಿಂದ ಕರ್ನಾಟಕಕ್ಕೆ ಏನೂ ಬಾಕಿ ಇಲ್ಲ, ನಾನು ರಾಜ್ಯದ ಸಂಸದೆಯಾಗಿದ್ದು, ನನಗೂ ಜವಾಬ್ದಾರಿ ಇದೆ. ಯಾವುದೇ ರೀತಿಯ ಬಾಕಿ ಇಲ್ಲ ಎಂದು ತಿಳಿಸಿದರು. 

ರಾಜ್ಯ ಸರ್ಕಾರದ ಪತ್ರಕ್ಕೆ ನಾನು ಕಾಯುತ್ತಿದ್ದೇನೆ. ಅಕೌಂಟೆಂಟ್ ಜನರಲ್ ಅ ಸಹಿ ಇಲ್ಲದೆ ಹಣ ಕಳಿಸೋಕೆ ಸಾಧ್ಯನಾ? ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದರು.  

ಕರ್ನಾಟಕಕ್ಕೆ ಬರ ಪರಿಹಾರಕ್ಕಾಗಿ ಎನ್‌ಡಿಆರ್‌ಎಫ್ ಹಣ ಬಿಡುಗಡೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸೀತಾರಾಮನ್, "ಎನ್‌ಡಿಆರ್‌ಎಫ್‌ಗಾಗಿ ಒಂದು ಸಮಿತಿ ಇದೆ. ಗೃಹ ಸಚಿವ ಅಮಿತ್ ಶಾ ಅದನ್ನು ಪರಿಶೀಲಿಸುತ್ತಾರೆ. ಈ ಸಂಬಂಧ ಕೃಷ್ಣ ಬೈರೇಗೌಡ  ಭೇಟಿ ಮಾಡಿದ್ದು, ಅವರಿಗೆ  ವಿವರಿಸಿದ್ದೇನೆ ಎನ್‌ಡಿಆರ್‌ಎಫ್ ಹಣ ಬಿಡುಗಡೆಗೆ ಕೇಂದ್ರ ತಂಡ ಬಂದು ಪರಿಶೀಲನೆ ಮಾಡಿ ವರದಿ ನೀಡಿದೆ. ಹೈಪವರ್ ಕಮಿಟಿ ಅದನ್ನು ಮುಂದೆ ನೋಡುತ್ತದೆ. ಹೈಪವರ್ ಕಮಿಟಿ ತೀರ್ಮಾನ ಮಾಡಿದ ತಕ್ಷಣವೇ ರಾಜ್ಯಕ್ಕೆ ಪರಿಹಾರ ಬರಲಿದೆ. ಅದನ್ನು ಯಾರು ನಿಲ್ಲಿಸಲು ಸಾಧ್ಯವಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT