ಸಂಗ್ರಹ ಚಿತ್ರ 
ರಾಜ್ಯ

ತಂದೆ ಬದುಕಿದ್ದರೂ ದತ್ತಿ ಇಲಾಖೆ ದೇಗುಲಗಳಲ್ಲಿ ಅರ್ಚರಾಗಲು ಪುರೋಹಿತರ ಮಕ್ಕಳಿಗೆ ಅವಕಾಶ!

ಪುರೋಹಿತರ (ಅರ್ಚಕರ) ಮಕ್ಕಳಿಗೂ ದತ್ತಿ ಇಲಾಖೆಗೆ ಸೇರಿದ ದೇವಸ್ಥಾನಗಳಲ್ಲಿ ಅರ್ಚಕರಾಗಿ ಕೆಲಸ ಮಾಡುವ ಅವಕಾಶವನ್ನು ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಕಲ್ಪಿಸಿದೆ.

ಬೆಂಗಳೂರು: ಪುರೋಹಿತರ (ಅರ್ಚಕರ) ಮಕ್ಕಳಿಗೂ ದತ್ತಿ ಇಲಾಖೆಗೆ ಸೇರಿದ ದೇವಸ್ಥಾನಗಳಲ್ಲಿ ಅರ್ಚಕರಾಗಿ ಕೆಲಸ ಮಾಡುವ ಅವಕಾಶವನ್ನು ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಕಲ್ಪಿಸಿದೆ.

ತಂದೆಯ ಜೀವಂತವಾಗಿರುವವರೆಗೂ ಅವರ ಮಕ್ಕಳು ದೇವಸ್ಥಾನಗಳಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸಲು ಈ ಹಿಂದೆ ಅವಕಾಶ ಇರಲಿಲ್ಲ. ಇದೀಗ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಪುರೋಹಿತರ ಮಕ್ಕಳು, ದೇವಸ್ಥಾನದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸಲು ರಾಜ್ಯ ಸರ್ಕಾರ ಅವಕಾಶ ನೀಡಿದೆ.

ರಾಜ್ಯದಲ್ಲಿ ದತ್ತಿ ಇಲಾಖೆಯ 34,000 ದೇವಾಲಯಗಳಿವೆ. ಕರ್ನಾಟಕ ಹಿಂದೂ ಧಾರ್ಮಿಕ ಮತ್ತು ದತ್ತಿ ಕಾಯಿದೆ 1997, ಸೆಕ್ಷನ್ 9(1) ಪ್ರಕಾರ, ಸಿ ದರ್ಜೆಯ ದೇವಾಲಯಗಳಲ್ಲಿ ಕೆಲಸ ಮಾಡುವ ಪುರೋಹಿತರ ಪುತ್ರರು ಈವರೆಗೂ ತಂದೆಯ ನಿಧನದ ನಂತರವಷ್ಟೇ ಅರ್ಚಕರಾಗಿ ನೇಮಕಗೊಳ್ಳುತ್ತಿದ್ದರು. ಅನಾರೋಗ್ಯ ನಿಮಿತ್ತ ಅರ್ಚಕರು ದೇವಾಲಯಗಳಲ್ಲಿ ಸೇವೆ ಸಲ್ಲಿಕೆಗೆ ಹಾಜರಾಗದಿದ್ದರೂ ಮಕ್ಕಳಿಗೆ ಅವಕಾಶ ನೀಡಲಾಗುತ್ತಿರಲಿಲ್ಲ.

ಆದರೆ, ಇದೀಗ ಸರ್ಕಾರ ಆದೇಶ ಹೊರಡಿಸಿದ್ದು, ಪುರೋಹಿತರು ಮೃತಪಟ್ಟರೆ, ಅನಾರೋಗ್ಯ ಮತ್ತು ವಯೋಸಹಜ ಸಮಸ್ಯೆಗಳಿಂದಾಗಿ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ವಂಶಪಾರಂಪರ್ಯ ಹಕ್ಕುಗಳನ್ನು ಮಕ್ಕಳಿಗೆ ನೀಡಲಾಗುವುದು ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 392ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!