ಸಂಗ್ರಹ ಚಿತ್ರ 
ರಾಜ್ಯ

ತಂದೆ ಬದುಕಿದ್ದರೂ ದತ್ತಿ ಇಲಾಖೆ ದೇಗುಲಗಳಲ್ಲಿ ಅರ್ಚರಾಗಲು ಪುರೋಹಿತರ ಮಕ್ಕಳಿಗೆ ಅವಕಾಶ!

ಪುರೋಹಿತರ (ಅರ್ಚಕರ) ಮಕ್ಕಳಿಗೂ ದತ್ತಿ ಇಲಾಖೆಗೆ ಸೇರಿದ ದೇವಸ್ಥಾನಗಳಲ್ಲಿ ಅರ್ಚಕರಾಗಿ ಕೆಲಸ ಮಾಡುವ ಅವಕಾಶವನ್ನು ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಕಲ್ಪಿಸಿದೆ.

ಬೆಂಗಳೂರು: ಪುರೋಹಿತರ (ಅರ್ಚಕರ) ಮಕ್ಕಳಿಗೂ ದತ್ತಿ ಇಲಾಖೆಗೆ ಸೇರಿದ ದೇವಸ್ಥಾನಗಳಲ್ಲಿ ಅರ್ಚಕರಾಗಿ ಕೆಲಸ ಮಾಡುವ ಅವಕಾಶವನ್ನು ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಕಲ್ಪಿಸಿದೆ.

ತಂದೆಯ ಜೀವಂತವಾಗಿರುವವರೆಗೂ ಅವರ ಮಕ್ಕಳು ದೇವಸ್ಥಾನಗಳಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸಲು ಈ ಹಿಂದೆ ಅವಕಾಶ ಇರಲಿಲ್ಲ. ಇದೀಗ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಪುರೋಹಿತರ ಮಕ್ಕಳು, ದೇವಸ್ಥಾನದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸಲು ರಾಜ್ಯ ಸರ್ಕಾರ ಅವಕಾಶ ನೀಡಿದೆ.

ರಾಜ್ಯದಲ್ಲಿ ದತ್ತಿ ಇಲಾಖೆಯ 34,000 ದೇವಾಲಯಗಳಿವೆ. ಕರ್ನಾಟಕ ಹಿಂದೂ ಧಾರ್ಮಿಕ ಮತ್ತು ದತ್ತಿ ಕಾಯಿದೆ 1997, ಸೆಕ್ಷನ್ 9(1) ಪ್ರಕಾರ, ಸಿ ದರ್ಜೆಯ ದೇವಾಲಯಗಳಲ್ಲಿ ಕೆಲಸ ಮಾಡುವ ಪುರೋಹಿತರ ಪುತ್ರರು ಈವರೆಗೂ ತಂದೆಯ ನಿಧನದ ನಂತರವಷ್ಟೇ ಅರ್ಚಕರಾಗಿ ನೇಮಕಗೊಳ್ಳುತ್ತಿದ್ದರು. ಅನಾರೋಗ್ಯ ನಿಮಿತ್ತ ಅರ್ಚಕರು ದೇವಾಲಯಗಳಲ್ಲಿ ಸೇವೆ ಸಲ್ಲಿಕೆಗೆ ಹಾಜರಾಗದಿದ್ದರೂ ಮಕ್ಕಳಿಗೆ ಅವಕಾಶ ನೀಡಲಾಗುತ್ತಿರಲಿಲ್ಲ.

ಆದರೆ, ಇದೀಗ ಸರ್ಕಾರ ಆದೇಶ ಹೊರಡಿಸಿದ್ದು, ಪುರೋಹಿತರು ಮೃತಪಟ್ಟರೆ, ಅನಾರೋಗ್ಯ ಮತ್ತು ವಯೋಸಹಜ ಸಮಸ್ಯೆಗಳಿಂದಾಗಿ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ವಂಶಪಾರಂಪರ್ಯ ಹಕ್ಕುಗಳನ್ನು ಮಕ್ಕಳಿಗೆ ನೀಡಲಾಗುವುದು ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT