ಅಯೋಧ್ಯೆಯ ರಾಮಮಂದಿರ 
ರಾಜ್ಯ

ಅಯೋಧ್ಯೆ-ಅಂಜನಾದ್ರಿ ನಡುವೆ ರೈಲು ಸಂಪರ್ಕ ಕಲ್ಪಿಸಲು ಚಿಂತನೆ

2024 ರ ಜನವರಿಯಲ್ಲಿ ನಿಗದಿಯಾಗಿರುವ ಶ್ರೀರಾಮ ಮಂದಿರ ಉದ್ಘಾಟನೆಯ ಸಮಯದಲ್ಲಿ ಅಯೋಧ್ಯೆಗೆ ರೈಲು ಸಂಪರ್ಕ ಕಲ್ಪಿಸುವ ಯೋಜನೆಯೊಂದು ಜಾರಿ ಹಂತದಲ್ಲಿದೆ.

ಹುಬ್ಬಳ್ಳಿ: 2024 ರ ಜನವರಿಯಲ್ಲಿ ನಿಗದಿಯಾಗಿರುವ ಶ್ರೀರಾಮ ಮಂದಿರ ಉದ್ಘಾಟನೆಯ ಸಮಯದಲ್ಲಿ ಅಯೋಧ್ಯೆಗೆ ರೈಲು ಸಂಪರ್ಕ ಕಲ್ಪಿಸುವ ಯೋಜನೆಯೊಂದು ಜಾರಿ ಹಂತದಲ್ಲಿದೆ.

ಹೌದು.. ಅಯೋಧ್ಯೆ-ಅಂಜನಾದ್ರಿ ನಡುವೆ ರೈಲು ಸಂಪರ್ಕಕ್ಕೆ ವೇದಿಕೆ ಸಜ್ಜಾಗಿದ್ದು, ಹನುಮಂತನ ಜನ್ಮಸ್ಥಳ ಅಂಜನಾದ್ರಿಯಿಂದ ಅಯೋಧ್ಯೆಗೆ ಮೊದಲ ರೈಲು ಸಂಚಾರಕ್ಕೆ ವೇದಿಕೆ ಸಜ್ಜಾಗಿದೆ. ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರು ರೈಲ್ವೆ ಸಚಿವಾಲಯಕ್ಕೆ ಪತ್ರ ಬರೆದಿದ್ದು, ರೈಲ್ವೆ ಇಲಾಖೆಯಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎಂದು ಹೇಳಲಾಗಿದೆ. 

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿರುವ ಅಂಜನಾದ್ರಿ ಮತ್ತು  ಅಯೋಧ್ಯೆ ಎರಡೂ ವಾರ್ಷಿಕವಾಗಿ ಹೆಚ್ಚಿನ ಸಂಖ್ಯೆಯ ಧಾರ್ಮಿಕ ಪ್ರವಾಸಿಗರನ್ನು ಆಕರ್ಷಿಸುತ್ತವೆ. ಹನುಮಂತನ ಜನ್ಮಸ್ಥಳವಾದ ಅಂಜನಾದ್ರಿಗೆ ಉತ್ತರ ಭಾರತದ ಅನೇಕ ಭಾಗಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಾರೆ. ಮುಂಬರುವ ಸಂಸತ್ ಅಧಿವೇಶನದಲ್ಲಿ ಮತ್ತೊಮ್ಮೆ ಬೇಡಿಕೆಯನ್ನು ಮಂಡಿಸುತ್ತೇನೆ. ಎರಡು ಧಾರ್ಮಿಕ ಕೇಂದ್ರಗಳ ನಡುವೆ ಸಂಪರ್ಕ ಕಲ್ಪಿಸುವಂತೆ ಕೋರಿ ನಾನು ಈಗಾಗಲೇ ರೈಲ್ವೆ ಸಚಿವಾಲಯ ಮತ್ತು ನೈಋತ್ಯ ರೈಲ್ವೆಗೆ ಪತ್ರ ಕಳುಹಿಸಿದ್ದೇನೆ. ಈ ರೈಲು ಈ ಭಾಗದ ಜನರಿಗೆ ಸಹಾಯ ಮಾಡುತ್ತದೆ, ಇದು ಧಾರ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ ಎಂದು ಕರಡಿ ಸಂಗಣ್ಣ ಹೇಳಿದರು.

ರೈಲ್ವೆ ಕ್ರಿಯಾ ಸಮಿತಿಯ ರಾಜ್ಯಾಧ್ಯಕ್ಷ ಕೆ.ಎಂ.ಮಹೇಶ್ವರಸ್ವಾಮಿ ಮಾತನಾಡಿ, ಅಂಜನಾದ್ರಿಯ ಸ್ಥಳೀಯರು ಮತ್ತು ದೇವಸ್ಥಾನದ ಟ್ರಸ್ಟ್ ಸದಸ್ಯರ ಬಹುಕಾಲದ ಬೇಡಿಕೆಯಾಗಿದೆ. “ನಾವು ಯೋಜನೆಯನ್ನು ಬೆಂಬಲಿಸುತ್ತೇವೆ ಮತ್ತು ರೈಲ್ವೆ ಸಂಪರ್ಕದೊಂದಿಗೆ ಮುಂದುವರಿಯಲು ಸಹಾಯ ಮಾಡುತ್ತೇವೆ. ಇವುಗಳು ಮುಖ್ಯ ಜಂಕ್ಷನ್‌ಗಳಾಗಿರುವುದರಿಂದ ಆರಂಭಿಕ ಹಂತವು ಹುಬ್ಬಳ್ಳಿ ಅಥವಾ ಗುಂಟ್ಕಲ್ ಆಗಿರಬೇಕು ಎಂದು ಅವರು ಹೇಳಿದರು.

ಅಂಜನಾದ್ರಿಯ ಹನುಮದ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಹಿರಿಯ ಟ್ರಸ್ಟಿ ಮಾತನಾಡಿ, ಎರಡೂ ದೈವಿಕ ಸ್ಥಳಗಳನ್ನು ಸಂಪರ್ಕಿಸುವ ರೈಲನ್ನು ರೈಲ್ವೆ ಪರಿಗಣಿಸುತ್ತಿರುವುದು ಸಕಾರಾತ್ಮಕ ಸುದ್ದಿಯಾಗಿದೆ. ನಾವು ಕಿಷ್ಕಿಂದೆಯ ಬಳಿಯೂ ಹೊಸ ರೈಲು ನಿಲ್ದಾಣಕ್ಕಾಗಿ ಒತ್ತಾಯಿಸಿದ್ದೇವೆ, ಅಲ್ಲಿ ಭಕ್ತರು ದೇಗುಲದ ಬಳಿ ತಲುಪಬಹುದು. ರೈಲು ಸಂಪರ್ಕವನ್ನು ಪಡೆಯುವುದು ನಮ್ಮ ಟ್ರಸ್ಟ್‌ನ ಬಹುಕಾಲದ ಕನಸು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಚುನಾವಣಾ ರ್ಯಾಲಿಗಾಗಿ ಗಂಗಾವತಿಯಲ್ಲಿದ್ದಾಗ, ಅವರು ಎರಡು ಸ್ಥಳಗಳನ್ನು ರೈಲ್ವೆಯೊಂದಿಗೆ ಸಂಪರ್ಕಿಸುವ ಬಯಕೆಯನ್ನು ವ್ಯಕ್ತಪಡಿಸಿದ್ದರು ಎಂದು ಹೇಳಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

SCROLL FOR NEXT