ಸಂಗ್ರಹ ಚಿತ್ರ 
ರಾಜ್ಯ

ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ: ಸಿಡಬ್ಲ್ಯುಎಂಎಗೆ ರಾಜ್ಯ ಸರ್ಕಾರ ಸ್ಪಷ್ಟನೆ, ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ ಮನವಿ

ನೆರೆ ರಾಜ್ಯ ತಮಿಳುನಾಡಿಗೆ ನೀರು ಬಿಡುವ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯುಎಂಎ) ಬಳಿ ಅಸಮರ್ಥತೆ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ, ಮರುಪರಿಶೀಲನಾ ಅರ್ಜಿ ಸಲ್ಲಿಸಿದೆ. ಅಲ್ಲದೆ, ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಅನುಮತಿ ನೀಡುವಂತೆಯೂ ಮನವಿ ಸಲ್ಲಿಸಿದೆ.

ಬೆಂಗಳೂರು: ನೆರೆ ರಾಜ್ಯ ತಮಿಳುನಾಡಿಗೆ ನೀರು ಬಿಡುವ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯುಎಂಎ) ಬಳಿ ಅಸಮರ್ಥತೆ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ, ಮರುಪರಿಶೀಲನಾ ಅರ್ಜಿ ಸಲ್ಲಿಸಿದೆ. ಅಲ್ಲದೆ, ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಅನುಮತಿ ನೀಡುವಂತೆಯೂ ಮನವಿ ಸಲ್ಲಿಸಿದೆ.

ಅಕ್ಟೋಬರ್ 15 ರವರೆಗೆ ಪ್ರತಿದಿನ 3,000 ಕ್ಯೂಸೆಕ್ ನೀರು ಬಿಡುವಂತೆ ರಾಜ್ಯಕ್ಕೆ ಕಾವೇರಿ ನೀರು ನಿಯಂತ್ರಣ ಆಯೋಗದ ನೀಡಿದ್ದ ನಿರ್ದೇಶನವನ್ನು ಸಿಡಬ್ಲ್ಯುಎಂಎಗೆ ಎತ್ತಿಹಿಡಿದಿತ್ತು.  ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಕಾನೂನು ತಜ್ಞರ ಜತೆಗೆ ಸಮಾಲೋಚನೆ ನಡೆಸಿದ್ದರು. ಪ್ರಾಧಿಕಾರಕ್ಕೆ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿತ್ತು.

ರಾಜ್ಯದ ಕಾವೇರಿ ಕೊಳ್ಳದ ನಾಲ್ಕು ಜಲಾಶಯಗಳಲ್ಲಿ 49 ಟಿಎಂಸಿ ಅಡಿಯಷ್ಟು ಮಾತ್ರ ನೀರಿದೆ. ಈ ನೀರು ರಾಜ್ಯದ ಕುಡಿಯುವ ನೀರು ಹಾಗೂ ನೀರಾವರಿಗೆ ಸಾಲದು. ಇಂತಹ ಸನ್ನಿವೇಶದಲ್ಲಿ ಪ್ರಾಧಿಕಾರ ನೀಡಿರುವ ಆದೇಶ ಅವೈಜ್ಞಾನಿಕ. ಆದೇಶವನ್ನು ಮರುಪರಿಶೀಲಿಸಬೇಕು ಎಂದು ರಾಜ್ಯವು ಅರ್ಜಿಯಲ್ಲಿ ಕೋರಿದೆ.

ಈ ಎಲ್ಲ ಸಮಸ್ಯೆಗಳಿಗೆ ಮೇಕೆದಾಟು ಯೋಜನೆಯೇ ಪರಿಹಾರ. ಮಳೆಗಾಲದಲ್ಲಿ ಸಂಗ್ರಹವಾಗುವ ಹೆಚ್ಚುವರಿ ನೀರನ್ನು ಈ ಜಲಾಶಯದಲ್ಲಿ ಸಂಗ್ರಹಿಸಬಹುದು. ಸಂಕಷ್ಟದ ಸನ್ನಿವೇಶದಲ್ಲಿ ತಮಿಳುನಾಡಿಗೆ ಸಹ ನೀರು ಬಿಡುಗಡೆ ಮಾಡಬೇಕು. ಹೀಗಾಗಿ, ಈ ಯೋಜನೆಗೆ ತುರ್ತಾಗಿ ಅನುಮೋದನೆ ನೀಡಬೇಕು ಎಂದು ಒತ್ತಾಯಿಸಿದೆ.

ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಜಲ ಆಯೋಗಕ್ಕೆ ರಾಜ್ಯ ಸರ್ಕಾರ 2019ರಲ್ಲೇ ಸಲ್ಲಿಸಿದೆ. ಈ ಯೋಜನೆಗೆ ಕಾವೇರಿ ಪ್ರಾಧಿಕಾರದಿಂದ ಒಪ್ಪಿಗೆ ಸಿಗಬೇಕಿದೆ. ಕಳೆದ ಒಂದೂವರೆ ವರ್ಷಗಳಲ್ಲಿ ಪ್ರಾಧಿಕಾರದ ಕಾರ್ಯಸೂಚಿಯಲ್ಲಿ ಮೇಕೆದಾಟು ಯೋಜನೆಯ ಪ್ರಸ್ತಾವ 13 ಸಲ ಸೇರ್ಪಡೆಯಾಗಿದೆ. ಆದರೆ, ಕೊನೆಯ ಕ್ಷಣದಲ್ಲಿ ಕಾರ್ಯಸೂಚಿಯಿಂದ ಕೈಬಿಡಲಾಗುತ್ತಿದೆ. ಪ್ರಾಧಿಕಾರದ ಮುಂದಿನ ಸಭೆಯಲ್ಲಿ ಮೇಕೆದಾಟು ವಿಷಯವನ್ನು ಕಾರ್ಯಸೂಚಿಯಲ್ಲಿ ಸೇರ್ಪಡೆ ಮಾಡಬೇಕು. ಜತೆಗೆ ಯೋಜನೆಗೆ ತುರ್ತಾಗಿ ಅನುಮೋದನೆ ನೀಡಬೇಕು ಎಂದು ರಾಜ್ಯ ಮನವಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅಧಿಕಾರ ಹಂಚಿಕೆ ಬಗ್ಗೆ ಯಾರೂ ಮಾತನಾಡಬೇಡಿ, ಸಾರ್ವಜನಿಕ ಹೇಳಿಕೆ ಕೊಡಬೇಡಿ': ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಬುದ್ದಿಮಾತು

'ನೀವು ಶಾಶ್ವತ ವಿಪತ್ತು ನಿಧಿ ಏಕೆ ರಚಿಸಿಲ್ಲ': ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನೆ

ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಬಗೆದಿದೆ: ಡಿ ಕೆ ಶಿವಕುಮಾರ್

ಟೈಗರ್‌ ಜಿಂದಾ ಹೈ, ಕಿಂಗ್‌ ಈಸ್ ಅಲೈವ್‌: CM ಬಗ್ಗೆ ಬೈರತಿ ಗುಣಗಾನ; ಯತೀಂದ್ರ ಹೇಳಿಕೆಗೆ ಕೆರಳಿ ಕೆಂಡವಾದ ಡಿಕೆಶಿ ಬಣ!

ದೇವನಹಳ್ಳಿಯ 1,777 ಎಕರೆ ಜಮೀನು 'ಶಾಶ್ವತ ವಿಶೇಷ ಕೃಷಿ ವಲಯ'; ಭೂಮಿ ಮಾರಾಟಕ್ಕೆ ಕಡಿವಾಣ ಇಲ್ಲ: ಸರ್ಕಾರ

SCROLL FOR NEXT