ಸಂಸದ ತೇಜಸ್ವಿ ಸೂರ್ಯ 
ರಾಜ್ಯ

ಬೈಯಪ್ಪನಹಳ್ಳಿ- ಕೆಆರ್ ಪುರ ಮೆಟ್ರೋ ಮಾರ್ಗವನ್ನು ಕೂಡಲೇ ಉದ್ಘಾಟಿಸಬೇಕು: ಸಂಸದ ತೇಜಸ್ವಿ ಸೂರ್ಯ ಒತ್ತಾಯ

ಬಹುನಿರೀಕ್ಷಿತ  ಬೈಯಪ್ಪನಹಳ್ಳಿ- ಕೆಆರ್ ಪುರ ಮೆಟ್ರೋ ಮಾರ್ಗವನ್ನು ಕೂಡಲೇ ಉದ್ಘಾಟಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಸಂಸದ ತೇಜಸ್ವಿ ಸೂರ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಒತ್ತಾಯಿಸಿದ್ದಾರೆ.

ಬೆಂಗಳೂರು: ಬಹುನಿರೀಕ್ಷಿತ  ಬೈಯಪ್ಪನಹಳ್ಳಿ- ಕೆಆರ್ ಪುರ ಮೆಟ್ರೋ ಮಾರ್ಗವನ್ನು ಕೂಡಲೇ ಉದ್ಘಾಟಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಸಂಸದ ತೇಜಸ್ವಿ ಸೂರ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಒತ್ತಾಯಿಸಿದ್ದಾರೆ.

ಬಿಜೆಪಿ ಯುವ ಮೋರ್ಚಾ ಆಯೋಜಿಸಿದ 'ಸ್ವಚ್ಛತಾ ಹೀ ಸೇವಾ' ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, "ಪ್ರತಿದಿನ ಸುಮಾರು 5 ರಿಂದ 6 ಲಕ್ಷ ಜನರು ಬೆಂಗಳೂರು ಮೆಟ್ರೋವನ್ನು ಬಳಸುತ್ತಾರೆ, ಬೈಯಪ್ಪನಹಳ್ಳಿ-ಕೆಆರ್ ಪುರ ಮಾರ್ಗ ಉದ್ಘಾಟನೆಯಾದರೆ ಈ ಸಂಖ್ಯೆಯಲ್ಲಿ ಸುಮಾರು  ಶೇ. 50-60 ರಷ್ಟು ಪ್ರಯಾಣಿಕರಿಗೆ ಪ್ರಯೋಜನವಾಗಲಿದೆ ಎಂದರು.

ಪ್ರಾಯೋಗಿಕ ಪರೀಕ್ಷೆ ಸೇರಿದಂತೆ ಸಿಎಂಆರ್ ಎಸ್ ನಿಂದ ಎಲ್ಲಾ ಒಪ್ಪಿಗೆ ದೂರೆತಿದ್ದರೂ ರಾಜ್ಯ ಸರ್ಕಾರ ಉದ್ಘಾಟನೆಗೆ ಇನ್ನೂ ವಿಳಂಬ ಮಾಡುತ್ತಿದೆ. ರಾಹುಲ್ ಗಾಂಧಿ ಅಥವಾ ಇತರ ಕಾಂಗ್ರೆಸ್ ನಾಯಕರು ಬಂದು ಉದ್ಘಾಟನೆ ಮಾಡಲಿ ಎಂಬ ಕಾರಣದಿಂದ ಮಾರ್ಗವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲು ಸರ್ಕಾರ ಮೀನಾ ಮೇಷ ಎಣಿಸುತ್ತಿದೆ ಎಂದು ಅವರು ಆರೋಪಿಸಿದರು.

ಎಲ್ಲಾ ಸಿದ್ದಗೊಂಡಿದ್ದರೂ ಮೆಟ್ರೋ ರೈಲು ಸಂಚಾರ ಆರಂಭವಾಗದಿರುವುದರಿಂದ ಜನರು ನಿರಾಸೆಗೊಂಡಿದ್ದಾರೆ. ಆದರೆ ರಾಜ್ಯ ಸರ್ಕಾರವು ರಾಜಕೀಯ ಕಾರಣಕ್ಕಾಗಿ ಅದನ್ನು ಮುಕ್ತಗೊಳಿಸುತ್ತಿಲ್ಲ. ಕೂಡಲೇ ಈ ಮಾರ್ಗವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಬೇಕು, ಬೆಂಗಳೂರು ಜನರು ತೊಂದರೆ ಅನುಭವಿಸಲು ಬಿಡಬಾರದು ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಒತ್ತಾಯಿಸುವುದಾಗಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT