ಸಂಗ್ರಹ ಚಿತ್ರ 
ರಾಜ್ಯ

ನೈಸರ್ಗಿಕ ಹರಿವನ್ನು ನಿಯಂತ್ರಿಸಲಾಗದು, ತಮಿಳುನಾಡಿಗೆ ನಿತ್ಯ 6,500 ಕ್ಯೂಸೆಕ್ ನೀರು ಹರಿಯುತ್ತಿದೆ: ಡಿಕೆ.ಶಿವಕುಮಾರ್

ಕೆಆರ್‌ಎಸ್ ಅಣೆಕಟ್ಟೆಯಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿಲ್ಲ. ಆದರೆ, ನೈಸರ್ಗಿಕ ಹರಿವು ನಿಯಂತ್ರಿಸಲಾಗದ ಕಾರಣ ನೆರೆ ರಾಜ್ಯಕ್ಕೆ ನಿತ್ಯ 6,500 ಕ್ಯೂಸೆಕ್ ನೀರು ಹರಿದು ಹೋಗುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಬೆಂಗಳೂರು: ಕೆಆರ್‌ಎಸ್ ಅಣೆಕಟ್ಟೆಯಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿಲ್ಲ. ಆದರೆ, ನೈಸರ್ಗಿಕ ಹರಿವು ನಿಯಂತ್ರಿಸಲಾಗದ ಕಾರಣ ನೆರೆ ರಾಜ್ಯಕ್ಕೆ ನಿತ್ಯ 6,500 ಕ್ಯೂಸೆಕ್ ನೀರು ಹರಿದು ಹೋಗುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಆರ್ಎಸ್ ಜಲಾಶಯದಲ್ಲಿ ಒಳಹರಿವು ಹೆಚ್ಚಿದ್ದು, ಇದೀಗ 15,000 ಕ್ಯೂಸೆಕ್ ನೀರಿದೆ ಇದೆ. ಇದು ನಮಗೆ ಸ್ವಲ್ಪ ಸಮಾಧಾನ ತಂದಿದೆ. ಒಳಹರಿವು ಇನ್ನೂ ಹೆಚ್ಚಾಗಬೇಕಿದ್ದು, ಉತ್ತಮ ಮಳೆಯಾಗಲಿ ಎಂದು ಎಲ್ಲರೂ ಪ್ರಾರ್ಥಿಸಬೇಕು. ಒಳಹರಿವು ಹೆಚ್ಚಾದರೆ ಒತ್ತಡ ಕಡಿಮೆಯಾಗಲಿದೆ ಎಂದು ಹೇಳಿದರು.

ತಮಿಳುನಾಡಿಗೆ ಕೆಆರ್‌ಎಸ್‌ನಿಂದ ನೀರು ಬಿಡುಗಡೆ ಮಾಡಿಲ್ಲ. ಕಳೆದ ಕೆಲವು ದಿನಗಳಿಂದ ಬೆಂಗಳೂರು ಸುತ್ತಮುತ್ತ ಉತ್ತಮ ಮಳೆಯಾಗುತ್ತಿದ್ದು, ತಮಿಳುನಾಡಿಗೆ ಉತ್ತಮ ಪ್ರಮಾಣದ ನೀರು ಹರಿದು ಹೋಗುತ್ತಿದೆ. ಮಳೆಯ ಪ್ರಮಾಣ ಹೆಚ್ಚಾದಾಗಲೆಲ್ಲ ನೆರೆ ರಾಜ್ಯಕ್ಕೆ ಹರಿಯುವ ಅನಿಯಂತ್ರಿತ ನೀರು ಇದಾಗಿದೆ. ತಮಿಳುನಾಡಿಗೆ 6,500 ಕ್ಯೂಸೆಕ್‌ ಹರಿದು ಹೋಗುತ್ತಿದೆ. ಈ ನೈಸರ್ಗಿಕ ಹರಿವಾಗಿದ್ದು, ಇದೇ ನಮಗೆ ಶಕ್ತಿಯನ್ನು ನೀಡಿದೆ. ಬೆಳೆದ ಬೆಳೆ ಉಳಿಸಿಕೊಳ್ಳಲು ರೈತರಿಗೆ ನೀರು ಬಿಟ್ಟಿದ್ದೇವೆ. ಆದರೂ ರಾಜ್ಯ ಸರ್ಕಾರದ ಕಾನೂನು ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT