ಮಂಗಳೂರಿನ ವೀರರಾಣಿ ಅಬ್ಬಕ್ಕ ಸರ್ಕಲ್ ಹತ್ತಿ ಧಾರ್ಮಿಕ ಧ್ವಜ ಪ್ರದರ್ಶಿಸಿ ಪುಂಡಾಟ ಮೆರೆದ ಯುವಕರು 
ರಾಜ್ಯ

ಮಂಗಳೂರು: ಈದ್ ಮಿಲಾದ್ ಮೆರವಣಿಗೆ ವೇಳೆ ರಾಣಿ ಅಬ್ಬಕ್ಕ ಪ್ರತಿಮೆ ಬಳಿ ಧಾರ್ಮಿಕ ಧ್ವಜ ಪ್ರದರ್ಶನ, ಯುವಕರಿಗೆ ನೋಟಿಸ್

ಮಂಗಳೂರಿನಲ್ಲಿ ಸ್ವಾತಂತ್ರ್ಯ ಹೋರಾಟಗಾರ್ತಿ ರಾಣಿ ಅಬ್ಬಕ್ಕನ ಪ್ರತಿಮೆ ಮೇಲೇರಿ ಧಾರ್ಮಿಕ ಧ್ವಜವನ್ನು ಹಾರಿಸಿದ್ದಕ್ಕಾಗಿ ಯುವಕರ ಗುಂಪೊಂದಕ್ಕೆ ನೋಟಿಸ್ ಜಾರಿ ಮಾಡಿರುವುದಾಗಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ದಕ್ಷಿಣ ಕನ್ನಡ: ಮಂಗಳೂರಿನಲ್ಲಿ ಸ್ವಾತಂತ್ರ್ಯ ಹೋರಾಟಗಾರ್ತಿ ರಾಣಿ ಅಬ್ಬಕ್ಕನ ಪ್ರತಿಮೆ ಸರ್ಕಲ್ ಮೇಲೇರಿ ಧಾರ್ಮಿಕ ಧ್ವಜವನ್ನು ಹಾರಿಸಿದ್ದಕ್ಕಾಗಿ ಯುವಕರ ಗುಂಪೊಂದಕ್ಕೆ ನೋಟಿಸ್ ಜಾರಿ ಮಾಡಿರುವುದಾಗಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಮಂಗಳೂರಿನ ವೀರರಾಣಿ ಅಬ್ಬಕ್ಕ ವೃತ್ತದಲ್ಲಿ ಸೆಪ್ಟೆಂಬರ್ 28 ರಂದು ಈದ್ ಮಿಲಾದ್ ಮೆರವಣಿಗೆ ವೇಳೆ ಹಸಿರು ಬಾವುಟ ಹಿಡಿದು ಯುವಕರು ಪ್ರತಿಮೆಯನ್ನು ಏರಿದ್ದರು.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆಕ್ರೋಶ ವ್ಯಕ್ತವಾಗಿದೆ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಉಳ್ಳಾಲ ಪೊಲೀಸರು ವಿಡಿಯೋ ದೃಶ್ಯಾವಳಿಗಳನ್ನು ಸಂಗ್ರಹಿಸಿದ್ದಾರೆ. ಯುವಕರನ್ನು ಗುರುತಿಸಿದ್ದು, ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ನೋಟಿಸ್ ಕಳುಹಿಸಿದ್ದಾರೆ.

ಮೆರವಣಿಗೆಯಲ್ಲಿ ನೂರಾರು ಯುವಕರು ಪ್ರತಿಮೆಯ ಮೇಲೆ ಹತ್ತಿ ಅಗೌರವದಿಂದ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಯುವಕರು ರಸ್ತೆ ತಡೆ ನಡೆಸಿದ್ದಾರೆ ಮತ್ತು ನಿರಂತರವಾಗಿ ಹಾರ್ನ್ ಮಾಡಿದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ಕೋಮು ಸೂಕ್ಷ್ಮ ನಗರವಾಗಿರುವುದರಿಂದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ದಕ್ಷಿಣ ಕನ್ನಡ ಜಿಲ್ಲೆಯ ಮಂಜನಾಡಿ, ಮದಕ, ಬಂಟ್ವಾಳ, ಬೆಳ್ತಂಗಡಿ, ದೇರಳಕಟ್ಟೆ, ಕೊಣಾಜೆ ಮತ್ತು ಉಳ್ಳಾಲದ ಯುವಕರನ್ನು ಗುರುತಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT