ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ರೂಮ್ ನೀಡಲು ನಿರಾಕರಿಸಿದ ಮಹಿಳಾ ಹೋಟೆಲ್ ಉದ್ಯಮಿಯ ಅಪಹರಣ!

ರೂಂ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ 42 ವರ್ಷದ ಮಹಿಳಾ ಹೋಟೆಲ್ ಉದ್ಯಮಿಯೊಬ್ಬರನ್ನು ಮೂವರು ಮಹಿಳೆಯರು ಸೇರಿದಂತೆ ಐವರ ತಂಡ ಅಪಹರಿಸಿದ ಘಟನೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ರೂಂ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ 42 ವರ್ಷದ ಮಹಿಳಾ ಹೋಟೆಲ್ ಉದ್ಯಮಿಯೊಬ್ಬರನ್ನು ಮೂವರು ಮಹಿಳೆಯರು ಸೇರಿದಂತೆ ಐವರ ತಂಡ ಅಪಹರಿಸಿದ ಘಟನೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪಂಕಜಾ ಅಪಹರಣಕ್ಕೊಳಗಾದ ಮಹಿಳೆಯಾಗಿದ್ದಾರೆ. ಪಂಕಜಾ ಅವರು ಕಳೆದ ನಾಲ್ಕು ವರ್ಷಗಳಿಂದ ಎಂಇಎಸ್ ರಿಂಗ್ ರಸ್ತೆಯಲ್ಲಿ ಡಿಎಂ ರೆಸಿಡೆನ್ಸಿ ಲಾಡ್ಜ್ ನಡೆಸುತ್ತಿದ್ದು, ತಮ್ಮ ಪತಿ ವಿಜಯ್ ಅವರೊಂದಿಗೆ ಅದೇ ಲಾಡ್ಜ್‌ನಲ್ಲಿ ವಾಸವಿದ್ದರು. ಘಟನೆ ವೇಳೆ ವಿಜಯ್ ಅವರು ಸ್ಥಳದಲ್ಲಿರಲಿಲ್ಲ ಎಂದು ತಿಳಿದುಬಂದಿದೆ.

ಭಾನುವಾರ ಮಧ್ಯಾಹ್ನ ಮೂವರು ಮಹಿಳೆಯರು ಸೇರಿದಂತೆ ಐವರ ತಂಡ ರೂಮ್ ಬುಕ್ ಮಾಡಲು ಲಾಡ್ಜ್'ಗೆ ಬಂದಿದ್ದಾರೆ. ಈ ವೇಳೆ ಪಂಕಜಾ ಅವರು ಸ್ಥಳೀಯ ನಿವಾಸಿಗಳಿಗೆ ಕೊಠಡಿಗಳನ್ನು ನೀಡುವುದಿಲ್ಲ ಎಂದು ಹೇಳಿದ್ದಾರೆ. ಈ ವೇಳೆ ಮಾತಿನ ಚಕಮಕಿ ನಡೆದಿದೆ. ಅಲ್ಲದೆ, ಫ್ಯಾರಿಮಾ, ಅಸ್ಮಾ ಮತ್ತು ನಜ್ಮಾ ಎಂಬ ಮೂವರು ಮಹಿಳೆಯರು ಪಂಕಜಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಅಲ್ಲದೆ, ಮೂವರು ಮಹಿಳೆಯರು ಪಂಕಜಾ ಅವರನ್ನು ಬಲವಂತವಾಗಿ ಆಟೋ ಹತ್ತಿಸಿಕೊಂಡು, ಅಪಹರಣ ನಡೆಸಿದ್ದಾರೆ. ಮಾರ್ಗಮಧ್ಯೆ ಜಾಲಹಳ್ಳಿ ಸಂಚಾರಿ ಪೊಲೀಸರು ಅನುಮಾನಗೊಂಡು ಆಟೋವನ್ನು ನಿಲ್ಲಿಸಿದ್ದಾರೆ. ಈ ವೇಳೆ ಪಂಕಜಾ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಮಹಿಳೆಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.

ತನಿಖೆ ವೇಳೆ ಆರೋಪಿಗಳು ತಾವು ಅಪಹರಣ ಮಾಡಿಲ್ಲ. ರೂಮ್ ನಿರಾಕರಿಸಿದ ಹಿನ್ನೆಲೆಯಲ್ಲಿ ಆಕೆಯನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗುತ್ತಿತ್ತು ಎಂದು ಹೇಳಿದ್ದಾರೆ.

ಈ ಸಂಬಂಧ ಜಾಲಹಳ್ಳಿ ಪೊಲೀಸರು ಅಪಹರಣ ಹಾಗೂ ಹಲ್ಲೆ ಪ್ರಕರಣ ದಾಖಲಿಸಿಕೊಂಡಿದ್ದು, ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಉಳಿದ ಆರೋಪಿಗಳನ್ನು ಸಾದಿಕ್ ಪಾಷಾ ಹಾಗೂ ಜಯರಾಮ್ ಎಂದು ಗುರ್ತಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT