ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ರೂಮ್ ನೀಡಲು ನಿರಾಕರಿಸಿದ ಮಹಿಳಾ ಹೋಟೆಲ್ ಉದ್ಯಮಿಯ ಅಪಹರಣ!

ರೂಂ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ 42 ವರ್ಷದ ಮಹಿಳಾ ಹೋಟೆಲ್ ಉದ್ಯಮಿಯೊಬ್ಬರನ್ನು ಮೂವರು ಮಹಿಳೆಯರು ಸೇರಿದಂತೆ ಐವರ ತಂಡ ಅಪಹರಿಸಿದ ಘಟನೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ರೂಂ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ 42 ವರ್ಷದ ಮಹಿಳಾ ಹೋಟೆಲ್ ಉದ್ಯಮಿಯೊಬ್ಬರನ್ನು ಮೂವರು ಮಹಿಳೆಯರು ಸೇರಿದಂತೆ ಐವರ ತಂಡ ಅಪಹರಿಸಿದ ಘಟನೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪಂಕಜಾ ಅಪಹರಣಕ್ಕೊಳಗಾದ ಮಹಿಳೆಯಾಗಿದ್ದಾರೆ. ಪಂಕಜಾ ಅವರು ಕಳೆದ ನಾಲ್ಕು ವರ್ಷಗಳಿಂದ ಎಂಇಎಸ್ ರಿಂಗ್ ರಸ್ತೆಯಲ್ಲಿ ಡಿಎಂ ರೆಸಿಡೆನ್ಸಿ ಲಾಡ್ಜ್ ನಡೆಸುತ್ತಿದ್ದು, ತಮ್ಮ ಪತಿ ವಿಜಯ್ ಅವರೊಂದಿಗೆ ಅದೇ ಲಾಡ್ಜ್‌ನಲ್ಲಿ ವಾಸವಿದ್ದರು. ಘಟನೆ ವೇಳೆ ವಿಜಯ್ ಅವರು ಸ್ಥಳದಲ್ಲಿರಲಿಲ್ಲ ಎಂದು ತಿಳಿದುಬಂದಿದೆ.

ಭಾನುವಾರ ಮಧ್ಯಾಹ್ನ ಮೂವರು ಮಹಿಳೆಯರು ಸೇರಿದಂತೆ ಐವರ ತಂಡ ರೂಮ್ ಬುಕ್ ಮಾಡಲು ಲಾಡ್ಜ್'ಗೆ ಬಂದಿದ್ದಾರೆ. ಈ ವೇಳೆ ಪಂಕಜಾ ಅವರು ಸ್ಥಳೀಯ ನಿವಾಸಿಗಳಿಗೆ ಕೊಠಡಿಗಳನ್ನು ನೀಡುವುದಿಲ್ಲ ಎಂದು ಹೇಳಿದ್ದಾರೆ. ಈ ವೇಳೆ ಮಾತಿನ ಚಕಮಕಿ ನಡೆದಿದೆ. ಅಲ್ಲದೆ, ಫ್ಯಾರಿಮಾ, ಅಸ್ಮಾ ಮತ್ತು ನಜ್ಮಾ ಎಂಬ ಮೂವರು ಮಹಿಳೆಯರು ಪಂಕಜಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಅಲ್ಲದೆ, ಮೂವರು ಮಹಿಳೆಯರು ಪಂಕಜಾ ಅವರನ್ನು ಬಲವಂತವಾಗಿ ಆಟೋ ಹತ್ತಿಸಿಕೊಂಡು, ಅಪಹರಣ ನಡೆಸಿದ್ದಾರೆ. ಮಾರ್ಗಮಧ್ಯೆ ಜಾಲಹಳ್ಳಿ ಸಂಚಾರಿ ಪೊಲೀಸರು ಅನುಮಾನಗೊಂಡು ಆಟೋವನ್ನು ನಿಲ್ಲಿಸಿದ್ದಾರೆ. ಈ ವೇಳೆ ಪಂಕಜಾ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಮಹಿಳೆಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.

ತನಿಖೆ ವೇಳೆ ಆರೋಪಿಗಳು ತಾವು ಅಪಹರಣ ಮಾಡಿಲ್ಲ. ರೂಮ್ ನಿರಾಕರಿಸಿದ ಹಿನ್ನೆಲೆಯಲ್ಲಿ ಆಕೆಯನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗುತ್ತಿತ್ತು ಎಂದು ಹೇಳಿದ್ದಾರೆ.

ಈ ಸಂಬಂಧ ಜಾಲಹಳ್ಳಿ ಪೊಲೀಸರು ಅಪಹರಣ ಹಾಗೂ ಹಲ್ಲೆ ಪ್ರಕರಣ ದಾಖಲಿಸಿಕೊಂಡಿದ್ದು, ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಉಳಿದ ಆರೋಪಿಗಳನ್ನು ಸಾದಿಕ್ ಪಾಷಾ ಹಾಗೂ ಜಯರಾಮ್ ಎಂದು ಗುರ್ತಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ