ಸಾಂದರ್ಭಿಕ ಚಿತ್ರ 
ರಾಜ್ಯ

ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಅಡುಗೆಯವನ ಬಂಧನ

ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮತ್ತು ಅದನ್ನು ವಿಡಿಯೋ ಮಾಡುತ್ತಿದ್ದ ಆರೋಪದ ಮೇಲೆ ಒಡಿಶಾದ 47 ವರ್ಷದ ಅಡುಗೆ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಹುಬ್ಬಳ್ಳಿ: ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮತ್ತು ಅದನ್ನು ವಿಡಿಯೋ ಮಾಡುತ್ತಿದ್ದ ಆರೋಪದ ಮೇಲೆ ಒಡಿಶಾದ 47 ವರ್ಷದ ಅಡುಗೆ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಆರೋಪಿ ಪ್ರಭಂಜನ ಪಾಲನಿಂದ ಲೈಂಗಿಕ ದೌರ್ಜನ್ಯ ಮತ್ತು ಬೆದರಿಕೆಗೆ ಒಳಗಾದ ಇಬ್ಬರು ಅಪ್ರಾಪ್ತರ ಪೋಷಕರು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪೊಲೀಸರ ಪ್ರಕಾರ, ನಗರದ ಪ್ರಮುಖ ಹೋಟೆಲ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಮೊದಲು ಅಪ್ರಾಪ್ತ ಬಾಲಕರೊಂದಿಗೆ ಸ್ನೇಹ ಬೆಳೆಸುತ್ತಿದ್ದ ಮತ್ತು ತಿಂಡಿ, ಚಾಕೊಲೇಟ್ ಮತ್ತು ಹಣದ ಆಮಿಷ ಒಡ್ಡಿ ಇಲ್ಲಿನ ಸಿದ್ದಲಿಂಗೇಶ್ವರ ಕಾಲೋನಿಯಲ್ಲಿರುವ ತನ್ನ ಬಾಡಿಗೆ ನಿವಾಸಕ್ಕೆ ಕರೆದೊಯ್ಯುತ್ತಿದ್ದ.

ಬಳಿಕ ಅವರನ್ನು ತನ್ನ ಕೋಣೆಗೆ ಕರೆದೊಯ್ದು ಚಾಕುವಿನಿಂದ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಅಸ್ವಾಭಾವಿಕ ಲೈಂಗಿಕ ಕ್ರಿಯೆಗಳಿಗೆ ಒತ್ತಾಯಿಸುತ್ತಿದ್ದ ಆರೋಪಿ, ಮತ್ತೊಬ್ಬ ಹುಡುಗನ ಸಹಾಯದಿಂದಲೇ ಅದನ್ನು ತನ್ನ ಮೊಬೈಲ್ ಫೋನಿನಲ್ಲಿ ವಿಡಿಯೋ ಮಾಡಿಕೊಳ್ಳುತ್ತಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯನ್ನು ಬೇರೆಯವರಿಗೆ ತಿಳಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆರೋಪಿ ಬಾಲಕರಿಗೆ ಬೆದರಿಕೆ ಹಾಕಿದ್ದಾನೆ. ಬಾಲಕರ ಮೇಲೆ ಅನೇಕ ಸಂದರ್ಭಗಳಲ್ಲಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಅವರು ಹೇಳಿದರು.

ಈ ವಿಚಾರ ಸಾರ್ವಜನಿಕರ ಗಮನಕ್ಕೆ ಬರುತ್ತಲೇ, ಸ್ಥಳೀಯರು ಆರೋಪಿಯನ್ನು ಹಿಡಿದು ಥಳಿಸಿದ್ದಾರೆ. ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.

ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377 (ನೈಸರ್ಗಿಕವಲ್ಲದ ಅಪರಾಧಗಳು), 506 (2) (ಕ್ರಿಮಿನಲ್ ಬೆದರಿಕೆ), ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಮತ್ತು ಐಟಿ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT