ಪ್ರವೀಣ್‌ ನೆಟ್ಟಾರು 
ರಾಜ್ಯ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್‌

ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ನ್ಯಾಯಮೂರ್ತಿಗಳಾದ ಎಚ್‌ ಬಿ ಪ್ರಭಾಕರ್‌ ಶಾಸ್ತ್ರಿ ಮತ್ತು ಅನಿಲ್‌ ಕೆ.ಕಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠವು ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಕೆ ಇಸ್ಮಾಯಿಲ್‌ ಶಫಿ(ಆರೋಪಿ 9), ಕೆ ಮೊಹಮ್ಮದ್‌ ಇಕ್ಬಾಲ್‌(ಆರೋಪಿ 10) ಮತ್ತು ಎಂ ಶಾಹೀದ್‌(ಆರೋಪಿ 11) ಜಾಮೀನು ಕೋರಿ ಸಲ್ಲಿಸಿದ್ದ ಕ್ರಿಮಿನಲ್‌ ಮೇಲ್ಮನವಿಯನ್ನು ತಿರಸ್ಕರಿಸಿದೆ.

ಆರೋಪಿಗಳು ಪ್ರಕರಣದಲ್ಲಿ ಸಕ್ರಿಯ ಪಾತ್ರ ವಹಿಸಿರುವುದನ್ನು ತೋರಿಸಲು ಸೂಕ್ತ ಸಾಕ್ಷ್ಯಧಾರಗಳು ಲಭ್ಯವಿದೆ. ಮೃತನ ಮೇಲೆ ದಾಳಿ ನಡೆದ ವೇಳೆ ಸ್ಥಳದಲ್ಲಿ ಈ ಮೂರು ಆರೋಪಿಗಳು ಭೌತಿಕವಾಗಿ ಹಾಜರಲಿಲ್ಲ. ಆದರೆ, ಪ್ರವೀಣ್‌ ನೆಟ್ಟಾರು ಹತ್ಯೆಗೆ ಯೋಜನೆ ರೂಪಿಸಲು ಹಮ್ಮಿಕೊಂಡಿದ್ದ ಸಂಚಿನ ಸಭೆಯಲ್ಲಿ ಭಾಗವಹಿಸಿದ್ದರು ಹಾಗೂ ಹತ್ಯೆ ಯೋಜನೆ ಬಗ್ಗೆ ಚರ್ಚಿಸಿದ್ದರು. ಸಂಚು ರೂಪಿಸಲು ಯಾವುದೇ ಬಹಿರಂಗ ಕ್ರಿಯೆಯನ್ನು ಮಾಡುವ ಅಗತ್ಯವಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ನಾಲ್ವರು ಸಾಕ್ಷಿಗಳ ಹೇಳಿಕೆ ಪ್ರಕಾರ ಆರೋಪಿಗಳು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ತನಿಖಾಧಿಕಾರಿಗಳು ಸಂಗ್ರಹಿಸಿರುವ ಆರೋಪಿಗಳ ಪೋನ್‌ ಕರೆಗಳ ವಿವರಗಳು ಸಹ ಪ್ರಕರಣದಲ್ಲಿ ಮೇಲ್ಮನವಿದಾರ ಆರೋಪಿಗಳು ಪಿತೂರಿ ನಡೆಸುವುದನ್ನು ತೋರಿಸುತ್ತದೆ. ಆರೋಪಿಗಳು ಪ್ರಕರಣದಲ್ಲಿ ನಿರ್ದಿಷ್ಟ, ಸಕ್ರಿಯ ಮತ್ತು ಗಮನಾರ್ಹ ಪಾತ್ರ ನಿರ್ವಹಿಸುವುದನ್ನು ಮೇಲ್ನೋಟಕ್ಕೆ ದೃಢಪಡಿಸುವ ಸಾಕ್ಷ್ಯಗಳು ನ್ಯಾಯಾಲಯದ ಮುಂದಿದೆ ಎಂದು ಪೀಠ ತನ್ನ ಆದೇಶದಲ್ಲಿ ಹೇಳಿದೆ.

ಪ್ರವೀಣ್ ನೆಟ್ಟಾರು ಹತ್ಯೆ
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿ ಸಮಿತಿಯ ಸದಸ್ಯನಾಗಿದ್ದ ಪ್ರವೀಣ್‌ ನೆಟ್ಟಾರು ಅವರು 2022ರ ಜುಲೈ 26ರಂದು ರಾತ್ರಿ 8.30ರ ವೇಳೆ ತಮ್ಮ ಚಿಕನ್ ಅಂಗಡಿಯನ್ನು ಮುಚ್ಚಿ ಮನೆಗೆ ಹೋಗಲು ಅನುವಾಗುತ್ತಿದ್ದಾಗ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT