ಡಿ.ಕೆ ಶಿವಕುಮಾರ್ 
ರಾಜ್ಯ

ಟೆಂಡರ್ ಶ್ಯೂರ್ ರಸ್ತೆ ಅಗೆಯಬೇಡಿ; ನಗರದ ಸೌಂದರ್ಯ ಹೆಚ್ಚಿಸಲು ನೆಲದಡಿಯಲ್ಲಿ ಕೇಬಲ್ ಹಾಕಿ: ಡಿಸಿಎಂ ಸೂಚನೆ

ಟೆಂಡರ್ ಶ್ಯೂರ್ ರಸ್ತೆಗಳಿಗಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗಿದ್ದು, ಕೇಬಲ್ ಹಾಕುವ ಸಲುವಾಗಿ ರಸ್ತೆಗಳನ್ನು ಅಗೆಯದಂತೆ ನೋಡಿಕೊಳ್ಳಿ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರು: ಟೆಂಡರ್ ಶ್ಯೂರ್ ರಸ್ತೆಗಳಿಗಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗಿದ್ದು, ಕೇಬಲ್ ಹಾಕುವ ಸಲುವಾಗಿ ರಸ್ತೆಗಳನ್ನು ಅಗೆಯದಂತೆ ನೋಡಿಕೊಳ್ಳಿ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಸಂತನಗರದ ಅಯ್ಯಪ್ಪ ಸ್ವಾಮಿ ದೇಗುಲದ ಪಕ್ಕದ ಒಳಚರಂಡಿ ಕಾಮಗಾರಿ, ಜಯಮಹಲ್ ಅರಮನೆ ರಸ್ತೆ ಅಗಲೀಕರಣ, ಭೂಗತ ಕೇಬಲ್ ಅಳವಡಿಕೆ ಕಾಮಗಾರಿ ಪರಿಶೀಲಿಸಿದ ಬಳಿಕ ಮಾತನಾಡಿದ ಡಿಸಿಎಂ, ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಟೆಂಡರ್ ಶ್ಯೂರ್ ಕಾಮಗಾರಿ ನಡೆದಿದೆ. ಇನ್ನು ಮುಂದೆ ಯಾರೂ ಟೆಂಡರ್ ಶ್ಯೂರ್ ರಸ್ತೆಗಳನ್ನು ಅಗೆಯಬಾರದು. ಪಕ್ಕದ ಚರಂಡಿಯಿಂದ ಕೇಬಲ್ ಹಾಕಲು ವ್ಯವಸ್ಥೆ ಮಾಡಿದ್ದೇವೆ ಆದರೆ ಯಾರೂ ಬಳಸುತ್ತಿಲ್ಲ. ನಾವು ಈ ವ್ಯವಸ್ಥೆಯನ್ನು ಎಲ್ಲಿ ಸ್ಥಾಪಿಸಿದ್ದೇವೆಯೋ ಅಲ್ಲೆಲ್ಲಾ, ಅದನ್ನು ಕಾನೂನುಬದ್ಧವಾಗಿ ಬಳಸಬೇಕು. ಬೆಂಗಳೂರಿನ ಸೌಂದರ್ಯ ಹೆಚ್ಚಿಸಲು ನೆಲದಡಿಯಲ್ಲಿ ಕೇಬಲ್ ಹಾಕಬೇಕು ಎಂದು ಸಲಹೆ ನೀಡಿದ್ದಾರೆ.

ಇದೇ ವೇಳೆ ಹೊರ ವರ್ತುಲ ರಸ್ತೆಯನ್ನು ಪರಿಶೀಲಿಸಿ ಸಂಚಾರ ಸಮಸ್ಯೆ ಬಗೆಹರಿಸುವ ಕುರಿತು ಚರ್ಚೆ ನಡೆಸಲಾಗುವುದು ಎಂದು ಶಿವಕುಮಾರ್ ತಿಳಿಸಿದರು. ಸೆ.27ರಂದು ಒಆರ್‌ಆರ್‌ನಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಸಂಚಾರ ದಟ್ಟಣೆ ಉಂಟಾಗಿರುವುದ್ದನ್ನು ಇಲ್ಲಿ ಸ್ಮರಿಸಬಹುದು.

ಬಾಕಿ ಉಳಿದಿರುವ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಮತ್ತೆ ನೀರು ಪೋಲಾಗುವ ಘಟನೆಗಳು ಮರುಕಳಿಸಬಾರದು ಎಂದರು. ರಸ್ತೆ  ಗುಂಡಿಗಳ ಬಗ್ಗೆ ಸಾರ್ವಜನಿಕರು ಅಧಿಕಾರಿಗಳಿಗೆ ದೂರು ನೀಡಬಹುದು. ಗುಂಡಿಗಳನ್ನು ಸರಿಪಡಿಸಲು ಬಿಬಿಎಂಪಿ ಹಾಗೂ ಪೊಲೀಸರು ಒಟ್ಟಾಗಿ ಶ್ರಮಿಸಲಿದ್ದಾರೆ. ಈ ಕೆಲಸವನ್ನು ಆದ್ಯತೆಯ ಮೇಲೆ ಮಾಡಬೇಕಾಗಿದೆ ಎಂದು ಅವರು ಹೇಳಿದರು.

ಬಿಬಿಎಂಪಿ ಗುತ್ತಿಗೆದಾರರ ಬಾಕಿ ಬಿಲ್‌ಗಳ ಕುರಿತು ಮಾತನಾಡಿದ ಅವರು, ನಗರೋತ್ಥಾನ ಅನುದಾನದಲ್ಲಿ 5,000 ಕೋಟಿ ವೆಚ್ಚದ 352 ಪ್ಯಾಕೇಜ್ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ಕಾಮಗಾರಿಗಳ ತನಿಖೆಯೂ ಮುಂದುವರಿದು ವರದಿ ಸಲ್ಲಿಸಲಾಗುವುದು. ಬಿಲ್ ಪಾವತಿಗೆ ಸರಕಾರ 675 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಶೇ. 50-75 ರಷ್ಟು ಬಿಲ್‌ಗಳು ಕ್ಲಿಯರ್ ಆಗಿದ್ದು, 432 ಕೋಟಿ ರೂ. ಬಿಬಿಎಂಪಿ ಅನುದಾನವೂ ಬಿಡುಗಡೆಯಾಗಲಿದೆ. ಉಳಿದ ಬಾಕಿಯನ್ನು ಪಾವತಿಸಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ನನಗೆ 'CM ವಿಜಯ್' ಕಂಡ್ರೆ ಅಸೂಯೆ: ಸಾರ್ವಜನಿಕವಾಗಿ ಸತ್ಯ ಒಪ್ಪಿಕೊಂಡ ಆಂಧ್ರ DCM ಪವನ್ ಕಲ್ಯಾಣ್!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ತಮಿಳುನಾಡು ಸರ್ಕಾರದಿಂದ ಮತ್ತೊಂದು ಮಹತ್ವದ ಘೋಷಣೆ: ಸಣ್ಣ ರೈತರ ₹50,000 ವರೆಗಿನೆ ಬೆಳೆ ಸಾಲ ಮನ್ನಾ!

SCROLL FOR NEXT