ಸಂಗ್ರಹ ಚಿತ್ರ 
ರಾಜ್ಯ

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ: ಕೆಆರ್'ಎಸ್ ಡ್ಯಾಮ್ ನಲ್ಲಿ 100 ಅಡಿ ದಾಟಿದ ನೀರಿನ ಸಂಗ್ರಹ

ಕಳೆದ 3 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಸ್ವಲ್ಪ ಮಟ್ಟಿಗೆ ಮಳೆಯಾಗುತ್ತಿದ್ದು, ಇದರ ಪರಿಣಾಮ ಕೆಆರ್'ಎಸ್ ಡ್ಯಾಮ್ ನಲ್ಲಿ ನೀರಿನ ಪ್ರಮಾಣ ಹೆಚ್ಚಿದೆ.

ಮಂಡ್ಯ: ಕಳೆದ 3 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಸ್ವಲ್ಪ ಮಟ್ಟಿಗೆ ಮಳೆಯಾಗುತ್ತಿದ್ದು, ಇದರ ಪರಿಣಾಮ ಕೆಆರ್'ಎಸ್ ಡ್ಯಾಮ್ ನಲ್ಲಿ ನೀರಿನ ಪ್ರಮಾಣ ಹೆಚ್ಚಿದೆ.

ಕಾವೇರಿ ನೀರಾವರಿ ನಿಗಮ ನಿಯಮಿತ (ಸಿಎನ್‌ಎನ್‌ಎಲ್) ಅಧಿಕಾರಿಗಳ ಪ್ರಕಾರ, ಗರಿಷ್ಠ 124.80 ಅಡಿಗಳ ಪೈಕಿ ಜಲಾಶಯದಲ್ಲಿ ಇದೀಗ ನೀರಿನ ಮಟ್ಟ 100.36 ಅಡಿಗೆ ತಲುಪಿದೆ. 49.452 ಟಿಎಂಸಿ ಪೈಕಿ ಜಲಾಶಯದಲ್ಲಿ 23.095 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ. ಜಲಾಶಯದಲ್ಲಿ 9,052 ಕ್ಯೂಸೆಕ್ ಒಳಹರಿವಿದ್ದರೆ, 1,482 ಕ್ಯೂಸೆಕ್ ಹೊರಹರಿವಿದೆ ಎಂದು ಹೇಳಿದ್ದಾರೆ.

ಕೆಲ ತಿಂಗಳುಗಳಿಂದ ಮಳೆಯಿಲ್ಲದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ಸೆಪ್ಟೆಂಬರ್ ನಿಂದ ಡ್ಯಾಮ್ ನಲ್ಲಿ ನೀರಿನ ಮಟ್ಟ ಕುಸಿದಿತ್ತು. ಜೊತೆಗೆ ತಮಿಳುನಾಡಿಗೆ ನೀರು ಹರಿಸಬೇಕಾದ ಅನಿವಾರ್ಯತೆ ಎದುರಾಗಿರುವುದರಿಂದ, ಕಾವೇರಿ ನೀರಿನ ಕುರಿತು ಆತಂಕ ಶುರುವಾಗಿತ್ತು.

ಇದೀಗ ಕೊಂಚ ಮಟ್ಟಿಗೆ ಮಳೆಯಾಗಿರುವುದರಿಂದ ಜಲಾಶಯದಲ್ಲಿ ನೀರಿನ ಮಟ್ಟ 100.36 ಅಡಿಗೆ ತಲುಪಿದೆ. ತಮಿಳುನಾಡಿನ ನೀರಿನ ಖ್ಯಾತೆ ನಡುವೆ ಜಲಾಶಯದಲ್ಲಿ ಒಳಹರಿವು ಕೊಂಚ ಮಟ್ಟಿಗೆ ಏರಿಕೆಯಾಗಿರುವುದು ನಿಟ್ಟಿಸಿರು ಬಿಡುವಂತಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT