ಸಂಗ್ರಹ ಚಿತ್ರ 
ರಾಜ್ಯ

ಪ್ರಾಣಿ ಕಡಿತಕ್ಕೆ ಒಳಗಾದವರಿಗೆ ಉಚಿತ ಲಸಿಕೆ ನೀಡಿ: ಆಸ್ಪತ್ರೆಗಳಿಗೆ ಸರ್ಕಾರ ಸೂಚನೆ

ಪ್ರಾಣಿ ಕಡಿತಕ್ಕೊಳಗಾದವರಿಗೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ‘ಆ್ಯಂಟಿ ರೇಬಿಸ್ ಲಸಿಕೆ’ ಮತ್ತು ‘ರೇಬಿಸ್‌ ಇಮ್ಯುನೋಗ್ಲಾಬ್ಯುಲಿನ್’ ಚುಚ್ಚು ಮದ್ದನ್ನು ಉಚಿತವಾಗಿ ನೀಡಬೇಕು ಎಂದು ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಬೆಂಗಳೂರು: ಪ್ರಾಣಿ ಕಡಿತಕ್ಕೊಳಗಾದವರಿಗೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ‘ಆ್ಯಂಟಿ ರೇಬಿಸ್ ಲಸಿಕೆ’ ಮತ್ತು ‘ರೇಬಿಸ್‌ ಇಮ್ಯುನೋಗ್ಲಾಬ್ಯುಲಿನ್’ ಚುಚ್ಚು ಮದ್ದನ್ನು ಉಚಿತವಾಗಿ ನೀಡಬೇಕು ಎಂದು ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಈ ಸಂಬಂಧ ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ಅವರು ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೋಲೆಯಲ್ಲಿ ರೇಬಿಸ್ ಮಾರಣಾಂತಿಕ ಕಾಯಿಲೆಯಾಗಿದ್ದರೂ ಸಮಯೋಚಿತ ಚಿಕಿತ್ಸೆಯಿಂದ ಪ್ರಾಣ ಉಳಿಸಬಹುದು. 2030ರ ವೇಳೆಗೆ ನಾಯಿ ಕಡಿತದಿಂದ ಬರುವ ರೇಬಿಸ್‌ ರೋಗವನ್ನು ನಿರ್ಮೂಲನೆ ಮಾಡುವ ಗುರಿ ಹೊಂದಲಾಗಿದೆ.

ರಾಜ್ಯದಲ್ಲಿ ಈಗಾಗಲೇ ರೇಬಿಸ್ ರೋಗವನ್ನು ‘ಗುರುತಿಸಬಹುದಾದ ರೋಗ’ ಎಂದು ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಮಾರಣಾಂತಿಕ ರೇಬೀಸ್‌ನಿಂದ ಜೀವರಕ್ಷಿಸಬಲ್ಲ ಔಷಧಿಗಳಾದ ಆ್ಯಂಟಿ ರೇಬೀಸ್ ವ್ಯಾಕ್ಸಿನ್ ಮತ್ತು ರೇಬೀಸ್ ಇಮ್ಯೂನೋಗ್ಲಾಬಿಲಿನ್ ಗಳನ್ನು ಆಸ್ಪತ್ರೆಗೆ ಔಷಧಗಳನ್ನು ಪೂರೈಸುವ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತ (ಕೆಎಸ್‌ಎಂಎಸ್‌ಸಿಎಲ್ )ದ ವಾರ್ಷಿಕ ಇಂಡೆಂಟ್ ಪೂರೈಕೆಯ ಭಾಗವಾಗಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಕಷ್ಟು ದಾಸ್ತಾನು ಲಭ್ಯವಿರುವಂತೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ.

ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ಪರಿಗಣಿಸದೆ ಪ್ರಾಣಿ ಕಡಿತದ ಯಾವುದೇ ಸಂತ್ರಸ್ತರಿಗೆ ಚಿಕಿತ್ಸೆ ನಿರಾಕರಿಸದೆ ಅಗತ್ಯಕ್ಕೆ ಅನುಗುಣವಾಗಿ ಎಆರ್‌ವಿ ಮತ್ತು ಆರ್‌ಐಜಿ ಅನ್ನು ಉಚಿತವಾಗಿ ನೀಡುವಂತೆ ನಿರ್ದೇಶಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT