ಮಸೀದಿ ಬಳಿ ಜನರು ಸೇರಿರುವುದು. 
ರಾಜ್ಯ

ಗಣೇಶ ವಿಸರ್ಜನೆ ವೇಳೆ ಮಸೀದಿಗೆ ಮಂಗಳಾರತಿ ಪ್ರಕರಣ: ಕರ್ತವ್ಯ ಲೋಪವೆಸಗಿದ 3 ಪೊಲೀಸರ ಅಮಾನತು

ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕರ್ತವ್ಯ ಲೋಪ ಎಸಗಿದ ಕಾರಣಕ್ಕಾಗಿ ಮೂವರ ಪೊಲೀಸರನ್ನು ಅಮಾನತು ಮಾಡಲಾಗಿದೆ.

ಕೊಪ್ಪಳ: ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕರ್ತವ್ಯ ಲೋಪ ಎಸಗಿದ ಕಾರಣಕ್ಕಾಗಿ ಮೂವರ ಪೊಲೀಸರನ್ನು ಅಮಾನತು ಮಾಡಲಾಗಿದೆ.

ಗಂಗಾವತಿ ನಗರ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್‌ ಅಡಿವೇಶ ಎಸ್. ಗುದಿಗೊಪ್ಪ, ಸಬ್‌ ಇನ್‌ಸ್ಪೆಕ್ಟರ್‌ ಕಾಮಣ್ಣ ಹಾಗೂ ಹೆಡ್‌ ಕಾನ್‌ಸ್ಟೆಬಲ್‌ ಮರಿಯಪ್ಪ ಅಮಾನತುಗೊಂಡವರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಈ ವಿಷಯ ಖಚಿತಪಡಿಸಿದ್ದಾರೆ.

ಇಲ್ಲಿನ ಎಂ.ಜಿ. ರಸ್ತೆಯಲ್ಲಿರುವ ಜಾಮಿಯಾ ಮಸೀದಿ ಮುಂಭಾಗ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಮಂಗಳವಾರ ರಾತ್ರಿ ಕೆಲವರು ಕುಂಡದಲ್ಲಿ ಬೆಂಕಿಹಚ್ಚಿ, ಕುಂಬಳಕಾಯಿ ಒಡೆದು ಪೂಜೆ ಸಲ್ಲಿಸಿದ್ದರು. ಇದು ಮುಸ್ಲಿಂ ಸಮುದಾಯದವರ ಆಕ್ಷೇಪಕ್ಕೆ ಕಾರಣವಾಗಿ ವಾಗ್ವಾದ ನಡೆದಿತ್ತು. ಕರ್ತವ್ಯದ ವೇಳೆಯಲ್ಲಿಯೇ ಮೆರವಣಿಗೆ ಸಮಯದಲ್ಲಿ ಮರಿಯಪ್ಪ ಅವರನ್ನು ಹೊತ್ತು ಕುಣಿದಿದ್ದ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಈ ಸಂಬಂಧ ನಗರ ಠಾಣೆಯಲ್ಲಿ ಸಮಿತಿಯ ಐವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇದೀಗ ಪರಿಸ್ಥಿತಿ ತಿಳಿಗೊಳಿಸುವಲ್ಲಿ ಹಾಗೂ ಕಾನೂನು ಪಾಲನೆಯಲ್ಲಿ ಲೋಪ ಎಸಗಿದ ಆರೋಪದ ಮೇಲೆ ನಗರ ಠಾಣೆಯ ಮೂವರು ಪೊಲೀಸರ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ಗಂಗಾವತಿ ನಗರ ಠಾಣೆಯ ಪಿಐ ಆಗಿ ಹೆಚ್ಚುವರಿ ಪ್ರಭಾರ ವಹಿಸಿಕೊಳ್ಳುವಂತೆ ಮಂಜುನಾಥ್ ಎಂಬುವರಿಗೆ ಕೊಪ್ಪಳ ಎಸ್​ಪಿ ಸೂಚಿಸಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ಆ ದೃಶ್ಯಕ್ಕೆ ಆಕ್ಷೇಪ!

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

ಕುರ್ಚಿ ಕದನ: ಡಿಕೆಶಿ ಸಿಎಂ ಆಗುವುದು ಯಾವಾಗ?; ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

SCROLL FOR NEXT