ಮಸೀದಿ ಬಳಿ ಜನರು ಸೇರಿರುವುದು. 
ರಾಜ್ಯ

ಗಣೇಶ ವಿಸರ್ಜನೆ ವೇಳೆ ಮಸೀದಿಗೆ ಮಂಗಳಾರತಿ ಪ್ರಕರಣ: ಕರ್ತವ್ಯ ಲೋಪವೆಸಗಿದ 3 ಪೊಲೀಸರ ಅಮಾನತು

ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕರ್ತವ್ಯ ಲೋಪ ಎಸಗಿದ ಕಾರಣಕ್ಕಾಗಿ ಮೂವರ ಪೊಲೀಸರನ್ನು ಅಮಾನತು ಮಾಡಲಾಗಿದೆ.

ಕೊಪ್ಪಳ: ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕರ್ತವ್ಯ ಲೋಪ ಎಸಗಿದ ಕಾರಣಕ್ಕಾಗಿ ಮೂವರ ಪೊಲೀಸರನ್ನು ಅಮಾನತು ಮಾಡಲಾಗಿದೆ.

ಗಂಗಾವತಿ ನಗರ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್‌ ಅಡಿವೇಶ ಎಸ್. ಗುದಿಗೊಪ್ಪ, ಸಬ್‌ ಇನ್‌ಸ್ಪೆಕ್ಟರ್‌ ಕಾಮಣ್ಣ ಹಾಗೂ ಹೆಡ್‌ ಕಾನ್‌ಸ್ಟೆಬಲ್‌ ಮರಿಯಪ್ಪ ಅಮಾನತುಗೊಂಡವರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಈ ವಿಷಯ ಖಚಿತಪಡಿಸಿದ್ದಾರೆ.

ಇಲ್ಲಿನ ಎಂ.ಜಿ. ರಸ್ತೆಯಲ್ಲಿರುವ ಜಾಮಿಯಾ ಮಸೀದಿ ಮುಂಭಾಗ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಮಂಗಳವಾರ ರಾತ್ರಿ ಕೆಲವರು ಕುಂಡದಲ್ಲಿ ಬೆಂಕಿಹಚ್ಚಿ, ಕುಂಬಳಕಾಯಿ ಒಡೆದು ಪೂಜೆ ಸಲ್ಲಿಸಿದ್ದರು. ಇದು ಮುಸ್ಲಿಂ ಸಮುದಾಯದವರ ಆಕ್ಷೇಪಕ್ಕೆ ಕಾರಣವಾಗಿ ವಾಗ್ವಾದ ನಡೆದಿತ್ತು. ಕರ್ತವ್ಯದ ವೇಳೆಯಲ್ಲಿಯೇ ಮೆರವಣಿಗೆ ಸಮಯದಲ್ಲಿ ಮರಿಯಪ್ಪ ಅವರನ್ನು ಹೊತ್ತು ಕುಣಿದಿದ್ದ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಈ ಸಂಬಂಧ ನಗರ ಠಾಣೆಯಲ್ಲಿ ಸಮಿತಿಯ ಐವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇದೀಗ ಪರಿಸ್ಥಿತಿ ತಿಳಿಗೊಳಿಸುವಲ್ಲಿ ಹಾಗೂ ಕಾನೂನು ಪಾಲನೆಯಲ್ಲಿ ಲೋಪ ಎಸಗಿದ ಆರೋಪದ ಮೇಲೆ ನಗರ ಠಾಣೆಯ ಮೂವರು ಪೊಲೀಸರ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ಗಂಗಾವತಿ ನಗರ ಠಾಣೆಯ ಪಿಐ ಆಗಿ ಹೆಚ್ಚುವರಿ ಪ್ರಭಾರ ವಹಿಸಿಕೊಳ್ಳುವಂತೆ ಮಂಜುನಾಥ್ ಎಂಬುವರಿಗೆ ಕೊಪ್ಪಳ ಎಸ್​ಪಿ ಸೂಚಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT