ರೈಲ್ವೇ ಯೋಜನೆಗಳ ಪರಿಶೀಲನೆ ನಡೆಸುತ್ತಿರುವ ರೂಪ್ ನಾರಾಯಣ ಸುಂಕರ್. 
ರಾಜ್ಯ

ರೈಲ್ವೇ ಮಂಡಳಿ ಅಧಿಕಾರಿಗಳಿಂದ ಬೆಂಗಳೂರು ಉಪನಗರ ರೈಲು ಯೋಜನೆ ಸೇರಿ ಹಲವು ಯೋಜನೆಗಳ ಪರಿಶೀಲನೆ

ಬೆಂಗಳೂರು ಉಪನಗರ ರೈಲು ಯೋಜನೆ ಸೇರಿದಂತೆ ನಗರದ ಇತರೆ ರೈಲ್ವೇ ಯೋಜನೆಗಳನ್ನು ರೈಲ್ವೆ ಮಂಡಳಿಯ ಸದಸ್ಯರಾದ  (ಮೂಲಸೌಕರ್ಯ) ರೂಪ್ ನಾರಾಯಣ ಸುಂಕರ್ ಅವರು ಶುಕ್ರವಾರ ಪರಿಶೀಲನೆ ನಡೆಸಿದರು.

ಬೆಂಗಳೂರು: ಬೆಂಗಳೂರು ಉಪನಗರ ರೈಲು ಯೋಜನೆ ಸೇರಿದಂತೆ ನಗರದ ಇತರೆ ರೈಲ್ವೇ ಯೋಜನೆಗಳನ್ನು ರೈಲ್ವೆ ಮಂಡಳಿಯ ಸದಸ್ಯರಾದ  (ಮೂಲಸೌಕರ್ಯ) ರೂಪ್ ನಾರಾಯಣ ಸುಂಕರ್ ಅವರು ಶುಕ್ರವಾರ ಪರಿಶೀಲನೆ ನಡೆಸಿದರು.

ಯೋಜನೆಗಳಿಗೆ ಅಗತ್ಯವಿರುವ ನಿರ್ದಿಷ್ಠ ಭೂ ಲಭ್ಯತೆ ಸಮಸ್ಯೆಗಳ ಪರಿಹರಿಸುವಂತೆ ಬೆಂಗಳೂರು ರೈಲ್ವೇ ವಿಭಾಗ ಮತ್ತು ಉಪನಗರ ರೈಲು ಯೋಜನೆಯ ಕಾಮಗಾರಿ ನಡೆಸುತ್ತಿರುವ ನೋಡಲ್ ಏಜೆನ್ಸಿ ಗಳಿಗೆ ಸೂಚಿಸಲಾಗಿದೆ. ಉಪನಗರ ಯೋಜನೆಯ ಮಾರ್ಗದಲ್ಲಿ 11 ರೈಲ್ವೆ ಕ್ರಾಸಿಂಗ್‌ಗಳಿವೆ. ಕೆಳಸೇತುವೆಗಳನ್ನು ನಿರ್ಮಿಸುವ ಮೂಲಕ ಅವುಗಳನ್ನು ತೆಗೆಯಬೇಕಿದೆ. ರೈಲುಗಳು ಅಡೆತಡೆಗಳಿಲ್ಲದೆ ನಿಯಮಿತವಾಗಿ ಸಂಚರಿಸಲಿದ್ದು, ಈ ಕಾರ್ಯ ವಿಳಂಬವಾಗುವ ಸಾಧ್ಯತೆಗಳಿವೆ. ಲೆವೆಲ್ ಕ್ರಾಸಿಂಗ್ ಅನ್ನು ಸಹ ಬದಲಾಯಿಸಬೇಕಾಗಿದೆ ಎಂದು ರೂಪ್ ನಾರಾಯಣ ಸುಂಕರ್ ಅವರು ಹೇಳಿದ್ದಾರೆ.

ಇದೇ ವೇಳೆ ರೈಲ್ವೇ ಮಂಡಳಿ ಸದಸ್ಯರು ಪುನರಾಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಕಂಟೋನ್ಮೆಂಟ್ ಮತ್ತು ಯಶವಂತಪುರ ನಿಲ್ದಾಣಗಳನ್ನೂ ಪರಿಶೀಲಿಸಿದರು.

ಕಂಟೋನ್ಮೆಂಟ್ ರೈಲ್ವೇ ನಿಲ್ದಾಣದ ಕುರಿತು ಮಾತನಾಡಿದ ಸುಂಕರ್ ಅವರು, ಕಾಮಗಾರಿ ಕಾರ್ಯಕ್ರಮಗಳು ಪ್ರಗತಿಯಲ್ಲಿದೆ. ಡಿಸೆಂಬರ್ 2026 ರೊಳಗೆ ಈ ಕಾರ್ಯ ಪೂರ್ಣಗೊಳ್ಳಲಿದೆ. ಯಶವಂತಪುರ ರೈಲು ನಿಲ್ದಾಣದಲ್ಲಿ ಕೆಲವು ಅಡೆತಡೆಗಳು ಇದ್ದು, ಅವುಗಳು ಇದೀಗ ದೂರಾಗಿವೆ ಎಂದು ತಿಳಿಸಿದರು.

ಯೋಜನೆಗಳ ಪರಿಶೀಲನೆ ಬಳಿಕ ಉನ್ನತ ರೈಲ್ವೇ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಸುಂಕರ್ ಅವರು, ಸುರಕ್ಷತೆಗೆ ಒತ್ತು ನೀಡುವ ಮೂಲಕ ಅಗತ್ಯವಿರುವ ಮೂಲಸೌಕರ್ಯಗಳ ಒದಗಿಸಲು ಎಲ್ಲಾ ಇಲಾಖೆಗಳು ಒಟ್ಟಾಗಿ ಕೆಲಸ ಮಾಡಬೇಕೆಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT