ಶನಿವಾರ ಗದಗ ಜಿಲ್ಲೆಯ ಬರ ಪರಿಸ್ಥಿತಿಯನ್ನು ಅವಲೋಕಿಸಲು ಅಂತರ ಸಚಿವಾಲಯದ ಕೇಂದ್ರ ಅಧ್ಯಯನ ತಂಡದ ಸದಸ್ಯರು ಗದಗ ಜಿಲ್ಲೆಯ ಕೃಷಿ ಭೂಮಿಯನ್ನು ಪರಿಶೀಲಿಸಿದರು 
ರಾಜ್ಯ

ಬರ-ನಷ್ಟ, ಆರ್ಥಿಕ ಅಭದ್ರತೆ: ಈ ಗ್ರಾಮಗಳ ಯುವಕರನ್ನು ಮದುವೆಯಾಗಲು ಹುಡುಗಿಯರೇ ಒಪ್ಪುತ್ತಿಲ್ಲ!

ಹುಡುಗಿಯನ್ನು ಮದುವೆ ಮಾಡಿ ಕೊಡುವಾಗ ಮನೆಯವರು, ಹೆಣ್ಣಿನ ಹೆತ್ತವರು ಮುಖ್ಯವಾಗಿ ಹುಡುಗನ ಆರ್ಥಿಕ ಭದ್ರತೆ ಬಗ್ಗೆ ವಿಚಾರ ಮಾಡುತ್ತಾರೆ. ಆರ್ಥಿಕವಾಗಿ ಸಬಲರಾಗಿಲ್ಲದಿದ್ದರೆ ಮಗಳನ್ನು ಕೊಡಲು ತಂದೆ-ತಾಯಿ ಹಿಂದೇಟು ಹಾಕುತ್ತಾರೆ.

ಗದಗ: ಹುಡುಗಿಯನ್ನು ಮದುವೆ ಮಾಡಿ ಕೊಡುವಾಗ ಮನೆಯವರು, ಹೆಣ್ಣಿನ ಹೆತ್ತವರು ಮುಖ್ಯವಾಗಿ ಹುಡುಗನ ಆರ್ಥಿಕ ಭದ್ರತೆ ಬಗ್ಗೆ ವಿಚಾರ ಮಾಡುತ್ತಾರೆ. ಆರ್ಥಿಕವಾಗಿ ಸಬಲರಾಗಿಲ್ಲದಿದ್ದರೆ ಮಗಳನ್ನು ಕೊಡಲು ತಂದೆ-ತಾಯಿ ಹಿಂದೇಟು ಹಾಕುತ್ತಾರೆ.

ಗದಗ ಜಿಲ್ಲೆಯಲ್ಲಿ ಇದೇ ವಿಷಯಕ್ಕೆ ಕೃಷಿ ಕೆಲಸದಲ್ಲಿ ತೊಡಗಿರುವ ಯುವಕರಿಗೆ ಮದುವೆಯಾಗಲು ಹುಡುಗಿ ಸಿಗುತ್ತಿಲ್ಲ. ಆರ್ಥಿಕ ಅಭದ್ರತೆಯಿಂದಾಗಿ ಬಹುತೇಕ ಪಾಲಕರು ತಮ್ಮ ಹೆಣ್ಣು ಮಕ್ಕಳನ್ನು ಕೃಷಿಕರಿಗೆ ಮದುವೆ ಮಾಡಿ ಕೊಡಲು ಹಿಂದೇಟು ಹಾಕುತ್ತಿದ್ದು, ಗದಗ ಜಿಲ್ಲೆಯ ರೈತರು ಮದುವೆಯಾಗುವುದು ಕಷ್ಟವಾಗಿದೆ.

ಈ ಪ್ರದೇಶದಲ್ಲಿ ಇದು ಹೊಸ ವಿಷಯವಲ್ಲವಾದರೂ, ಮೊನ್ನೆ ಶುಕ್ರವಾರ ಗದಗ ಗ್ರಾಮಗಳಿಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿದ ಸಂದರ್ಭದಲ್ಲಿ ಈ ಸಮಸ್ಯೆ ಪ್ರಸ್ತಾಪವಾಗಿದೆ. ಗೊಜನೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಮೂರು ವರ್ಷಗಳಿಂದ ಬರಗಾಲದ ಕಾರಣ ಕೆಲವೇ ಕೆಲವು ಮದುವೆಗಳು ನಡೆದಿವೆ ಎಂದು ರೈತರು ಬರ ಅಧ್ಯಯನ ತಂಡಕ್ಕೆ ತಿಳಿಸಿದರು.

ಹವಾಮಾನ ವೈಪರೀತ್ಯದಿಂದ ಹಲವು ವರ್ಷಗಳಿಂದ ಆರ್ಥಿಕ ನಷ್ಟ ಅನುಭವಿಸುತ್ತಿರುವ ರೈತರು ತಮ್ಮ ಹೆಣ್ಣು ಮಕ್ಕಳನ್ನು ರೈತರಿಗೆ ಮದುವೆ ಮಾಡಿ ಕೊಡುತ್ತಿಲ್ಲ.  ಕೆಲವು ರೈತರು ಸರ್ಕಾರದಿಂದ ಯಾವುದೇ ಸಹಾಯವನ್ನು ಪಡೆದುಕೊಂಡಿಲ್ಲ, ಇನ್ನು ಕೆಲವರು ವಲಸೆ ಹೋಗುವ ಯೋಜನೆ ಇದೆ ಎಂದರು. 

ಕಳೆದ ಮೂರು ವರ್ಷಗಳಲ್ಲಿ, ಯುವಕರ ಕೃಷಿ ಹಿನ್ನೆಲೆಯಿಂದಾಗಿ ಬಹುತೇಕ ಎಲ್ಲಾ ಮದುವೆಯ ಪ್ರಸ್ತಾಪಗಳನ್ನು ರದ್ದುಗೊಂಡಿವೆ. ಶಿರಹಟ್ಟಿ, ಮುಂಡರಗಿ, ಲಕ್ಷ್ಮೇಶ್ವರ, ರೋಣ ಬಹುತೇಕ ಗ್ರಾಮಗಳಲ್ಲಿ ಇದೇ ಸ್ಥಿತಿ ಇದೆ. ಗಜೇಂದ್ರಗಡ ತಾಲೂಕುಗಳಲ್ಲಿ ಗೊಜನೂರು ಮತ್ತು ಸುತ್ತಮುತ್ತಲಿನ ಗ್ರಾಮೀಣ ಭಾಗದ ರೈತರು ಕಳೆದ ಮೂರ್ನಾಲ್ಕು ವರ್ಷಗಳಿಂದ ಸತತವಾಗಿ ನಷ್ಟ ಅನುಭವಿಸಿದ್ದಾರೆ. 

ಕಳೆದ ವಾರ ಹೆಣ್ಣು ನೋಡುವ ಶಾಸ್ತ್ರಕ್ಕೆ ಹೋಗಿದ್ದ ರೈತನ ತಾಯಿಯೊಬ್ಬರು, ಹುಡುಗಿಯ ಪೋಷಕರು ತನ್ನ ಮಗನಿಗೆ ಕೆಲಸ ಹುಡುಕಲು ಹೇಳುವಂತೆ ಕೇಳಿದರು. ನಂತರವೇ ಅವರು ಮದುವೆಗೆ ಸಿದ್ಧರಾಗುತ್ತಾರೆ ಎನ್ನುತ್ತಾರೆ ಎಂದು ತಮ್ಮ ಸಮಸ್ಯೆಯನ್ನು ಬಿಚ್ಚಿಟ್ಟರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT