ಸಾಂದರ್ಭಿಕ ಚಿತ್ರ 
ರಾಜ್ಯ

ಇಸ್ರೇಲ್- ಹಮಾಸ್ ಯುದ್ಧ: ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ರಾಜ್ಯದ ಮುಖ್ಯಮಂತ್ರಿ ಕಾರ್ಯಾಲಯ ಮನವಿ

ಇಸ್ರೇಲ್-ಹಮಾಸ್ ಯುದ್ಧವು ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಎಲ್ಲಾ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ಕರ್ನಾಟಕ ಮುಖ್ಯಮಂತ್ರಿ ಕಾರ್ಯಾಲಯ ವಿನಂತಿಸಿದೆ.

ಬೆಂಗಳೂರು: ಇಸ್ರೇಲ್-ಹಮಾಸ್ ಯುದ್ಧವು ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಎಲ್ಲಾ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ಕರ್ನಾಟಕ ಮುಖ್ಯಮಂತ್ರಿ ಕಾರ್ಯಾಲಯ ವಿನಂತಿಸಿದೆ.

"ಇಸ್ರೇಲ್‌ನಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್‌ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳ ಸೂಚನೆಗಳು ಮತ್ತು ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ವಿನಂತಿಸಲಾಗಿದೆ.  ದಯವಿಟ್ಟು ಹೆಚ್ಚಿನ ಜಾಗರೂಕತೆಯನ್ನು ವಹಿಸುತ್ತಾ, ಅನಗತ್ಯ ಪ್ರಯಾಣಗಳನ್ನು ತಪ್ಪಿಸಿ ಮತ್ತು ಸುರಕ್ಷತಾ ಆಶ್ರಯಗಳ ಹತ್ತಿರ ಇರಬೇಕಾಗಿ ಮನವಿ ಮಾಡಲಾಗಿದೆ. 

ಹೆಚ್ಚಿನ ಮಾಹಿತಿಗಾಗಿ ಇಸ್ರೇಲಿ ಹೋಮ್ ಫ್ರಂಟ್ ಕಮಾಂಡ್ ವೆಬ್‌ಸೈಟ್ https:// www.org.il/en ಅಥವಾ ಅವರ ಸಿದ್ಧತೆ ಕರಪತ್ರವನ್ನು ನೋಡಿ. ತುರ್ತು ಸಂದರ್ಭದಲ್ಲಿ ಮೊಬೈಲ್ ನಂಬರ್ 97235226748 ಸಂಪರ್ಕಿಸಿ ಅಥವಾ consl. telaviv@mea.gov.in ನಲ್ಲಿ ಇ- ಮೇಲ್ ಸಂದೇಶ ಕಳುಹಿಸಿ, ಯಾವುದೇ ಹೆಚ್ಚಿನ ಮಾರ್ಗದರ್ಶನಕ್ಕಾಗಿ ರಾಯಭಾರ ಕಚೇರಿಯ ಸಿಬ್ಬಂದಿಯನ್ನು ಸಂಪರ್ಕಿಸಿ ಎಂದು ತಿಳಿಸಲಾಗಿದೆ.

ಇಸ್ರೇಲ್‌ನಲ್ಲಿರುವ ತನ್ನ ನಾಗರಿಕರ ಸುರಕ್ಷತೆಗಾಗಿ ವಿದೇಶಾಂಗ ವ್ಯವಹಾರಗಳ ಸಚಿವರೊಂದಿಗೆ ನಿಕಟವಾಗಿ ಕಾರ್ಯ ನಿರ್ವಹಿಸುತ್ತಿರುವುದಾಗಿ ಸಿಎಂ ಕಚೇರಿ ಎಕ್ಸ್ ಖಾತೆಯಲ್ಲಿ ವಿವರಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ, ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ: 27 ಕೋಟಿ ರೂ. ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!