ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ದಾಳಿ ಮಾಡಿ, ಶವವನ್ನು ಕಾಡಿಗೆ ಎಳೆದೊಯ್ದ ಕರಡಿ!

ಹೊಲದಲ್ಲಿ ಕೆಲಸ ಮಾಡುವಾಗ ಕರಡಿ ದಾಳಿಗೆ ಸಿಲುಕಿ ರೈತ ಸಾವಿಗೀಡಾಗಿರುವ ಘಟನೆ ಸೋಮವಾರ ಬೆಳಗಾವಿ ಜಿಲ್ಲೆಯ ಖಾನಾಪುರ ಸಮೀಪದ ಘೋಶೆ ಬದ್ರುಕ ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು 63 ವರ್ಷದ ಭೀಕಾಜಿ ಮಿರಾಶಿ ಎಂದು ಗುರುತಿಸಲಾಗಿದೆ. 

ಬೆಳಗಾವಿ: ಹೊಲದಲ್ಲಿ ಕೆಲಸ ಮಾಡುವಾಗ ಕರಡಿ ದಾಳಿಗೆ ಸಿಲುಕಿ ರೈತ ಸಾವಿಗೀಡಾಗಿರುವ ಘಟನೆ ಸೋಮವಾರ ಬೆಳಗಾವಿ ಜಿಲ್ಲೆಯ ಖಾನಾಪುರ ಸಮೀಪದ ಘೋಶೆ ಬದ್ರುಕ ಗ್ರಾಮದಲ್ಲಿ ನಡೆದಿದೆ.

ಮೃತ ರೈತನನ್ನು 63 ವರ್ಷದ ಭೀಕಾಜಿ ಮಿರಾಶಿ ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕರಡಿ ದಾಳಿ ನಡೆಸಿದೆ. ಈ ವೇಳೆ ಹೊಲದಲ್ಲಿ ಇತರರು ಕೂಡ ಕೆಲಸ ಮಾಡುತ್ತಿದ್ದರು. ಇದನ್ನು ಲೆಕ್ಕಿಸದ ಕರಡಿ ದಾಳಿ ಮಾಡಿ, ರೈತನ ದೇಹವನ್ನು ಎರಡು ಕಿಲೋಮೀಟರ್ ದೂರದವರೆಗೆ ಅರಣ್ಯಕ್ಕೆ ಎಳೆದೊಯ್ದಿದೆ.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಇತರರ ಸಮ್ಮುಖದಲ್ಲಿಯೇ ಕರಡಿ ರೈತನ ಮೇಲೆ ದಾಳಿ ಮಾಡಿದೆ. ಈ ವೇಳೆ ಅವರು ಗಲಾಟೆ ಮಾಡಿ, ಕಲ್ಲು ಎಸೆದರೂ ಪ್ರಯೋಜನವಾಗಿಲ್ಲ. 

ಭಾನುವಾರ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಹಾಗೂ ಭಯ ಮೂಡಿಸಿದೆ. ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಹಾಗೂ ಕಾಡುಪ್ರಾಣಿಗಳು ಗ್ರಾಮಗಳಿಗೆ ನುಗ್ಗದಂತೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT