ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ದಾಳಿ ಮಾಡಿ, ಶವವನ್ನು ಕಾಡಿಗೆ ಎಳೆದೊಯ್ದ ಕರಡಿ!

ಹೊಲದಲ್ಲಿ ಕೆಲಸ ಮಾಡುವಾಗ ಕರಡಿ ದಾಳಿಗೆ ಸಿಲುಕಿ ರೈತ ಸಾವಿಗೀಡಾಗಿರುವ ಘಟನೆ ಸೋಮವಾರ ಬೆಳಗಾವಿ ಜಿಲ್ಲೆಯ ಖಾನಾಪುರ ಸಮೀಪದ ಘೋಶೆ ಬದ್ರುಕ ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು 63 ವರ್ಷದ ಭೀಕಾಜಿ ಮಿರಾಶಿ ಎಂದು ಗುರುತಿಸಲಾಗಿದೆ. 

ಬೆಳಗಾವಿ: ಹೊಲದಲ್ಲಿ ಕೆಲಸ ಮಾಡುವಾಗ ಕರಡಿ ದಾಳಿಗೆ ಸಿಲುಕಿ ರೈತ ಸಾವಿಗೀಡಾಗಿರುವ ಘಟನೆ ಸೋಮವಾರ ಬೆಳಗಾವಿ ಜಿಲ್ಲೆಯ ಖಾನಾಪುರ ಸಮೀಪದ ಘೋಶೆ ಬದ್ರುಕ ಗ್ರಾಮದಲ್ಲಿ ನಡೆದಿದೆ.

ಮೃತ ರೈತನನ್ನು 63 ವರ್ಷದ ಭೀಕಾಜಿ ಮಿರಾಶಿ ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕರಡಿ ದಾಳಿ ನಡೆಸಿದೆ. ಈ ವೇಳೆ ಹೊಲದಲ್ಲಿ ಇತರರು ಕೂಡ ಕೆಲಸ ಮಾಡುತ್ತಿದ್ದರು. ಇದನ್ನು ಲೆಕ್ಕಿಸದ ಕರಡಿ ದಾಳಿ ಮಾಡಿ, ರೈತನ ದೇಹವನ್ನು ಎರಡು ಕಿಲೋಮೀಟರ್ ದೂರದವರೆಗೆ ಅರಣ್ಯಕ್ಕೆ ಎಳೆದೊಯ್ದಿದೆ.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಇತರರ ಸಮ್ಮುಖದಲ್ಲಿಯೇ ಕರಡಿ ರೈತನ ಮೇಲೆ ದಾಳಿ ಮಾಡಿದೆ. ಈ ವೇಳೆ ಅವರು ಗಲಾಟೆ ಮಾಡಿ, ಕಲ್ಲು ಎಸೆದರೂ ಪ್ರಯೋಜನವಾಗಿಲ್ಲ. 

ಭಾನುವಾರ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಹಾಗೂ ಭಯ ಮೂಡಿಸಿದೆ. ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಹಾಗೂ ಕಾಡುಪ್ರಾಣಿಗಳು ಗ್ರಾಮಗಳಿಗೆ ನುಗ್ಗದಂತೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT