ಸಾಂದರ್ಭಿಕ ಚಿತ್ರ 
ರಾಜ್ಯ

ಚಿಕ್ಕಮಗಳೂರು: 3 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ರೈತ ಬೆಳೆ ಹಾನಿಗೆ ಬೇಸತ್ತು ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸೋಮವಾರ ಮಳೆಯ ವೈಫಲ್ಯದಿಂದ ಬೆಳೆ ಹಾನಿ ಉಂಟಾಗಿದ್ದಕ್ಕೆ ಬೇಸತ್ತು 55 ವರ್ಷದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಡೂರು ತಾಲೂಕಿನ ಲಿಂಗದಹಳ್ಳಿ ನಿವಾಸಿ ಕೃಷ್ಣಾನಾಯ್ಕ್ ಎಂಬುವವರು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ 

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಸೋಮವಾರ ಮಳೆಯ ವೈಫಲ್ಯದಿಂದ ಬೆಳೆ ಹಾನಿ ಉಂಟಾಗಿದ್ದಕ್ಕೆ ಬೇಸತ್ತು 55 ವರ್ಷದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಕಡೂರು ತಾಲೂಕಿನ ಲಿಂಗದಹಳ್ಳಿ ನಿವಾಸಿ ಕೃಷ್ಣಾನಾಯ್ಕ್ ಎಂಬುವವರು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

3 ಲಕ್ಷ ಸಾಲ ಮಾಡಿ ರಾಗಿ, ಜೋಳದ ಬೆಳೆಗಳನ್ನು ಬೆಳೆದಿದ್ದರು. ಆದರೆ, ಮಳೆಯ ಅಭಾವದಿಂದ ಬೆಳೆಗಳು ನಾಶವಾಗಿದ್ದು, ಇದರಿಂದ ನೊಂದ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಡೂರು ತಾಲೂಕಿನಲ್ಲಿಯೇ ಕಳೆದ 40 ದಿನಗಳಲ್ಲಿ ರೈತರ ಐದನೇ ಆತ್ಮಹತ್ಯೆ ಪ್ರಕರಣ ಇದಾಗಿದೆ.

ಈ ಸಂಬಂಧ ಸಖರಾಯಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕನ್ನುಬರಪೀಡಿತ ಎಂದು ಘೋಷಿಸಲಾಗಿದೆ. ರಾಜ್ಯದಲ್ಲಿ ಆತ್ಮಹತ್ಯೆಗಳ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ರೈತರಿಗಾಗಿ ಸಹಾಯವಾಣಿಯನ್ನು ತೆರೆದಿದ್ದಾರೆ.

ಕರ್ನಾಟಕದಲ್ಲಿ ಕಳೆದ 18 ತಿಂಗಳಲ್ಲಿ ಬೆಳೆ ನಷ್ಟದಿಂದ ಒಟ್ಟು 1,219 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ 236 ತಾಲೂಕುಗಳ ಪೈಕಿ 194 ತಾಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದ್ದು, 4,860 ಕೋಟಿ ರೂ. ಗಳ ಪರಿಹಾರ ಒದಗಿಸುವಂತೆ ಕೇಂದ್ರ ಸರ್ಕಾರವನ್ನು ಕೇಳಿದೆ.

ಸುಮಾರು 42 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ 30,000 ಕೋಟಿ ರೂ. ಮೌಲ್ಯದ ಬೆಲೆ ಹಾನಿ ಸಂಭವಿಸಿದೆ. ಸದ್ಯ ಕೇಂದ್ರ ಅಧ್ಯಯನ ತಂಡ ರಾಜ್ಯದ 11 ಜಿಲ್ಲೆಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಅವಲೋಕಿಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT