ಡಾಪ್ಲರ್​ ರಾಡಾರ್ 
ರಾಜ್ಯ

ರಾಜ್ಯದಲ್ಲಿ ಡಾಪ್ಲರ್​ ರಾಡಾರ್ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸಂಸದ ಈರಣ್ಣ ಕಡಾಡಿ ಮನವಿ

ರಾಜ್ಯದಲ್ಲಿ ನಿಖರವಾದ ಹವಾಮಾನ ಮೇಲ್ವಿಚಾರಣೆ ಮತ್ತು ಮುನ್ಸೂಚನೆ ನೀಡುವ ಡಾಪ್ಲರ್ ಹವಾಮಾನ ರಾಡಾರ್ ವ್ಯವಸ್ಥೆಯ ಅಗತ್ಯವನ್ನು ಮನಗಂಡು ಬೆಳಗಾವಿಯ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರಕ್ಕೆ ಮನವಿಯೊಂದನ್ನು ಸಲ್ಲಿಸಿದ್ದಾರೆ.

ಬೆಳಗಾವಿ: ರಾಜ್ಯದಲ್ಲಿ ನಿಖರವಾದ ಹವಾಮಾನ ಮೇಲ್ವಿಚಾರಣೆ ಮತ್ತು ಮುನ್ಸೂಚನೆ ನೀಡುವ ಡಾಪ್ಲರ್ ಹವಾಮಾನ ರಾಡಾರ್ ವ್ಯವಸ್ಥೆಯ ಅಗತ್ಯವನ್ನು ಮನಗಂಡು ಬೆಳಗಾವಿಯ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರಕ್ಕೆ ಮನವಿಯೊಂದನ್ನು ಸಲ್ಲಿಸಿದ್ದಾರೆ.

ಈರಣ್ಣ ಕಡಾಡಿ ಅವರು ಇತ್ತೀಚೆಗೆ ನವದೆಹಲಿಯಲ್ಲಿ ಕೇಂದ್ರ ಭೂ ವಿಜ್ಞಾನ ಸಚಿವ ಕಿರಣ್ ರಿಜಿಜು ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಕರ್ನಾಟಕವು ಕೃಷಿ-ಸಮೃದ್ಧ ರಾಜ್ಯವಾಗಿದ್ದು, ವೈವಿಧ್ಯಮಯ ಭೌಗೋಳಿಕ ವಲಯಗಳನ್ನು ಹೊಂದಿದೆ. ಇದು ಅನಿರೀಕ್ಷಿತ ಹವಾಮಾನ ಮಾದರಿಗಳಿಗೆ ಒಳಗಾಗುತ್ತದೆ. ದೇಶದಲ್ಲಿ ಎರಡನೇ ಅತಿ ಹೆಚ್ಚು ಮಳೆ ಬೀಳುವ ತಾಣವಾಗಿದ್ದರೂ, ನಮ್ಮ ರಾಜ್ಯದಲ್ಲಿ ಪ್ರಸ್ತುತ ನಿಖರವಾದ ಹವಾಮಾನ ಮೇಲ್ವಿಚಾರಣೆ ಮತ್ತು ಮುನ್ಸೂಚನೆಯನ್ನು ಖಾತ್ರಿಪಡಿಸುವ ನಿರ್ಣಾಯಕ ಸಾಧನ (ಡಾಪ್ಲರ್ ಹವಾಮಾನ ರಾಡಾರ್) ಕೊರತೆಯಿದೆ. ಪ್ರಸ್ತುತ, ಕರ್ನಾಟಕದಾದ್ಯಂತ ಒಂದೇ ಒಂದು ಡಿಡಬ್ಲ್ಯೂಆರ್ ವ್ಯವಸ್ಥೆ ಇಲ್ಲ ಎಂದು ಕೇಂದ್ರ ಸಚಿವರಿಗೆ ತಿಳಿಸಿದ್ದಾರೆ.

ಕರ್ನಾಟಕಕ್ಕೆ ಹತ್ತಿರದ ಡಾಪ್ಲರ್ ಗೋವಾದಲ್ಲಿದೆ. ಸಕಾಲಿಕ ಹವಾಮಾನ ಮಾಹಿತಿಗಾಗಿ ನಾವು ನೆರೆಯ ರಾಜ್ಯದ ಮೇಲೆ ಹೆಚ್ಚು ಅವಲಂಬಿತರಾಗಿದ್ದೇವೆ. ಹೀಗಾಗಿ ಕುಂದಾಪುರ, ಬೆಳಗಾವಿ, ರಾಯಚೂರು ಮತ್ತು ಬೆಂಗಳೂರಿನಲ್ಲಿ ಡಾಪ್ಲರ್ ರೇಡಾರ್​ಗಳನ್ನು ಸ್ಥಾಪಸಿಬೇಕೆಂದು ಮನವಿ ಮಾಡಿದರು.

ಪ್ರಧಾನಿ ನರೇಂದ್ರ ಮೋದಿಯವರ ‘ಆತ್ಮ ನಿರ್ಭರ್ ಭಾರತ್’ ಉಪಕ್ರಮದ ಅಡಿಯಲ್ಲಿ ಭಾರತದಲ್ಲಿ ಡಾಪ್ಲರ್ ರೇಡಾರ್​​ಗಳನ್ನು ತಯಾರಿಸಲಾಗುತ್ತಿದೆ. ರಿಜಿಜು ಅವರು ಪತ್ರಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ಈರಣ್ಣ ಕಡಾಡಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT