ಬಿಗ್ ಬಾಸ್ ಮನೆ ಪ್ರವೇಶಿಸಿದ ಶಾಸಕ ಪ್ರದೀಪ್ ಈಶ್ವರ್ 
ರಾಜ್ಯ

ಒಬ್ಬ ಎಂಎಲ್‌ಎ ಬಿಗ್ ಬಾಸ್‌ಗೆ ಹೋಗಿ ಕುಣಿದಾಡಿರುವುದು ಇದೇ ಮೊದಲು, ಪ್ರದೀಪ್ ಈಶ್ವರ್ ಚಿಕ್ಕಬಳ್ಳಾಪುರದ ಮಾನ ಮರ್ಯಾದೆ ಕಳೆದಿದ್ದಾರೆ: ಡಾ ಸುಧಾಕರ್

ಕನ್ನಡ ಬಿಗ್ ಬಾಸ್ ಸೀಸನ್ 10’ ಆರಂಭ ಆಗಿದೆ. ವಿವಿಧ ಸ್ಪರ್ಧಿಗಳು ದೊಡ್ಮನೆಗೆ ಎಂಟ್ರಿ ನೀಡಿದ್ದಾರೆ. ಒಂದು ದಿನ ತಡವಾಗಿ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರು ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದಾರೆ. 

ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಸನ್ 10’ ಆರಂಭ ಆಗಿದೆ. ವಿವಿಧ ಸ್ಪರ್ಧಿಗಳು ದೊಡ್ಮನೆಗೆ ಎಂಟ್ರಿ ನೀಡಿದ್ದಾರೆ. ಒಂದು ದಿನ ತಡವಾಗಿ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರು ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದಾರೆ. 

ಅವರ ಎಂಟ್ರಿ ಅನೇಕರಿಗೆ ಅಚ್ಚರಿ ತಂದಿದೆ. ಎಂಎಲ್​ಎ ಆಗಿ ದೊಡ್ಮನೆಗೆ ತೆರಳಿರೋ ಬಗ್ಗೆ ಕೆಲವರು ಅಪಸ್ವರ ತೆಗೆದಿದ್ದಾರೆ. ಅವರು ಬಿಗ್ ಬಾಸ್ ಮನೆಗೆ ಕೆಲವು ದಿನಗಳ ಅತಿಥಿಯಾಗಿ ಹೋಗಿದ್ದಾರೆಯೋ ಅಥವಾ ಉಳಿದ ಸ್ಪರ್ಧಿಗಳಂತೆಯೇ ಅವರು ಇರುತ್ತಾರಾ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ. 

ಈ ವರ್ಷ ವಿಧಾನಸಭೆ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ಪ್ರಬಲ ಪ್ರತಿಸ್ಪರ್ಧಿ ಬಿಜೆಪಿಯ ಡಾಕ್ಟರ್ ಸುಧಾಕರ್ ಅವರನ್ನು ಸೋಲಿಸಿದ್ದಾರೆ. ಈ ಬಗ್ಗೆ ಇಂದು ಸುದ್ದಿಗೋಷ್ಠಿಯಲ್ಲಿ ಡಾ ಸುಧಾಕರ್ ಪ್ರದೀಪ್ ಈಶ್ವರ್ ಅವರನ್ನು ಲೇವಡಿ ಮಾಡಿದ್ದಾರೆ.

ಒಬ್ಬ ರಾಜಕಾರಣಿ, ಜನಪ್ರತಿನಿಧಿಯಾಗಿ ಶಾಸಕರಾಗಿ ಈ ರೀತಿಯ ಶೋಗೆ ಹೋಗಿದ್ದು ಇದೆ ಮೊದಲು, ಬಿಗ್ ಬಾಸ್‌ಗೆ ಹೋಗುವ ಮೂಲಕ ನಗೆಪಾಟೀಲಿಗೆ ಈಡಾಗಿದ್ದಾರೆ. ಒಬ್ಬ ಎಂಎಲ್‌ಎ ಬಿಗ್ ಬಾಸ್‌ಗೆ ಹೋಗಿ ಕುಣಿದಾಡಿರುವುದು ಇದೇ ಮೊದಲು. ಇದೊಂದು ನಾಚಿಕೆಗೇಡಿನ ಸಂಗತಿ. ಬಿಗ್ ಬಾಸ್‌ನಲ್ಲಿ ಭಾಗಿಯಾಗುವ ಮೂಲಕ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾನ ಮರ್ಯಾದೆ ಕಳೆದಿದ್ದಾರೆ ಎಂದು ಸುಧಾಕರ್ ವ್ಯಂಗ್ಯವಾಡಿದರು.

ಆಯ್ಕೆ ತಪ್ಪು ಎಂದು ಜನರಿಗೆ ಮನವರಿಕೆಯಾಗಿದೆ: ಚಿಕ್ಕಬಳ್ಳಾಪುರ ಕ್ಷೇತ್ರದ ಹೆಸರನ್ನು ಹಾಳು ಮಾಡಿದ್ದಾರೆ. ಇಂತಹ ವ್ಯಕ್ತಿಯನ್ನು ಆಯ್ಕೆ‌ ಮಾಡಿದ ಜನರಿಗೆ ಆಗಲೇ ಮನವರಿಕೆಯಾಗಿದೆ.‌ ನಾವು ತಪ್ಪು ಮಾಡಿದ್ದೇವೆ ಎಂದು ಜನರಿಗೆ ಅರಿವಾಗಿದೆ. ಮುಂದಿನ ದಿನಗಳಲ್ಲಿ ಅವರಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT