ಬೆಂಗಳೂರು ಪೊಲೀಸ್ ಆಯುಕ್ತ 
ರಾಜ್ಯ

ಗಣೇಶ ವಿಸರ್ಜನಾ ಮೆರವಣಿಗೆಗೆ ಅವಕಾಶ ನೀಡದಿರಲು ಬೆಂಗಳೂರು ಪೊಲೀಸರ ನಿರ್ಧಾರ

ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಇತ್ತೀಚಿನ ದಿನಗಳಲ್ಲಿ ಗಲಭೆ, ಅಹಿತಕರ ಘಟನೆಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಗಣೇಶ ವಿಸರ್ಜನಾ ಮೆರವಣಿಗೆಗೆ ಅನುಮತಿ ನೀಡದೇ ಇರಲು ನಿರ್ಧರಿಸಿದ್ದಾರೆ.

ನವದೆಹಲಿ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಇತ್ತೀಚಿನ ದಿನಗಳಲ್ಲಿ ಗಲಭೆ, ಅಹಿತಕರ ಘಟನೆಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಗಣೇಶ ವಿಸರ್ಜನಾ ಮೆರವಣಿಗೆಗೆ ಅನುಮತಿ ನೀಡದೇ ಇರಲು ನಿರ್ಧರಿಸಿದ್ದಾರೆ.
 
ನರದಾದ್ಯಂತ ಮೆರವಣಿಗೆ, ಡಿಜೆ ನೃತ್ಯಗಳಿಗೆ ಅನುಮತಿ ನೀಡದೇ ಇರಲು ಎಲ್ಲಾ ಪೊಲೀಸ್ ಠಾಣೆಗಳಿಗೆ ಪೊಲೀಸ್ ಆಯುಕ್ತ ಬಿ ದಯಾನಂದ್ ಸೂಚನೆ ನೀಡಿದ್ದಾರೆ. 

ಒಂದು ವೇಳೆ ಅನುಮತಿ ಇಲ್ಲದೇ ಗಣೇಶ ಮೆರವಣಿಗೆ ನಡೆದದ್ದೇ ಆದಲ್ಲಿ ಆ ಘಟನೆ ನಡೆದ ವ್ಯಾಪ್ತಿಯ ಇನ್ಸ್ ಪೆಕ್ಟರ್ ನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ದಯಾನಂದ್ ಎಚ್ಚರಿಕೆ ನೀಡಿದ್ದಾರೆ.

ಗಣೇಶ ಮೆರವಣಿಗೆ ವೇಳೆ ನಗರದಲ್ಲಿ ಕೆಲವೆಡೆ ಗದ್ದಲ ಉಂಟಾದ ಘಟನೆಗಳು ಇತ್ತೀಚೆಗೆ ವರದಿಯಾಗಿದ್ದವು. ಹಲಸೂರು, ಯೆಡಿಯೂರು, ಆಡುಗೋಡಿಗಳಲ್ಲಿ ಘರ್ಷಣೆ ಉಂಟಾಗಿದ್ದವು. ಗಣೇಶ ವಿಸರ್ಜನೆಯ ವೇಳೆ ಉಂಟಾದ ಘರ್ಷಣೆಯಲ್ಲಿ ಆಡುಗೋಡಿಯಲ್ಲಿ ಶ್ರೀನಿವಾಸ್ ಎಂಬಾತನನ್ನು ಇರಿದು ಹತ್ಯೆ ಮಾಡಲಾಗಿತ್ತು. ಇದಷ್ಟೇ ಅಲ್ಲದೇ ಮೆರವಣಿಗೆ ವೇಳೆ ಒಂದು ಆಡು ಸಹ ಸಾವನ್ನಪ್ಪಿತ್ತು. 

ಹಬ್ಬ ಮುಗಿದರೂ ಘರ್ಷಣೆ ಹಾಗೂ ವ್ಯಕ್ತಿಯ ಹತ್ಯೆಯ ಹಿನ್ನೆಲೆಯಲ್ಲಿ ನಗರದಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ಮೆರವಣಿಗೆಗೆ ಅನುಮತಿ ನೀಡದಿರಲು ಪೊಲೀಸ್ ಇಲಾಖೆ ಅಧಿಕಾರಿಗಳು ನಿರ್ಧರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT