ಬೆಂಗಳೂರು ಪೊಲೀಸ್ ಆಯುಕ್ತ 
ರಾಜ್ಯ

ಗಣೇಶ ವಿಸರ್ಜನಾ ಮೆರವಣಿಗೆಗೆ ಅವಕಾಶ ನೀಡದಿರಲು ಬೆಂಗಳೂರು ಪೊಲೀಸರ ನಿರ್ಧಾರ

ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಇತ್ತೀಚಿನ ದಿನಗಳಲ್ಲಿ ಗಲಭೆ, ಅಹಿತಕರ ಘಟನೆಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಗಣೇಶ ವಿಸರ್ಜನಾ ಮೆರವಣಿಗೆಗೆ ಅನುಮತಿ ನೀಡದೇ ಇರಲು ನಿರ್ಧರಿಸಿದ್ದಾರೆ.

ನವದೆಹಲಿ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಇತ್ತೀಚಿನ ದಿನಗಳಲ್ಲಿ ಗಲಭೆ, ಅಹಿತಕರ ಘಟನೆಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಗಣೇಶ ವಿಸರ್ಜನಾ ಮೆರವಣಿಗೆಗೆ ಅನುಮತಿ ನೀಡದೇ ಇರಲು ನಿರ್ಧರಿಸಿದ್ದಾರೆ.
 
ನರದಾದ್ಯಂತ ಮೆರವಣಿಗೆ, ಡಿಜೆ ನೃತ್ಯಗಳಿಗೆ ಅನುಮತಿ ನೀಡದೇ ಇರಲು ಎಲ್ಲಾ ಪೊಲೀಸ್ ಠಾಣೆಗಳಿಗೆ ಪೊಲೀಸ್ ಆಯುಕ್ತ ಬಿ ದಯಾನಂದ್ ಸೂಚನೆ ನೀಡಿದ್ದಾರೆ. 

ಒಂದು ವೇಳೆ ಅನುಮತಿ ಇಲ್ಲದೇ ಗಣೇಶ ಮೆರವಣಿಗೆ ನಡೆದದ್ದೇ ಆದಲ್ಲಿ ಆ ಘಟನೆ ನಡೆದ ವ್ಯಾಪ್ತಿಯ ಇನ್ಸ್ ಪೆಕ್ಟರ್ ನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ದಯಾನಂದ್ ಎಚ್ಚರಿಕೆ ನೀಡಿದ್ದಾರೆ.

ಗಣೇಶ ಮೆರವಣಿಗೆ ವೇಳೆ ನಗರದಲ್ಲಿ ಕೆಲವೆಡೆ ಗದ್ದಲ ಉಂಟಾದ ಘಟನೆಗಳು ಇತ್ತೀಚೆಗೆ ವರದಿಯಾಗಿದ್ದವು. ಹಲಸೂರು, ಯೆಡಿಯೂರು, ಆಡುಗೋಡಿಗಳಲ್ಲಿ ಘರ್ಷಣೆ ಉಂಟಾಗಿದ್ದವು. ಗಣೇಶ ವಿಸರ್ಜನೆಯ ವೇಳೆ ಉಂಟಾದ ಘರ್ಷಣೆಯಲ್ಲಿ ಆಡುಗೋಡಿಯಲ್ಲಿ ಶ್ರೀನಿವಾಸ್ ಎಂಬಾತನನ್ನು ಇರಿದು ಹತ್ಯೆ ಮಾಡಲಾಗಿತ್ತು. ಇದಷ್ಟೇ ಅಲ್ಲದೇ ಮೆರವಣಿಗೆ ವೇಳೆ ಒಂದು ಆಡು ಸಹ ಸಾವನ್ನಪ್ಪಿತ್ತು. 

ಹಬ್ಬ ಮುಗಿದರೂ ಘರ್ಷಣೆ ಹಾಗೂ ವ್ಯಕ್ತಿಯ ಹತ್ಯೆಯ ಹಿನ್ನೆಲೆಯಲ್ಲಿ ನಗರದಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ಮೆರವಣಿಗೆಗೆ ಅನುಮತಿ ನೀಡದಿರಲು ಪೊಲೀಸ್ ಇಲಾಖೆ ಅಧಿಕಾರಿಗಳು ನಿರ್ಧರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!