ಬೆಂಗಳೂರು ಪೊಲೀಸ್ ಆಯುಕ್ತ 
ರಾಜ್ಯ

ಗಣೇಶ ವಿಸರ್ಜನಾ ಮೆರವಣಿಗೆಗೆ ಅವಕಾಶ ನೀಡದಿರಲು ಬೆಂಗಳೂರು ಪೊಲೀಸರ ನಿರ್ಧಾರ

ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಇತ್ತೀಚಿನ ದಿನಗಳಲ್ಲಿ ಗಲಭೆ, ಅಹಿತಕರ ಘಟನೆಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಗಣೇಶ ವಿಸರ್ಜನಾ ಮೆರವಣಿಗೆಗೆ ಅನುಮತಿ ನೀಡದೇ ಇರಲು ನಿರ್ಧರಿಸಿದ್ದಾರೆ.

ನವದೆಹಲಿ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಇತ್ತೀಚಿನ ದಿನಗಳಲ್ಲಿ ಗಲಭೆ, ಅಹಿತಕರ ಘಟನೆಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಗಣೇಶ ವಿಸರ್ಜನಾ ಮೆರವಣಿಗೆಗೆ ಅನುಮತಿ ನೀಡದೇ ಇರಲು ನಿರ್ಧರಿಸಿದ್ದಾರೆ.
 
ನರದಾದ್ಯಂತ ಮೆರವಣಿಗೆ, ಡಿಜೆ ನೃತ್ಯಗಳಿಗೆ ಅನುಮತಿ ನೀಡದೇ ಇರಲು ಎಲ್ಲಾ ಪೊಲೀಸ್ ಠಾಣೆಗಳಿಗೆ ಪೊಲೀಸ್ ಆಯುಕ್ತ ಬಿ ದಯಾನಂದ್ ಸೂಚನೆ ನೀಡಿದ್ದಾರೆ. 

ಒಂದು ವೇಳೆ ಅನುಮತಿ ಇಲ್ಲದೇ ಗಣೇಶ ಮೆರವಣಿಗೆ ನಡೆದದ್ದೇ ಆದಲ್ಲಿ ಆ ಘಟನೆ ನಡೆದ ವ್ಯಾಪ್ತಿಯ ಇನ್ಸ್ ಪೆಕ್ಟರ್ ನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ದಯಾನಂದ್ ಎಚ್ಚರಿಕೆ ನೀಡಿದ್ದಾರೆ.

ಗಣೇಶ ಮೆರವಣಿಗೆ ವೇಳೆ ನಗರದಲ್ಲಿ ಕೆಲವೆಡೆ ಗದ್ದಲ ಉಂಟಾದ ಘಟನೆಗಳು ಇತ್ತೀಚೆಗೆ ವರದಿಯಾಗಿದ್ದವು. ಹಲಸೂರು, ಯೆಡಿಯೂರು, ಆಡುಗೋಡಿಗಳಲ್ಲಿ ಘರ್ಷಣೆ ಉಂಟಾಗಿದ್ದವು. ಗಣೇಶ ವಿಸರ್ಜನೆಯ ವೇಳೆ ಉಂಟಾದ ಘರ್ಷಣೆಯಲ್ಲಿ ಆಡುಗೋಡಿಯಲ್ಲಿ ಶ್ರೀನಿವಾಸ್ ಎಂಬಾತನನ್ನು ಇರಿದು ಹತ್ಯೆ ಮಾಡಲಾಗಿತ್ತು. ಇದಷ್ಟೇ ಅಲ್ಲದೇ ಮೆರವಣಿಗೆ ವೇಳೆ ಒಂದು ಆಡು ಸಹ ಸಾವನ್ನಪ್ಪಿತ್ತು. 

ಹಬ್ಬ ಮುಗಿದರೂ ಘರ್ಷಣೆ ಹಾಗೂ ವ್ಯಕ್ತಿಯ ಹತ್ಯೆಯ ಹಿನ್ನೆಲೆಯಲ್ಲಿ ನಗರದಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ಮೆರವಣಿಗೆಗೆ ಅನುಮತಿ ನೀಡದಿರಲು ಪೊಲೀಸ್ ಇಲಾಖೆ ಅಧಿಕಾರಿಗಳು ನಿರ್ಧರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT