ಸಂಗ್ರಹ ಚಿತ್ರ 
ರಾಜ್ಯ

ತೆರಿಗೆ ವಂಚನೆ: ಹೊಸಕೋಟೆ ಬಿರಿಯಾನಿ ಹೋಟೆಲ್ ಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ

ಲಕ್ಷಾಂತರ ರೂಪಾಯಿ ವಹಿವಾಟು ನಡೆಸುತ್ತಿದ್ದರೂ ತೆರಿಗೆ ಪಾವತಿಸದೆ ವಂಚಿಸುತ್ತಿದ್ದ ನಗರದ ಬಿರಿಯಾನಿ ಹೋಟೆಲ್‌ಗಳ ಮೇಲೆ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಜಾಗೃತಿ ದಳ ಸೋಮವಾರ ದಾಳಿ ನಡೆಸಿ, ಪರಿಶೀಲನೆ ನಡೆಸಿತು.

ಬೆಂಗಳೂರು: ಲಕ್ಷಾಂತರ ರೂಪಾಯಿ ವಹಿವಾಟು ನಡೆಸುತ್ತಿದ್ದರೂ ತೆರಿಗೆ ಪಾವತಿಸದೆ ವಂಚಿಸುತ್ತಿದ್ದ ನಗರದ ಬಿರಿಯಾನಿ ಹೋಟೆಲ್‌ಗಳ ಮೇಲೆ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಜಾಗೃತಿ ದಳ ಸೋಮವಾರ ದಾಳಿ ನಡೆಸಿ, ಪರಿಶೀಲನೆ ನಡೆಸಿತು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸುತ್ತಮುತ್ತ ಬಿರಿಯಾನಿ ಮತ್ತು ಮಾಂಸಾಹಾರಿ ಹೋಟೆಲ್‌ಗಳು ಇತ್ತೀಚೆಗೆ ಸಾಕಷ್ಟು ಖ್ಯಾತಿ ಗಳಿಸಿವೆ. ನಗರದ ಜನರು ಬೆಳ್ಳಂಬೆಳಗ್ಗೆಯೇ ಹೋಗಿ ಬಿರಿಯಾನಿ ಸವಿಯುವುದು ಟ್ರೆಂಡ್ ಆಗಿದೆ. ಇದರಿಂದ ಪ್ರತಿದಿನ ಲಕ್ಷಾಂತರ ರೂಪಾಯಿ ವಹಿವಾಟು ನಡೆಸಿದರೂ ಜಿಎಸ್‌ಟಿ ನೋಂದಣಿ ಮಾಡಿಸಿಕೊಂಡಿರಲಿಲ್ಲ. ಈ ಬಗ್ಗೆ ಸಾಕಷ್ಟು ದೂರುಗಳು ಬಂದಿದ್ದವು.

ಖಚಿತ ಮಾಹಿತಿ ಮೇರೆಗೆ ವಾಣಿಜ್ಯ ತೆರಿಗೆ ಇಲಾಖೆ ಜಾಗೃತಿ ವಿಭಾಗದ ತಂಡ ವ್ಯಾಪಾರ ಕೇಂದ್ರಗಳಿಗೆ ಭೇಟಿ ಕೊಟ್ಟು ಮಾಹಿತಿ ಕಲೆ ಹಾಕಿತು. ಪರಿಶೀಲನೆ ವೇಳೆ ಬಹುತೇಕ ಹೋಟೆಲ್ ಮಾಲೀಕರು ತಮ್ಮ ವಹಿವಾಟಿಗೆ ಸಂಬಂಧಿಸಿದಂತೆ ಯಾವುದೇ ತೆರಿಗೆ ಬಿಲ್ಲು, ಪೂರೈಕೆ ಬಿಲ್ಲನ್ನು ನೀಡದೆ ಇರುವುದು, ಲೆಕ್ಕ ಪುಸ್ತಕಗಳನ್ನು ಸಮರ್ಪಕವಾಗಿ ನಿರ್ವಹಿಸದೇ ಇರುವುದು ಕಂಡುಬಂದಿದೆ.

ಪರಿಶೀಲನೆ ವೇಳೆ ಬಿರಿಯಾನಿ ಹೋಟೆಲ್ ಮಾಲೀಕನೊಬ್ಬನ ಮನೆಯಲ್ಲಿ ಬರೋಬ್ಬರಿ 1.47 ಕೋಟಿ ರೂ. ನಗದು ಪತ್ತೆಯಾಗಿದೆ. ಮತ್ತೊಂದು ಬಿರಿಯಾನಿ ಮಾಲೀಕರನ ಮನೆಯಲ್ಲಿಯೂ ನಗದು ಪತ್ತೆ ಆಗಿದೆ. ಈ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲಾಗಿದೆ. ಬಳಿಕ ಹಣವನ್ನು ಜಪ್ತಿ ಮಾಡಲಾಗಿದೆ.

ತೆರಿಗೆ ವಂಚನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ತೆರಿಗೆ ವಂಚನೆಯ ವಿಧಿವಿಧಾನಗಳನ್ನು ವಿಶ್ಲೇಷಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ತನಿಖೆ ಮುಂದುವರಿದಿದೆ ಎಂದು ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಸಿ.ಶಿಖಾ ಅವರು ತಿಳಿಸಿದ್ದಾರೆ.

ಗ್ರಾಹಕರಿಂದ ನಗದು ಮತ್ತು ಯುಪಿಎ ಪಾವತಿ ಮೂಲಕ ವರ್ತುಕರು ಹಣ ಪಡೆಯುತ್ತಿದ್ದರು. ತೆರಿಗೆ ವಂಚನೆ ಮಾಡುವ ಉದ್ದೇಶಕ್ಕೆ ಯುಪಿಎ ಪಾವತಿ ಖಾತೆಗಳನ್ನೇ ಬದಲಾಯಿಸುವ ಮುಖಾಂತರ ನೈಜ ವಹಿವಾಟನ್ನು ಮುಚ್ಚಿಟ್ಟು ತೆರಿಗೆ ವಂಚಿಸುತ್ತಿದ್ದರು. ಓರ್ವ ಮಾಲೀಕನ ಬಳಿ 30 ಕ್ಯೂಆರ್ ಕೋಡ್ ಖಾತೆಗಳು ಇರುವುದು ಪತ್ತೆಯಾಗಿದೆ. ಒಂದೇ ಖಾತೆಗೆ ಹಣ ಜಮೆಯಾದರೇ ಆದಾಯ ತೆರಿಗೆ ಇಲಾಖೆ ಮತ್ತು ಆರ್‌ಬಿಐಗೆ ಮಾಹಿತಿ ಹೋಗಲಿದೆ ಎಂಬ ಕಾರಣಕ್ಕೆ ಹಲವು ಯುಪಿಎ ಖಾತೆಗಳನ್ನು ಬಳಸುತ್ತಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT