ಆರೋಪಿಗಳಿಂದ ವಶಕ್ಕೆ ಪಡೆದಿರುವ ಆನೆ ದಂಡ. 
ರಾಜ್ಯ

ಆನೆ ದಂತಗಳ ಮಾರಾಟಕ್ಕೆ ಯತ್ನ: 8 ಮಂದಿ ಆರೋಪಿಗಳ ಬಂಧನ

ರಾಮನಗರ ಜಿಲ್ಲೆಯ ಕೋಡಿಹಳ್ಳಿ ಹುಣಸನಹಳ್ಳಿ ವ್ಯಾಪ್ತಿಯಲ್ಲಿ ವನ್ಯಜೀವಿ(ಸಂರಕ್ಷಣಾ) ಕಾಯ್ದೆ ಉಲ್ಲಂಘನೆ ಮಾಡಿ ಆನೆ ದಂತಗಳನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ 8 ಮಂದಿ ಆರೋಪಿಗಳನ್ನು ಅರಣ್ಯ ಇಲಾಖೆಯ ಸಂಚಾರ ದಳ ಬಂಧನಕ್ಕೊಳಪಡಿಸಿದೆ.

ಬೆಂಗಳೂರು: ರಾಮನಗರ ಜಿಲ್ಲೆಯ ಕೋಡಿಹಳ್ಳಿ ಹುಣಸನಹಳ್ಳಿ ವ್ಯಾಪ್ತಿಯಲ್ಲಿ ವನ್ಯಜೀವಿ(ಸಂರಕ್ಷಣಾ) ಕಾಯ್ದೆ ಉಲ್ಲಂಘನೆ ಮಾಡಿ ಆನೆ ದಂತಗಳನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ 8 ಮಂದಿ ಆರೋಪಿಗಳನ್ನು ಅರಣ್ಯ ಇಲಾಖೆಯ ಸಂಚಾರ ದಳ ಬಂಧನಕ್ಕೊಳಪಡಿಸಿದೆ.

ಐಯ್ಯನ್‍ಕುಟ್ಟಿ (53), ರತ್ನ(46), ಕೃಷ್ಣಮೂರ್ತಿ ಗೋಪಾಲ್(35), ನಾರಾಯಣಸ್ವಾಮಿ(50), ದಿನೇಶ್(42), ರವಿ(44), ಮನೋಹರ್ ಪಾಂಡೆ(61), ವೆಂಕಟೇಶ್(51) ರನ್ನು ಬಂಧಿತ ಆರೋಪಿಗಳಾಗಿದ್ದಾರೆ.

ಅಕ್ರಮವಾಗಿ ಆನೆದಂತ ಮಾರಾಟ ಯತ್ನ ನಡೆಯುವ ಬಗ್ಗೆ ಮಾಹಿತಿ ದೊರೆತ ಮೇರೆಗೆ ಬೆಂಗಳೂರು ಅರಣ್ಯ ಸಂಚಾರಿ ದಳದ ವಲಯ ಅರಣ್ಯಾಧಿಕಾರಿಗಳು, ಅಪರಾಧ ನಿಯಂತ್ರಣ ಕೋಶದ ಸಿಬ್ಬಂದಿಗಳು ಹುಣಸನಹಳ್ಳಿ-ಕನಕಪುರ ರಸ್ತೆಯ ಮರಿದೇವರದೊಡ್ಡಿ ಕ್ರಾಸ್ ಬಳಿ ವಾಹನಗಳ ತಪಾಸಣೆ ನಡೆಸಿ ಆರೋಪಿಗಳ ಬಂಧನಕ್ಕೊಳಪಡಿಸಿದೆ.

ಆರೋಪಿಗಳಿಂದ ಆನೆ ದಂತದ ತುಂಡುಗಳು ಹಾಗೂ ಕೃತ್ಯದಲ್ಲಿ ಉಪಯೋಗಿಸಿದ್ದ ಹಳದಿ ಬಣ್ಣದ ನಾಮಫಲಕವುಳ್ಳ ಬಿಳಿ ಬಣ್ಣದ ಮಹೀಂದ್ರ ಜೈಲೋ ಕಾರನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT