ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ: ಬಿಲ್ ಪಾವತಿ ಬಾಕಿ; ಪಿಡಬ್ಲ್ಯುಡಿ ಕಚೇರಿ ಮುಂದೆ ವಿಷ ಕುಡಿದು ಗುತ್ತಿಗೆದಾರ ಆತ್ಮಹತ್ಯೆ ಯತ್ನ

ಬೆಳಗಾವಿಯ ಕುಮಾರಸ್ವಾಮಿ ಲೇಔಟ್‌ನ ನಿವಾಸಿ 42 ವರ್ಷದ ನಾಗಪ್ಪ ಬಳ್ಳಪ್ಪ ಬಾಂಗಿ ಎಂಬುವವರು ಪಿಡಬ್ಲ್ಯುಡಿ ಅಧಿಕಾರಿಗಳು ಬಾಕಿ ಬಿಲ್‌ಗಳನ್ನು ಪಾವತಿಸದ ಕಾರಣ ಪಿಡಬ್ಲ್ಯುಡಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಬೆಳಗಾವಿ: ಇಲ್ಲಿನ ಪಿಡಬ್ಲ್ಯುಡಿ ಕಚೇರಿ ಎದುರು 42 ವರ್ಷದ ಗುತ್ತಿಗೆದಾರರೊಬ್ಬರು ವಿಷ ಕುಡಿದು ಬುಧವಾರ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಬೆಳಗಾವಿಯ ಕುಮಾರಸ್ವಾಮಿ ಲೇಔಟ್‌ನ ನಿವಾಸಿ ನಾಗಪ್ಪ ಬಳ್ಳಪ್ಪ ಭಾಂಗಿ ಎಂಬುವವರು ಲೋಕೋಪಯೋಗಿ ಇಲಾಖೆಯಲ್ಲಿ ಮಾಡಿದ ಕಾಮಗಾರಿಗಳ ಬಿಲ್ ಬಾಕಿ ಉಳಿಸಿಕೊಂಡ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

2022ರಲ್ಲಿ ನಡೆದಿರುವ ರಸ್ತೆ ದುರಸ್ತಿ ಕಾಮಗಾರಿಗೆ ಅಧಿಕಾರಿಗಳು 6.5 ಲಕ್ಷ ರೂಪಾಯಿ ಬಿಲ್‌ಗಳನ್ನು ಪಾವತಿಸಿಲ್ಲ ಎಂದು ಭಾಂಗಿ ಆರೋಪಿಸಿದ್ದಾರೆ. 

ಕುಟುಂಬ ಸದಸ್ಯರೊಂದಿಗೆ ಧರಣಿ ನಡೆಸಿದ ನಂತರ ಭಾಂಗಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಹಲವು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ, ಅವರು ಬಾಕಿ ಬಿಲ್‌ಗಳನ್ನು ಪಾವತಿಸಿಲ್ಲ. ಪಿಡಬ್ಲ್ಯುಡಿ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ರಮೇಶ ಹೆಗಡೆ ಹಾಗೂ ಬಸವರಾಜ ಹಲಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಕಾರ್ಯಪಾಲಕ ಇಂಜಿನಿಯರ್ ಎಸ್‌ಎಸ್‌ ಸೊಬರದ್ ಅವರ ಎದುರೇ ಬಾಂಗಿ ವಿಷ ಸೇವಿಸಿದ್ದಾರೆ. ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಬಾಂಗಿಯ ಸ್ಥಿತಿ ಸ್ಥಿರವಾಗಿದೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ. 

ಅವರ ಕೆಲಸದಲ್ಲಿನ ದೋಷಗಳಿಂದಾಗಿ ಬಾಂಗಿಯ ಬಿಲ್‌ಗಳನ್ನು ಬಾಕಿ ಇರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

SCROLL FOR NEXT