ಆರೋಪಿಗಳಿಂದ ವಶಪಡಿಸಿಕೊಂಡಿರುವ ಚಿನ್ನಾಭರಣ. 
ರಾಜ್ಯ

ದರೋಡೆ ನಾಟಕ: 1.2 ಕೆಜಿ ಚಿನ್ನ ಕದ್ದಿದ್ದ ಚಿನ್ನದಂಗಡಿ ನೌಕರನ ಬಂಧನ

1.2 ಕೆಜಿ ಚಿನ್ನಾಭರಣ ಕದ್ದು, ದರೋಡೆ ಕಥೆ ಹೆಣೆದಿದ್ದ ಚಿನ್ನದಂಗಡಿ ನೌಕರನನ್ನು ಹಲಸೂರು ಗೇಟ್ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: 1.2 ಕೆಜಿ ಚಿನ್ನಾಭರಣ ಕದ್ದು, ದರೋಡೆ ಕಥೆ ಹೆಣೆದಿದ್ದ ಚಿನ್ನದಂಗಡಿ ನೌಕರನನ್ನು ಹಲಸೂರು ಗೇಟ್ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ರಾಜಸ್ಥಾನ ಮೂಲದ ಲಾಲ್ ಸಿಂಗ್ (23) ಮತ್ತು ಆತನ ಸಹಚರ ರಾಜ್ ಪಾಲ್ (24) ಬಂಧಿತರು. ನಗರ್ತಪೇಟೆ ಜ್ಯುವೆಲ್ಲರಿ ಅಂಗಡಿ ಮಾಲೀಕ ಅಭಿಷೇಕ್ ಜೈನ್ ನೀಡಿದ ದೂರಿನ ಮೇರೆಗೆ ತನಿಖೆ ಕೈಗೊಂಡು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ಇನ್ನಿಬ್ಬರು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ.

ಅಭಿಷೇಕ್ ಜೈನ್ ಬಳಿ ಲಾಲ್ ಸಿಂಗ್ 8 ತಿಂಗಳ ಹಿಂದೆ ಸೇಲ್ಸ್ ಮನ್ ಕೆಲಸಕ್ಕೆ ಸೇರಿಕೊಂಡಿದ್ದ. ಕಡಿಮೆ ಅವಧಿಯಲ್ಲಿ ಮಾಲೀಕರ ನಂಬಿಕೆ ಗಳಿಸಿದ್ದ. ಹೀಗಾಗಿ ಮಾಲೀಕ ಅಭಿಷೇಕ್ ಜೈನ್ ಆಂದ್ರಪ್ರದೇಶದ ನೆಲ್ಲೂರಿನ ಮುಖೇಶ್ ಮತ್ತು ಶುಭಂ ಗೋಲ್ಡ್ ಜ್ಯುವೆಲ್ಲರಿ ಅಂಗಡಿಗೆ ಡೆಲಿವರಿ ನೀಡುವತೆ ಲಾಲ್ ಸಿಂಗ್'ಗೆ ಸೆ.28ರಂದು 1.2 ಗ್ರಾಂ ಚಿನ್ನಾಭರಣ ನೀಡಿದ್ದರು.

ನೆಲ್ಲೂರಿನ ಕಾಳಹಸ್ತಿಗೆ ತೆರಳಿದ ಆರೋಪಿ ನಾಲ್ ಸಿಂಗ್, ಮಾಲೀಕ ಅಭಿಷೇಕ್ ಜೈನ್ ಗೆ ಕರೆ ಮಾಡಿ, ಯಾರೋ ದುಷ್ಕರ್ಮಿಗಳು ನನ್ನ ಹಣೆಗೆ ಗನ್ ಇರಿಸಿ ಕೈಗಳಿಗೆ ಚಾಕುವಿನಿಂದ ಹಲ್ಲೆಗೈದು ಚಿನ್ನಾಭರಮವಿದ್ದ ಬ್ಯಾಗ್ ಕಿತ್ತುಕೊಂಡು ಪರಾರಿಯಾದರು ಎಂದು ಹೇಳಿದ್ದಾನೆ. ಬಳಿಕ ಲಾಲ್ ಸಿಂಗ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಅನುಮಾನಗೊಂಡ ಪೊಲೀಸರು ಲಾಲ್ ಸಿಂಗ್ ನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿರುವ ವಿಚಾರವನ್ನು ಆರೋಪಿ ಬಾಯ್ಬಿಟ್ಟಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT