ಸಂಗ್ರಹ ಚಿತ್ರ 
ರಾಜ್ಯ

ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ: ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತಪಟ್ಟಿದ್ದು, ಈ ಮೂಲಕ ದುರಂತದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತಪಟ್ಟಿದ್ದು, ಈ ಮೂಲಕ ದುರಂತದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೆಂಕಟೇಶ್ ಎಂಬುವರು ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.

ಸ್ನೇಹಿತನ ಹುಟ್ಟುಹಬ್ಬ ಆಚರಣೆಗಾಗಿ ಪಟಾಕಿ ಖರೀದಿರಲು ಬಾಲಾಜಿ ಟ್ರೇಡರ್ಸ್ ಅಂಗಡಿಗೆ ವೆಂಕಟೇಶ್ ಹೋಗಿದ್ದ ಸಂದರ್ಭದಲ್ಲಿ ಪಟಾಕಿ ದುರಂತ ಸಂಭವಿಸಿತ್ತು. ವೆಂಕಟೇಶ್ ಗೋದಾಮಿನ ಒಳಗೆ ಸಿಲುಕಿ ಹಾಕಿಕೊಂಡಿದ್ದರು. ಪರಿಣಾಮ ಬೆನ್ನು, ತಲೆ, ಕೈ ಕಾಲುಗಳುಗಳಿಗೆ ಬೆಂಕಿ ತಗುಲಿ ಸುಟ್ಟ ಗಾಯಗಳಾಗಿದ್ದವು. ವೆಂಕಟೇಶ್ ಅವರಿಗೆ ಶೇ 50ರಷ್ಟು ಸುಟ್ಟ ಗಾಯಗಳಾಗಿತ್ತು.

ಅತ್ತಿಬೆಲೆ ಟೋಲ್‌ಗೇಟ್ ಬಳಿಯ ಸರ್ವೀಸ್ ರಸ್ತೆಯಲ್ಲಿರುವ ಶ್ರೀ ಬಾಲಾಜಿ ಕ್ರ್ಯಾಕರ್ಸ್ ಅಂಗಡಿ ಹಾಗೂ ಗೋದಾಮಿನಲ್ಲಿ  ಶನಿವಾರ ಭಾರಿ ಅಗ್ನಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ 13 ಮಂದಿ ಮೃತಪಟ್ಟಿದ್ದರು. ನಿನ್ನೆ ಮತ್ತಿಬ್ಬರು ಗಾಯಾಳುಗಳು ಮೃತಪಟ್ಟು ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿತ್ತು.

ದುರಂತದ ನಂತರ ರಾಜ್ಯ ಸರ್ಕಾರ ಆನೇಕಲ್ ತಹಶೀಲ್ದಾರ್, ಅತ್ತಿಬೆಲೆ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಧಿಕಾರಿಯನ್ನು ಅಮಾನತುಗೊಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!