ಸಂಗ್ರಹ ಚಿತ್ರ 
ರಾಜ್ಯ

ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ: ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತಪಟ್ಟಿದ್ದು, ಈ ಮೂಲಕ ದುರಂತದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತಪಟ್ಟಿದ್ದು, ಈ ಮೂಲಕ ದುರಂತದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೆಂಕಟೇಶ್ ಎಂಬುವರು ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.

ಸ್ನೇಹಿತನ ಹುಟ್ಟುಹಬ್ಬ ಆಚರಣೆಗಾಗಿ ಪಟಾಕಿ ಖರೀದಿರಲು ಬಾಲಾಜಿ ಟ್ರೇಡರ್ಸ್ ಅಂಗಡಿಗೆ ವೆಂಕಟೇಶ್ ಹೋಗಿದ್ದ ಸಂದರ್ಭದಲ್ಲಿ ಪಟಾಕಿ ದುರಂತ ಸಂಭವಿಸಿತ್ತು. ವೆಂಕಟೇಶ್ ಗೋದಾಮಿನ ಒಳಗೆ ಸಿಲುಕಿ ಹಾಕಿಕೊಂಡಿದ್ದರು. ಪರಿಣಾಮ ಬೆನ್ನು, ತಲೆ, ಕೈ ಕಾಲುಗಳುಗಳಿಗೆ ಬೆಂಕಿ ತಗುಲಿ ಸುಟ್ಟ ಗಾಯಗಳಾಗಿದ್ದವು. ವೆಂಕಟೇಶ್ ಅವರಿಗೆ ಶೇ 50ರಷ್ಟು ಸುಟ್ಟ ಗಾಯಗಳಾಗಿತ್ತು.

ಅತ್ತಿಬೆಲೆ ಟೋಲ್‌ಗೇಟ್ ಬಳಿಯ ಸರ್ವೀಸ್ ರಸ್ತೆಯಲ್ಲಿರುವ ಶ್ರೀ ಬಾಲಾಜಿ ಕ್ರ್ಯಾಕರ್ಸ್ ಅಂಗಡಿ ಹಾಗೂ ಗೋದಾಮಿನಲ್ಲಿ  ಶನಿವಾರ ಭಾರಿ ಅಗ್ನಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ 13 ಮಂದಿ ಮೃತಪಟ್ಟಿದ್ದರು. ನಿನ್ನೆ ಮತ್ತಿಬ್ಬರು ಗಾಯಾಳುಗಳು ಮೃತಪಟ್ಟು ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿತ್ತು.

ದುರಂತದ ನಂತರ ರಾಜ್ಯ ಸರ್ಕಾರ ಆನೇಕಲ್ ತಹಶೀಲ್ದಾರ್, ಅತ್ತಿಬೆಲೆ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಧಿಕಾರಿಯನ್ನು ಅಮಾನತುಗೊಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಎರಡನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ; ಮೂರನೇ ತ್ರೈಮಾಸಿಕದ ಸಂಕಷ್ಟದ ಬಗ್ಗೆ ಬಾಲಿವುಡ್ ನಟಿ ಮಾತು!

ಪೊಲೀಸರು ಡೀಲ್- ಅಪರಾಧಗಳಲ್ಲಿ ಭಾಗಿಯಾಗಬೇಡಿ, ಲಂಚ ಕೊಟ್ಟು ಇಲಾಖೆ ಸೇರಬೇಡಿ: ದೇವಾಲಯಗಳ ಹುಂಡಿ ರಕ್ಷಣೆಗೆ ತೀರ್ಮಾನ; ಸಿಎಂ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ ವ್ಯಾಪಾರದ ಗುರಿ; Video

'ಮಟನ್ ಹಾಕ್ತೀವಿ ಅಂತ ಹೇಳಿ ಚಿಕನ್ ಕೊಟ್ರು': ರಣಾಂಗಣವಾಯ್ತು 'ನಿಕಾಹ್ ಸಮಾರಂಭ', 12 ಮಂದಿಗೆ ಗಾಯ, Video