ಕೆ ಎಸ್ ಈಶ್ವರಪ್ಪ 
ರಾಜ್ಯ

ಪ್ರಚೋದನಕಾರಿ ಭಾಷಣ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲು

ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ನಾಯಕ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲು ಮಾಡಲಾಗಿದೆ.

ಶಿವಮೊಗ್ಗ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ನಾಯಕ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲು ಮಾಡಲಾಗಿದೆ.

ರಾಗಿಗುಡ್ಡದ ಗಲಭೆ ಖಂಡಿಸಿ ಇಂದು ಜಿಲ್ಲಾ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಎಫ್ಐಆರ್ ದಾಖಲಿಸಲಾಗಿದೆ.

ಹಸಿರು ಬಣ್ಣ ಕಿತ್ತಾಕಿ ಕೇಸರಿ ಬಣ್ಣ ಬರುವವರೆಗೆ ಬಿಜೆಪಿ ಹೋರಾಟ ಮಾಡುತ್ತದೆ, ಪಾಕಿಸ್ತಾನ ಸೇರಿದಂತೆ ಅಖಂಡ ಭಾರತದ ಕನಸು ಇತ್ತು. ಆದರೆ ದೇಶದ್ರೋಹಿ ಮುಸ್ಲಿಮರು ಇದ್ದಾರೆ ಎನ್ನುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಹಿಂದೂ ಸಮಾಜ ಇವತ್ತಿನ ತನಕ ಕಾನೂನನ್ನು ಕೈಗೆ ತೆಗೆದುಕೊಂಡಿಲ್ಲ. ಹರ್ಷನ ಕೊಲೆಯಾದಾಗ ನಾವು ಲಾಂಗು, ಮಚ್ಚುಗಳನ್ನು ಹಿಡಿದುಕೊಂಡು ಮುಸಲ್ಮಾನರ ಬೀದಿಗಳಿಗೆ ಹೋಗಿದ್ದರೆ, ಮಾರಿ ಜಾತ್ರೆಯಲ್ಲಿ ಕುರಿ ಕಡಿದು ಹಾಕಿದಂಗೆ ಕಡಿದು ಹಾಕಿ ಬಿಡುತ್ತಿದ್ದೇವು. ಆ ಬದುಕು ನಾವು ಮಾಡಲಿಲ್ಲ. ಈ ದೇಶದಲ್ಲಿರುವ ಹಿಂದುಗಳು ಮುಸಲ್ಮಾನರು ಒಟ್ಟಾಗಿ ಇರಬೇಕೆಂಬ ಆಸೆ ಇದೆ ಆದರೆ ಒಟ್ಟಾಗಿರಲು ಇವರು ಮಾಡಲಿಲ್ಲ. ಇಲ್ಲಿರುವ ಹೆಣ್ಣು ಮಕ್ಕಳು ಕಿತ್ತೂರು ರಾಣಿ ಚೆನ್ನಮ್ಮ, ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರ ರಕ್ತವನ್ನು ಹಂಚಿಕೊಂಡು ಹುಟ್ಟಿದ್ದಾರೆ. ಅವರ ಸುದ್ದಿಗೆ ಬಂದರೆ ಆ ಹೆಣ್ಣು ಮಕ್ಕಳು ಸುಮ್ಮನೆ ಬಿಡಲ್ಲ ನಿಮ್ಮನ್ನು ಕೊಚ್ಚಿ ಹಾಕುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಇದೀಗ ಪ್ರಚೋದನಕಾರಿ ಭಾಷಣದ ಮೂಲಕ ಕೋಮು ಭಾವನೆ ಕೆರಳಿಸಿದ್ದಾರೆ ಎಂಬ ಆರೋಪ‌ ಹಿನ್ನಲೆ ಈಶ್ವರಪ್ಪ ವಿರುದ್ಧ ಐಪಿಸಿ ಸೆಕ್ಷನ್ 153 ಎ ಮತ್ತು 504 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!