ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ 
ರಾಜ್ಯ

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ, 8 ಬೈಕ್ ಗಳು ಭಸ್ಮ

ಅತ್ತಿಬೆಲೆ ಪಟಾಕಿ ಗೋದಾಮು ಬೆಂಕಿ ದುರಂತ ಪ್ರಕರಣ ಹಸಿರಾಗಿರುವಂತೆಯೇ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿದ ಪರಿಣಾಮ 8 ಬೈಕ್ ಗಳು ಸುಟ್ಟು ಭಸ್ಮವಾಗಿವೆ.

ಬೆಂಗಳೂರು: ಅತ್ತಿಬೆಲೆ ಪಟಾಕಿ ಗೋದಾಮು ಬೆಂಕಿ ದುರಂತ ಪ್ರಕರಣ ಹಸಿರಾಗಿರುವಂತೆಯೇ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿದ ಪರಿಣಾಮ 8 ಬೈಕ್ ಗಳು ಸುಟ್ಟು ಭಸ್ಮವಾಗಿವೆ.

ರಾಜಧಾನಿ ಬೆಂಗಳೂರು ನಗರದ ಜೋಗುಪಾಳ್ಯದಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಜೋಗುಪಾಳ್ಯದ ಪೈಪ್ ಲೈನ್ ರಸ್ತೆಯಲ್ಲಿನ ಅಗರಬತ್ತಿ ಫ್ಯಾಕ್ಟರಿಯಲ್ಲಿ ಬೆಂಕಿ ಹತ್ತಿಕೊಂಡಿದೆ. ಬೆಂಕಿ ಕಿನ್ನಾಲೆಗೆ 8 ಬೈಕ್ ಗಳು ಸುಟ್ಟು ಕರಕಲಾಗಿವೆ. ಘಟನೆಯಲ್ಲಿ ರವಿಕುಮಾರ್ ಎಂಬುವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗುಡಿ ಕೈಗಾರಿಕೆ ರೀತಿ ಕಳೆದ 5 ವರ್ಷಗಳಿಂದ ಚೋಳರಪಾಳ್ಯದ ಮನೆಯಲ್ಲೇ ಅಗರಬತ್ತಿ ಸಣ್ಣ ಕಾರ್ಖಾನೆ ನಡೆಸಲಾಗುತ್ತಿತ್ತು. ಮನೆಯ ಕೆಳ ಮಹಡಿಯಲ್ಲಿ ಅಗರಬತ್ತಿ ತಯಾರಿಕೆಗೆ ಬೇಕಾಗಿದ್ದ ದ್ರವ ರೂಪದ ರಾಸಾಯನಿಕಗಳನ್ನು ಶೇಖರಿಸಿ ಇಡಲಾಗಿತ್ತು. ಈ ಪ್ರದೇಶದಕ್ಕೆ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಯಿಂದಾಗಿ ರಾಸಾಯನಿಕಗಳು ತುಂಬಿದ್ದ ದೊಡ್ಡ ಕ್ಯಾನ್‌ಗಳು ಸಿಡಿದಿವೆ. ಆ ಸಂದರ್ಭದಲ್ಲಿ ಮನೆ, ಪಕ್ಕದ ಕಟ್ಟಡ ಹಾಗೂ ರಸ್ತೆಗೂ ಬೆಂಕಿ ಆವರಿಸಿದೆ.

ಈ ಸಂದರ್ಭದಲ್ಲಿ ಮನೆ ಮುಂದೆ ನಿಲ್ಲಿಸಿದ್ದ 8 ಬೈಕ್ ಗಳು ಸುಟ್ಟು ಭಸ್ಮವಾಗಿವೆ. ಮನೆಯಲ್ಲಿದ್ದ ರವಿ ಕುಮಾರ್‌ ಅವರಿಗೆ ತೀವ್ರಗಾಯಗಳಾಗಿದ್ದು, ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ. ಇನ್ನು ಸ್ಥಳಕ್ಕೆ ಬಂದ 3 ಅಗ್ನಿ ಶಾಮಕ ವಾಹನಗಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ವಿಜಯನಗರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಲುಲು ಮಾಲ್‌ನಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ; ಸುಳ್ಳು ಸುದ್ದಿ ಪೋಸ್ಟ್ ಮಾಡಿದ ಬಿಜೆಪಿ ಕಾರ್ಯಕರ್ತೆ ವಿರುದ್ಧ ಪ್ರಕರಣ ದಾಖಲು
 
ಈ ಘಟನೆಗೆ ಕಾರಣ ಏನು ಎಂಬುದನ್ನು ಅಗ್ನಿ ಶಾಮಕ ಸಿಬ್ಬಂದಿ ಪೊಲೀಸರು ತನಿಖೆ ನಡೆಸುತ್ತಿದ್ದು, ವಿದ್ಯುತ್ ಶಾಕ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿರವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇನ್ನು ಈ ಕಾರ್ಖಾನೆ ಪರವಾನಗಿ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT