ಸಾಂದರ್ಭಿಕ ಚಿತ್ರ 
ರಾಜ್ಯ

ಲಂಚ ಆರೋಪ: ಲೋಕಾಯುಕ್ತ ಪೊಲೀಸರಿಂದ ದಾವಣಗೆರೆ ಅಬಕಾರಿ ಡಿಸಿ ಸೇರಿ ಮೂವರ ಬಂಧನ 

ಮದ್ಯದ ಪರವಾನಗಿ ನೀಡಲು ಲಂಚ ಕೇಳಿದ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ದಾವಣಗೆರೆ ಅಬಕಾರಿ ಡಿಸಿ ಸೇರಿ ಮೂವರನ್ನು ಬಂಧಿಸಿದ್ದಾರೆ.

ಬೆಂಗಳೂರು: ಮದ್ಯದ ಪರವಾನಗಿ ನೀಡಲು ಲಂಚ ಕೇಳಿದ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ದಾವಣಗೆರೆ ಅಬಕಾರಿ ಡಿಸಿ ಸೇರಿ ಮೂವರನ್ನು ಬಂಧಿಸಿದ್ದಾರೆ.

ಕರ್ನಾಟಕ ಲೋಕಾಯುಕ್ತ ಪೊಲೀಸರು ಶನಿವಾರ ಅಬಕಾರಿ ಇಲಾಖೆಯ ಉಪ ಆಯುಕ್ತೆ ಆರ್ ಎಸ್ ಸ್ವಪ್ನಾ ಸೇರಿದಂತೆ ಅಬಕಾರಿ ಇಲಾಖೆಯ ನಾಲ್ವರು ಅಧಿಕಾರಿಗಳನ್ನು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಇತರ ಮೂವರು ಆರೋಪಿಗಳಾದ ಅಶೋಕ ಹೆಚ್.ಎಂ, ಪ್ರಥಮ ವಿಭಾಗದ ಸಹಾಯಕ; ಹರಿಹರ ವಲಯದ ಅಬಕಾರಿ ನಿರೀಕ್ಷಕಿ ಶೀಲಾ, ದ್ವಿತೀಯ ವಿಭಾಗದ ಸಹಾಯಕಿ ಶೈಲಶ್ರೀ ಎಂಬವವರನ್ನೂ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಇಲಾಖೆಯ ಅಧಿಕೃತ ಹೇಳಿಕೆಯ ಪ್ರಕಾರ, ಆರೋಪಿಯು ಹರಿಹರದಲ್ಲಿರುವ ಅಮ್ಯೂಸ್‌ಮೆಂಟ್ ಪಾರ್ಕ್‌ಗೆ ಸಿಎಲ್-7 ಮದ್ಯದ ಪರವಾನಗಿ ನೀಡಲು ದೂರುದಾರ ಡಿಜಿ ರಘುನಾಥ ಅವರಿಂದ ಅಧಿಕಾರಿಗಳು ಲಂಚ ಕೇಳಿದ್ದಾರೆ ಎಂದು ಆರೋಪಿಸಲಾಗಿದೆ. 

ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದರು. ಮೊದಲಿಗೆ ಅಬಕಾರಿ ಉಪ ಆಯುಕ್ತರ ಕಚೇರಿಯಲ್ಲಿ ದೂರುದಾರರಿಂದ 3 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ಅಶೋಕ ಹೆಚ್ ಎಂರನ್ನು ಬಂಧಿಸಿದ್ದಾರೆ. ಬಳಿಕ ಸ್ವಪ್ನಾ, ಶೀಲಾ ಹಾಗೂ ಶೈಲಶ್ರೀ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಭಾರತವನ್ನ ನರಕದ ಕೂಪ ಅಂದಿದ್ರಲ್ಲಾ ಆ ಬಗ್ಗೆ ಏನ್ ಹೇಳ್ತಿರಾ?; ಪತ್ರಕರ್ತನ ಪ್ರಶ್ನೆಗೆ ರುಬಿಯೊ ಗಲಿಬಿಲಿ!

CM ಬದಲಾವಣೆ ಚರ್ಚೆ ಮಧ್ಯೆ ಸಿದ್ದರಾಮಯ್ಯ ಸಂಪುಟದಲ್ಲಿ ಮಹತ್ವದ ಬದಲಾವಣೆ

ಗುಲ್ಮಾರ್ಗ್: ಕೈಕೊಟ್ಟ ವಿಶ್ವದ 2ನೇ ಅತಿ ಎತ್ತರದ ಕೇಬಲ್ ಕಾರ್; ಆಕಾಶದಲ್ಲೇ ಸಿಲುಕಿದ 300 ಪ್ರವಾಸಿಗರು! Video ನೋಡಿ

ಅಪ್ರಾಪ್ತ ಬಾಲಕಿ ಅತ್ಯಾಚಾರ, ಕೊಲೆಯಾಗಿದ್ರೂ ಪ್ರೆಸ್ ಮೀಟ್ ನಲ್ಲಿ ಪೊಲೀಸರ 'ಲಲ್ಲೆ': Video ವೈರಲ್, ಜನಾಕ್ರೋಶ!

ಅಕ್ರಮ ಸಂಬಂಧಕ್ಕೆ ಮೂವರು ಬಲಿ: ಪತ್ನಿ ಕೊಂದು ಪತಿ ಆತ್ಮಹತ್ಯೆ; ಮಹಿಳೆಯ ಪ್ರಿಯಕರನೂ ಸಾವಿಗೆ ಶರಣು!

SCROLL FOR NEXT