ಕೆ.ಎಸ್ ಭಗವಾನ್ 
ರಾಜ್ಯ

ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳು, ಇದು ನನ್ನ ಮಾತಲ್ಲ: ಮಹಿಷ ದಸರಾದಲ್ಲಿ ಕೆ.ಎಸ್. ಭಗವಾನ್‌

ಜನಿವಾರದಿಂದ ಜಾತಿ ಗುರುತಿಸುತ್ತಾರೆ. ಹಾಕದವನು ಒಂದು, ಹಾಕಿರೋನು ಒಂದು. ಕೈಗೆ ಕಾಲಿಗೆ ಜಾತಿ ಇಟ್ಟಿರೋದು ಹಿಂದೂ ಧರ್ಮ. ಹಿಂದೂ ಧರ್ಮ ನಮ್ಮ ಧರ್ಮ ಅಲ್ಲ. ನಮ್ಮ ಧರ್ಮ ಬೌದ್ಧ ಧರ್ಮ ಎಂದು ಅವರು ಹೇಳಿದರು.

ಮೈಸೂರು: ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳು, ಇದು ನನ್ನ ಮಾತಲ್ಲ ಹಾಗಂತ ರಾಷ್ಟ್ರಕವಿ ಕುವೆಂಪು ಹೇಳಿದ್ದರು ಎಂದು ವಿಚಾರವಾದಿ ಕೆ.ಎಸ್. ಭಗವಾನ್‌ ಹೇಳಿದ್ದಾರೆ.

ಮಹಿಷ ದಸರಾ ಆಚರಣೆ ಸಮಿತಿಯಿಂದ ಇಲ್ಲಿನ ಪುರಭವನದ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ನಾನು ಹಿಂದೂ ಧರ್ಮವನ್ನು ಯಾವಾಗಲೋ ಬಿಟ್ಟು ಬಿಟ್ಟೆ ಎಂದು ಕುವೆಂಪು ಯಾವಾಗಲೂ ಹೇಳುತ್ತಿದ್ದರು. ಆದರೆ, ಅವರ ಶಿಷ್ಯರಿಗೆ ಅದು ಅರ್ಥವಾಗಲಿಲ್ಲ.

ಆದ್ದರಿಂದಲೇ ಕುವೆಂಪು, ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳು ಎಂದು ಹೇಳಿದ್ದರು. ಇದು ನನ್ನ ಮಾತಲ್ಲ ಕುವೆಂಪು ಅವರದ್ದು. ಇಲ್ಲದಿದ್ದರೆ ನನಗೆ ಹೊಡೆಯಲು ಬರುತ್ತಾರೆ. ನನ್ನನ್ನು ಕೊಂದು ಹಾಕಿ ಬಿಡುತ್ತಾರೆ. ಆದರೆ, ನಿಜ ಹೇಳಿಯೇ ಸಾಯಬೇಕು’ ಎಂದರು. ‘ಕುವೆಂಪು ಮಾತು ಅವರ ಶಿಷ್ಯರಿಗೆ ಈಗಲೂ ಅರ್ಥವಾಗಿಲ್ಲ’ ಎಂದು ಹೇಳಿದರು.

ಜನಿವಾರದಿಂದ ಜಾತಿ ಗುರುತಿಸುತ್ತಾರೆ. ಹಾಕದವನು ಒಂದು, ಹಾಕಿರೋನು ಒಂದು. ಕೈಗೆ ಕಾಲಿಗೆ ಜಾತಿ ಇಟ್ಟಿರೋದು ಹಿಂದೂ ಧರ್ಮ. ಹಿಂದೂ ಧರ್ಮ ನಮ್ಮ ಧರ್ಮ ಅಲ್ಲ. ನಮ್ಮ ಧರ್ಮ ಬೌದ್ಧ ಧರ್ಮ ಎಂದು ಅವರು ಹೇಳಿದರು.

ಬ್ರಾಹ್ಮಣರು ವೈದಿಕರು ಬೇರೆ ದೇಶದಿಂದ ಬಂದಿರುವವರು. 2 ಸಾವಿರ ವರ್ಷದಿಂದ ಇವರು ಬೇರೆಯವರಿಗೆ ಸಂಸ್ಕೃತ ಕಲಿಸಲಿಲ್ಲ. ಎಲ್ಲಾ ಶೂದ್ರರು ಬ್ರಾಹ್ಮಣರ ಗುಲಾಮರು. ಶೂದ್ರನನ್ನು ದೇವರು ಸೃಷ್ಠಿ ಮಾಡಿರೋದೆ ಬ್ರಾಹ್ಮಣರ ಸೇವೆ ಮಾಡಲೆಂದು ತಿಳಿದಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT