ಪುನೀತ್ ಕೆರೆಹಳ್ಳಿ 
ರಾಜ್ಯ

ಚಕ್ರವರ್ತಿ ಅಣ್ಣನ ಮಾತಿಗೆ ಗೌರವ ನೀಡಿ ಉಪವಾಸ ಸತ್ಯಾಗ್ರಹ ಅಂತ್ಯ- ಪುನೀತ್ ಕೆರೆಹಳ್ಳಿ

ತಮ್ಮ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳ ಕುರಿತು ಸ್ಪಷ್ಪೀಕರಣ ನೀಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಆಸ್ಪತ್ರೆಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.

ಬೆಂಗಳೂರು: ತಮ್ಮ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳ ಕುರಿತು ಸ್ಪಷ್ಪೀಕರಣ ನೀಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಆಸ್ಪತ್ರೆಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಪುನೀತ್ ಕೆರೆಹಳ್ಳಿ, ಸರ್ಕಾರದ ಪರವಾಗಿ ಮನವಿ ಸ್ವೀಕರಿಸಿದ ತಹಸೀಲ್ದಾರರಿಗೆ ಧನ್ಯವಾದಗಳು. ಚಕ್ರವರ್ತಿ ಅಣ್ಣನವರ ಮಾತಿಗೆ ಗೌರವ ನೀಡಿ ಉಪವಾಸ ಸತ್ಯಾಗ್ರಹ ಅಂತ್ಯ ಮಾಡುತ್ತಿದ್ದೇನೆ, ಕಾನೂನು ಹೋರಾಟ ಮುಂದುವರೆಸುತ್ತೇನೆ ಎಂದು ತಿಳಿಸಿದ್ದಾರೆ. 

ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ, ರಾಮನಗರ ಜಿಲ್ಲೆಯ ಸಾತನೂರು ಸೇರಿದಂತೆ ವಿವಿಧ ಠಾಣೆಗಳಲ್ಲಿ ದೊಂಬಿ, ಕೊಲೆ, ಹಲ್ಲೆ, ಪ್ರಾಣ ಬೆದರಿಕೆ ಮತ್ತಿತರ ಆರೋಪದಡಿ ಪ್ರಕರಣ ದಾಖಲಾಗಿದ್ದು, ಈ ಹಿಂದೆ ಅವರ ಹೆಸರನ್ನು ರೌಡಿಪಟ್ಟಿಗೆ  ಸೇರ್ಪಡೆ ಮಾಡಲಾಗಿತ್ತು. ನಂತರ ಅವರನ್ನು ಬಂಧಿಸಲಾಗಿತ್ತು. ಇತ್ತೀಚಿಗೆ ಜಾಮೀನು ಪಡೆದು ಜೈಲಿನಿಂದ ಹೊರಗೆ ಬಂದಿದ್ದಾರೆ.

ಅಕ್ಟೋಬರ್ 3 ರಂದು ಸ್ವಾತಂತ್ರ್ಯ ಉದ್ಯಾನವದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿ ಅವರನ್ನು ವಶಕ್ಕೆ ಪಡೆದ ಪೊಲೀಸರು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಯೂ ಆಹಾರ, ನೀರು ಸೇವಿಸುವುದಿಲ್ಲ, ಚಿಕಿತ್ಸೆ ಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಅಲ್ಲದೇ ಅವರ ವಿರುದ್ಧ ಆತ್ಮಹತ್ಯೆ ಯತ್ನ ಪ್ರಕರಣ ಕೂಡಾ ದಾಖಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!