ಉರಗ ತಜ್ಞನಿಗೆ ಕಚ್ಚಿದ ಹಾವು 
ರಾಜ್ಯ

ವಿಡಿಯೋ: ಹಾವು ಹಿಡಿಯುವ ವೇಳೆ ಕಚ್ಚಿದ ನಾಗರಹಾವು, ಉರಗ ರಕ್ಷಕ ಆಸ್ಪತ್ರೆಗೆ ದಾಖಲು, ಸ್ಥಿತಿ ಗಂಭೀರ!

ಹಾವು ಹಿಡಿಯುವ ವೇಳೆ ಅವಘಡ ಸಂಭವಿಸಿ ನಾಗರಹಾವೊಂದು ಉರಗ ರಕ್ಷಕನಿಗೇ ಕಚ್ಚಿದ ಪರಿಣಾಮ ಆತನ ಪರಿಸ್ಥಿತಿ ಗಂಭೀರವಾಗಿ ಆತ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೊನ್ನಾವರ: ಹಾವು ಹಿಡಿಯುವ ವೇಳೆ ಅವಘಡ ಸಂಭವಿಸಿ ನಾಗರಹಾವೊಂದು ಉರಗ ರಕ್ಷಕನಿಗೇ ಕಚ್ಚಿದ ಪರಿಣಾಮ ಆತನ ಪರಿಸ್ಥಿತಿ ಗಂಭೀರವಾಗಿ ಆತ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗುಂಡಬಾಳ ಹತ್ತಿರದ ಮನೆಯೊಂದರಲ್ಲಿ ಬಂದಿದ್ದ ನಾಗರಹಾವನ್ನು ಹಿಡಿಯಲು ಹೋದ ಉರಗ ತಜ್ಞನಿಗೆ ಹಾವು ಕಡಿದ ಪರಿಣಾಮ ಆಸ್ಪತ್ರೆಗೆ ದಾಖಲಿಸಿದ ಘಟನೆ ಸಂಭವಿಸಿದೆ.

ರಾತ್ರಿ ಸಮಯದಲ್ಲಿ ಮನೆಯ ಸಮೀಪ ಕಾಣಿಸಿಕೊಂಡ ನಾಗರಹಾವು ಹೋಗದೆ ಇರುವುದರಿಂದ ಉರಗ ತಜ್ಞ ಅಬು ತಲಾ ಅವರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. 

ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಉರಗ ತಜ್ಞ ಅಬು ತಲಾ ಹಾವಿನ ರಕ್ಷಣೆಗೆ ಮುಂದಾಗಿದ್ದಾರೆ. ಹಾವನ್ನು ಹಿಡಿಯುವಾಗ ಅಕಸ್ಮಾತಾಗಿ ಕೈ ಭಾಗಕ್ಕೆ ಹಾವು ಕಚ್ಚಿದೆ. ಆದರು ಹಾವನ್ನು ಹಿಡಿದ್ದಾರೆ. ನಂತರ ತಾಲೂಕು ಆಸ್ಪತ್ರೆಗೆ ಕರೆದೊಯ್ದರು ಸ್ಥಿತಿ ಗಂಭೀರವಾಗಿರುದರಿಂದ ಕೂಡಲೇ ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇವರ ಸ್ಥಿತಿ ಗಂಭೀರವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT