ಸಾಂದರ್ಭಿಕ ಚಿತ್ರ 
ರಾಜ್ಯ

ಸಂಚಾರ ನಿಯಮ ಉಲ್ಲಂಘನೆ: 772 ಡ್ರೈವಿಂಗ್ ಲೈಸೆನ್ಸ್ ಅಮಾನತುಗೊಳಿಸಿದ ಬೆಂಗಳೂರು ಸಂಚಾರ ಪೊಲೀಸರು

ಸಂಚಾರ ನಿಯಮ ಉಲ್ಲಂಘಿಸುವವರಿಗೆ ಪ್ರಬಲ ಸಂದೇಶ ರವಾನಿಸುವ ನಿಟ್ಟಿನಲ್ಲಿ, ಬೆಂಗಳೂರು ಸಂಚಾರ ಪೊಲೀಸರು ಈ ವರ್ಷದ ಜನವರಿಯಿಂದ ಸೆಪ್ಟೆಂಬರ್ ವರೆಗೆ 772 ಜನರ  ಡ್ರೈವಿಂಗ್ ಲೈಸೆನ್ಸ್ ಅಮಾನತುಗೊಳಿಸಿದ್ದಾರೆ.

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸುವವರಿಗೆ ಪ್ರಬಲ ಸಂದೇಶ ರವಾನಿಸುವ ನಿಟ್ಟಿನಲ್ಲಿ, ಬೆಂಗಳೂರು ಸಂಚಾರ ಪೊಲೀಸರು ಈ ವರ್ಷದ ಜನವರಿಯಿಂದ ಸೆಪ್ಟೆಂಬರ್ ವರೆಗೆ 772 ಜನರ  ಡ್ರೈವಿಂಗ್ ಲೈಸೆನ್ಸ್ ಅಮಾನತುಗೊಳಿಸಿದ್ದಾರೆ.

ಭಾರೀ ಸದ್ದು ಮಾಡುವ ಸೈಲೆನ್ಸರ್‌ಗಳಂತಹ ಅಕ್ರಮ ಪರಿಕರಗಳ ಅಳವಡಿಕೆಗಾಗಿ ಎಂಟು ವಾಹನಗಳ ನೋಂದಣಿ ಪ್ರಮಾಣಪತ್ರಗಳನ್ನು (ಆರ್‌ಸಿ)  ಸಾರಿಗೆ ಇಲಾಖೆ ರದ್ದುಗೊಳಿಸಿದೆ. ವಿವಿಧ ರೀತಿಯ ಉಲ್ಲಂಘನೆಗಳಿಗಾಗಿ 1,700 ಪರವಾನಗಿಗಳನ್ನು ಅಮಾನತುಗೊಳಿಸಲು ಸಂಚಾರ ಇಲಾಖೆಗೆ ಶಿಫಾರಸು ಮಾಡಿರುವುದಾಗಿ ಬೆಂಗಳೂರು ನಗರ ಜಂಟಿ ಪೊಲೀಸ್ (ಸಂಚಾರ), ಎಂಎನ್ ಅನುಚೇತ್ ದಿ ನ್ಯೂ ಸಂಡೆ ಎಕ್ಸ್‌ಪ್ರೆಸ್‌ ಗೆ ತಿಳಿಸಿದ್ದಾರೆ.

ಇದರಲ್ಲಿ ಹೆಚ್ಚಿನವು ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಮತ್ತು 172  ವ್ಹೀಲಿಂಗ್ ಮತ್ತು ಅಪಾಯಕಾರಿ ಚಾಲನೆಗಾಗಿ ಅಮಾನತು ಮಾಡಲಾಗಿದೆ. ಇದಲ್ಲದೆ, ವಾಹನಗಳ ಮಾರ್ಪಾಡು ಮತ್ತು ಇತರರಿಗೆ ತೊಂದರೆಯಾಗುವ ಶಬ್ದದ ಸೈಲೆನ್ಸರ್‌ಗಳನ್ನು ಅಳವಡಿಸಿದ್ದ ಕಾರಣ ಸಂಚಾರ ವಿಭಾಗವು ಎಂಟು ಆರ್‌ಸಿಗಳನ್ನು ರದ್ದುಗೊಳಿಸಿದೆ ಎಂದು ಅವರು ವಿವರಿಸಿದರು.

ಶೇ. 50 ರಷ್ಟು ಪ್ರಕರಣಗಳಲ್ಲಿ, ಅಪ್ರಾಪ್ತ ವಯಸ್ಕರು ವ್ಹೀಲಿಂಗ್ ಮತ್ತು ಅಪಾಯಕಾರಿ ಚಾಲನೆಯಲ್ಲಿ ತೊಡಗಿಸಿಕೊಂಡಿರುವುದು ಕಂಡು ಬಂದಿದೆ.  ಪ್ರತಿ ವಾಹನ ಮಾಲೀಕರಿಗೆ 25,000 ರೂಪಾಯಿಗಳವರೆಗೆ ದಂಡ ವಿಧಿಸಲಾಗಿದೆ ಎಂದು ಅನುಚೇತ್ ಹೇಳಿದ್ದಾರೆ.

ಅಪರಾಧದ  ಪ್ರಮಾಣ ಅವಲಂಬಿಸಿ, DL  ಅಮಾನತುಗೊಳಿಸುವಿಕೆಯು 3 ತಿಂಗಳಿಂದ 6 ತಿಂಗಳವರೆಗೆ ಇರುತ್ತದೆ. ಸಂಚಾರ ಪೊಲೀಸರು ಅಮಾನತುಗೊಳಿಸಲು ಶಿಫಾರಸು ಮಾಡಿದ ಹೆಚ್ಚಿನ ಪರವಾನಗಿಗಳು ಅಪಾಯಕಾರಿ ಚಾಲನೆಯಲ್ಲಿ ತೊಡಗಿಕೊಂಡಿವೆ ಮತ್ತು ಅವರು ಪುನರಾವರ್ತಿತ ಪ್ರಕರಣಗಳಾಗಿವೆ.

ಅಮಾನತು ಅವಧಿಯಲ್ಲಿ ಮಾಲೀಕರು ವಾಹನ ಚಲಾಯಿಸುವುದು ಕಂಡುಬಂದಲ್ಲಿ, ದಂಡವನ್ನು ದ್ವಿಗುಣಗೊಳಿಸಲಾಗುವುದು ಎಂದು ಸಾರಿಗೆ ಹೆಚ್ಚುವರಿ ಆಯುಕ್ತ (ಜಾರಿ) ಸಿ ಮಲ್ಲಿಕಾರ್ಜುನ ತಿಳಿಸಿದ್ದಾರೆ. ಅಶಿಸ್ತಿನ ವಾಹನ ಸವಾರರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಮುಕ್ತ ಹಸ್ತ ನೀಡಿದ್ದೇವೆ ಎಂದು ಸಾರಿಗೆ ಸಚಿವ ಆರ್.ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಕುಡಿದು ವಾಹನ ಚಲಾಯಿಸುವುದು ಮತ್ತು ವ್ಹೀಲಿಂಗ್ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದು ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT