ಕೆ.ಎಸ್ ಭಗವಾನ್ 
ರಾಜ್ಯ

'ಒಕ್ಕಲುತನ ಸಮುದಾಯದ ಅಣಕಮಾಡಿ, ತೆವಲು ತೀರಿಸಿಕೊಂಡು ನಿಮ್ಮ ತಪ್ಪನ್ನು ಕುವೆಂಪು ಮೇಲೆ ಹಾಕಿ ಪಲಾಯನವೇಕೆ?'

ಬಡವ ಶ್ರೀಮಂತ ರೇಖೆ ಅಳಿಸಿ ಬದುಕುವ ಕಲೆ ಕಲಿಸಲು ಹೋರಾಡಿ! ಯಾವುದು ಇದು ಪ್ರಚಾರ ತೆವಲಿನ ಹೋರಾಟ! ದಿಕ್ಕಾರವಿರಲಿ ನಿಮ್ಮ ಗುಣಕ್ಕೆ.! ಎಂದು ಜಗ್ಗೆಶ್ ತಮ್ಮ ಟ್ವಿಟ್ಟರ್ ನಲ್ಲಿ ಹರಿಹಾಯ್ದಿದ್ದಾರೆ.

ಬೆಂಗಳೂರು: ಮೈಸೂರಿನಲ್ಲಿ ನಡೆದ ಮಹಿಷ ದಸರಾದಲ್ಲಿ  ಒಕ್ಕಲಿಗರ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿದ ಪ್ರೊ. ಕೆ ಎಸ್ ಭಗವಾನ್ ವಿರುದ್ಧ ರಾಜ್ಯ ಸಭಾ ಸದಸ್ಯ ಹಾಗೂ ನಟ ಜಗ್ಗೇಶ್ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ  ಟ್ವೀಟ್ ಮಾಡಿರುವ ಅವರು, ನಿಮ್ಮ ಪ್ರಚಾರದ ತೆವಲಿಗೆ ನನ್ನ ಧಿಕ್ಕಾರ ಎಂದಿದ್ದಾರೆ.

ಸನ್ಮಾನ್ಯ ಭಗವಾನರೆ ಸಾಧ್ಯವಾದರೆ ಬಡತನ ನಿರ್ಮೂಲನೆ ಹೋರಾಡಿ! ಜಾತಿಯತೆ ದೂರಮಾಡಿ ಸಾಮರಸ್ಯಕ್ಕೆ ಹೋರಾಡಿ! ದೇಶ ಮೊದಲು ಜಾತಿ ನಂತರ ಎಂದು ಹೋರಾಡಿ! ಎಲ್ಲಾ ಮಕ್ಕಳಿಗು ಸಮಾನ ವಿಧ್ಯೆ ಸಿಗಲಿ ಎಂದು ಹೋರಾಡಿ! ಬಡವ ಶ್ರೀಮಂತ ರೇಖೆ ಅಳಿಸಿ ಬದುಕುವ ಕಲೆ ಕಲಿಸಲು ಹೋರಾಡಿ! ಯಾವುದು ಇದು ಪ್ರಚಾರ ತೆವಲಿನ ಹೋರಾಟ! ದಿಕ್ಕಾರವಿರಲಿ ನಿಮ್ಮ ಗುಣಕ್ಕೆ.! ಎಂದು ಜಗ್ಗೆಶ್ ತಮ್ಮ ಟ್ವಿಟ್ಟರ್ ನಲ್ಲಿ ಹರಿಹಾಯ್ದಿದ್ದಾರೆ.

ಸನ್ಮಾನ್ಯ ಭಗವಾನ ರವರೆ ನೀವು ವಿಧ್ಯಾವಂತರ?ನೀವು ಜ್ನಾನಿಗಳ?ನೀವು ಹಿರಿಯರಾ? ನೀವು ಸಮಾಜ ಸುಧಾರಕರ? "ಒಕ್ಕಲುತನ ಸಮುದಾಯದ ಅಣಕಮಾಡಿ ಯಾಕೆ ಕುವೆಂಪು ರವರ ಮೇಲೆ ಹಾಕಿ ತೆವಲು ತೀರಿಸಿಕೊಂಡು ಪಲಾಯನ ಮಾಡಿದಿರಿ" ಕರ್ನಾಟಕ ಆರಕ್ಷಕ ಇಲಾಖೆ ಯಾಕಿ ಮೌನ?  ಡಿಕೆ ಶಿವಕುಮಾರ್ ಅವರೆ ಯಾಕೆ ಮೌನ?  ಸಮಾಜ ಸ್ವಾಸ್ಥ ಕೆಡಿಸುವವರ ಮೇಲೆ ಕ್ರಮ ಜರುಗಿಸಿ ಆರಕ್ಷಕ ಮಹನೀಯರೆ..! ಎಂದು ತಪರಾಕಿ ಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT