ಪಂಡಿತ್ ರಾಜೀವ ತಾರನಾಥ 
ರಾಜ್ಯ

ದಸರಾ ಉತ್ಸವ: ಪಂಡಿತ್ ರಾಜೀವ್ ತಾರಾನಾಥ್ ಕಾರ್ಯಕ್ರಮ ನಿಗದಿ: ಅ.21 ಕ್ಕೆ ಕಾರ್ಯಕ್ರಮ 

ದಸರಾ ಉತ್ಸವದಲ್ಲಿ ಸರೋದ್ ವಾದಕ  ಪಂಡಿತ್ ರಾಜೀವ್ ಕಾರ್ಯಕ್ರಮದ ವಿಷಯವಾಗಿ ಹಲವು ಗೊಂದಲ, ಆರೋಪಗಳು ಕೇಳಿಬಂದಿದ್ದವು.

ಮೈಸೂರು: ದಸರಾ ಉತ್ಸವದಲ್ಲಿ ಸರೋದ್ ವಾದಕ  ಪಂಡಿತ್ ರಾಜೀವ್ ಕಾರ್ಯಕ್ರಮದ ವಿಷಯವಾಗಿ ಹಲವು ಗೊಂದಲ, ಆರೋಪಗಳು ಕೇಳಿಬಂದಿದ್ದವು. ಈಗ ಜಿಲ್ಲಾ ಪಂಚಾಯಿತಿ ಸಿಇಒ ಗಾಯತ್ರಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಅನಾರೋಗ್ಯ ಹಿನ್ನೆಲೆ ಕಾರ್ಯಕ್ರಮಕ್ಕೆ ರಾಜೀವ್ ತಾರಾನಾಥ್ ಒಪ್ಪಿರಲಿಲ್ಲ. ಇದೀಗ ಕಾರ್ಯಕ್ರಮ ನೀಡಲು ಪಂಡಿತ್ ರಾಜೀವ್ ತಾರಾನಾಥ್ ಒಪ್ಪಿದ್ದಾರೆ ಎಂದು ತಿಳಿಸಿದ್ದಾರೆ. 

ಇನ್ನು ಪಂಡಿತ್ ರಾಜೀವ್ ತಾರಾನಾಥ ಅವರಿಗೆ ದಸರಾ ಉತ್ಸವದಲ್ಲಿ ಕಾರ್ಯಕ್ರಮ ನೀಡಲು ಆಹ್ವಾನಿಸಿದ್ದ ಅಧಿಕಾರಿಗಳು ಕಮಿಷನ್ ಬೇಡಿಕೆ ಇಟ್ಟಿದ್ದಾರೆ, ಸಂಭಾವನೆಗಿಂತ 3 ಲಕ್ಷ ರೂ. ಹೆಚ್ಚು ನೀಡಲಾಗುತ್ತದೆ. ಹೆಚ್ಚುವರಿಯಾಗಿ ಜಮೆಯಾಗಿರುವ 3 ಲಕ್ಷ ರೂ. ಹಣವನ್ನು ನಮಗೆ ವಾಪಾಸ್ ನೀಡಬೇಕು ಎಂದು ಅಧಿಕಾರಿಗಳು ಕೇಳಿದ್ದರು ಇದಕ್ಕೆ ಪಂಡಿತ್ ರಾಜೀವ್ ತಾರಾನಾಥ್ ಅವರು ಇದಕ್ಕೆ ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಅವರ ಹೆಸರನ್ನು ಕೈಬಿಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಈ ಆರೋಪದ ಬಗ್ಗೆ ಮಾಹಿತಿ ಪಡೆಯಲು ಮೈಸೂರು ಜಿಲ್ಲಾಧಿಕಾರಿ ಅಧಿಕಾರಿಗಳನ್ನು ಪಂಡಿತ್ ತಾರಾನಾಥ್ ಅವರ ಬಳಿ ಕಳುಹಿಸಲಾಗಿತ್ತು. ತಪ್ಪಿತಸ್ಥರ ಮೇಲೆ ತಕ್ಷಣ ಎಫ್​​ಐಆರ್ ದಾಖಲು ಮಾಡುವಂತೆ ಸಚಿವ ಹೆಚ್ ಸಿ ಮಹದೇವಪ್ಪ ಮೌಖಿಕ ಸೂಚನೆ ನೀಡಿದ್ದರು.

ಆರೋಪದ ವಿಷಯವಾಗಿ ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಲಾಗಿದ್ದು, ಸಾಂಸ್ಕೃತಿಕ ನಗರಿಯ ಹೆಸರಿಗೆ ಕಳಂಕ ತರುವ ಕೆಲಸ ಯಾರೇ ಮಾಡಿದ್ದರೂ ಅವರ ವಿರುದ್ಧ ಸೂಕ್ತ ತನಿಖೆ ಕೈಗೊಳ್ಳಲಾಗುತ್ತದೆ. ತನಿಖೆ ನಡೆಸಿ ಅವರ ಮೇಲೆ ಕಠಿಣ ಕ್ರಮ ಜರುಗಿಸಲು ಸೂಚಿಸಲಾಗಿದೆ. ನಾಡಹಬ್ಬ ದಸರಾದಲ್ಲಿ ಇಂತಹ ಘಟನೆಗಳು ಕಂಡು ಬಂದಲ್ಲಿ ಅದನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತನ್ನಿ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT