ಪಂಡಿತ್ ರಾಜೀವ ತಾರನಾಥ 
ರಾಜ್ಯ

ದಸರಾ ಉತ್ಸವ: ಪಂಡಿತ್ ರಾಜೀವ್ ತಾರಾನಾಥ್ ಕಾರ್ಯಕ್ರಮ ನಿಗದಿ: ಅ.21 ಕ್ಕೆ ಕಾರ್ಯಕ್ರಮ 

ದಸರಾ ಉತ್ಸವದಲ್ಲಿ ಸರೋದ್ ವಾದಕ  ಪಂಡಿತ್ ರಾಜೀವ್ ಕಾರ್ಯಕ್ರಮದ ವಿಷಯವಾಗಿ ಹಲವು ಗೊಂದಲ, ಆರೋಪಗಳು ಕೇಳಿಬಂದಿದ್ದವು.

ಮೈಸೂರು: ದಸರಾ ಉತ್ಸವದಲ್ಲಿ ಸರೋದ್ ವಾದಕ  ಪಂಡಿತ್ ರಾಜೀವ್ ಕಾರ್ಯಕ್ರಮದ ವಿಷಯವಾಗಿ ಹಲವು ಗೊಂದಲ, ಆರೋಪಗಳು ಕೇಳಿಬಂದಿದ್ದವು. ಈಗ ಜಿಲ್ಲಾ ಪಂಚಾಯಿತಿ ಸಿಇಒ ಗಾಯತ್ರಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಅನಾರೋಗ್ಯ ಹಿನ್ನೆಲೆ ಕಾರ್ಯಕ್ರಮಕ್ಕೆ ರಾಜೀವ್ ತಾರಾನಾಥ್ ಒಪ್ಪಿರಲಿಲ್ಲ. ಇದೀಗ ಕಾರ್ಯಕ್ರಮ ನೀಡಲು ಪಂಡಿತ್ ರಾಜೀವ್ ತಾರಾನಾಥ್ ಒಪ್ಪಿದ್ದಾರೆ ಎಂದು ತಿಳಿಸಿದ್ದಾರೆ. 

ಇನ್ನು ಪಂಡಿತ್ ರಾಜೀವ್ ತಾರಾನಾಥ ಅವರಿಗೆ ದಸರಾ ಉತ್ಸವದಲ್ಲಿ ಕಾರ್ಯಕ್ರಮ ನೀಡಲು ಆಹ್ವಾನಿಸಿದ್ದ ಅಧಿಕಾರಿಗಳು ಕಮಿಷನ್ ಬೇಡಿಕೆ ಇಟ್ಟಿದ್ದಾರೆ, ಸಂಭಾವನೆಗಿಂತ 3 ಲಕ್ಷ ರೂ. ಹೆಚ್ಚು ನೀಡಲಾಗುತ್ತದೆ. ಹೆಚ್ಚುವರಿಯಾಗಿ ಜಮೆಯಾಗಿರುವ 3 ಲಕ್ಷ ರೂ. ಹಣವನ್ನು ನಮಗೆ ವಾಪಾಸ್ ನೀಡಬೇಕು ಎಂದು ಅಧಿಕಾರಿಗಳು ಕೇಳಿದ್ದರು ಇದಕ್ಕೆ ಪಂಡಿತ್ ರಾಜೀವ್ ತಾರಾನಾಥ್ ಅವರು ಇದಕ್ಕೆ ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಅವರ ಹೆಸರನ್ನು ಕೈಬಿಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಈ ಆರೋಪದ ಬಗ್ಗೆ ಮಾಹಿತಿ ಪಡೆಯಲು ಮೈಸೂರು ಜಿಲ್ಲಾಧಿಕಾರಿ ಅಧಿಕಾರಿಗಳನ್ನು ಪಂಡಿತ್ ತಾರಾನಾಥ್ ಅವರ ಬಳಿ ಕಳುಹಿಸಲಾಗಿತ್ತು. ತಪ್ಪಿತಸ್ಥರ ಮೇಲೆ ತಕ್ಷಣ ಎಫ್​​ಐಆರ್ ದಾಖಲು ಮಾಡುವಂತೆ ಸಚಿವ ಹೆಚ್ ಸಿ ಮಹದೇವಪ್ಪ ಮೌಖಿಕ ಸೂಚನೆ ನೀಡಿದ್ದರು.

ಆರೋಪದ ವಿಷಯವಾಗಿ ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಲಾಗಿದ್ದು, ಸಾಂಸ್ಕೃತಿಕ ನಗರಿಯ ಹೆಸರಿಗೆ ಕಳಂಕ ತರುವ ಕೆಲಸ ಯಾರೇ ಮಾಡಿದ್ದರೂ ಅವರ ವಿರುದ್ಧ ಸೂಕ್ತ ತನಿಖೆ ಕೈಗೊಳ್ಳಲಾಗುತ್ತದೆ. ತನಿಖೆ ನಡೆಸಿ ಅವರ ಮೇಲೆ ಕಠಿಣ ಕ್ರಮ ಜರುಗಿಸಲು ಸೂಚಿಸಲಾಗಿದೆ. ನಾಡಹಬ್ಬ ದಸರಾದಲ್ಲಿ ಇಂತಹ ಘಟನೆಗಳು ಕಂಡು ಬಂದಲ್ಲಿ ಅದನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತನ್ನಿ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT