ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: 5 ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ!

ಐದು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಶವ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ  ಪತ್ತೆಯಾಗಿದೆ.

ಬೆಂಗಳೂರು: ಐದು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಶವ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ  ಪತ್ತೆಯಾಗಿದೆ.

ಕೋಗಿಲು ಲೇಔಟ್'ನ 3ನೇ ಕ್ರಾಸ್ ರಸ್ತೆ ನಿವಾಸಿ ಶಕೀಲ್ ಅಕ್ತರ್ ಸೈಫಿ (28) ಹತ್ಯೆಯಾಗಿರುವ ವ್ಯಕ್ತಿಯಾಗಿದ್ದಾರೆ. ಬಿಹಾರ ಮೂಲಕ ಶಕೀಲ್ ಕಳೆದ 10 ವರ್ಷಗಳಿಂದ ನಗರದಲ್ಲಿ ನೆಲೆಯೂರಿದ್ದ. ಈವೆಂಟ್ ಮ್ಯಾನೇಜ್ ಮೆಂಟ್ ಕಂಪನಿಯೊಂದರಲ್ಲಿ ಕಾರ್ಪೆಂಟರ್ ಕೆಲಸ ಮಾಡಿಕೊಂಡಿದ್ದ.

ಈತನ ಶವ ಭಾನುವಾರ ಬೆಳಿಗ್ಗೆ ಮನೆಯ ಸಮೀಪದ ಮಾರ್ಟಿನ್ ಎಂಬುವವರ ನಿವೇಶನದ ಶೌಚಗುಂಡಿಯಲ್ಲಿ ಮೂಟೆ ಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸಂಪಿಗೆಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಮೃತದೇಹ ಮೇಲಕ್ಕೆ ಎತ್ತಿಸಿ ಪರಿಶೀಲಿಸಿದಾಗ ಅದು ಕಾರ್ಪೆಂಟರ್ ಶಕೀಲ್'ನ ಮೃತದೇಹ ಎಂಬುದು ಗೊತ್ತಾಗಿದೆ.

ಮಂಗಳವಾರ ರಾತ್ರಿಯಿಂದ ಸೈಫಿ ನಾಪತ್ತೆಯಾಗಿದ್ದ. ಈ ಕುರಿತು ಸೈಫಿ ಸಹೋದರ ಗುರುವಾರ ನಾಪತ್ತೆ ದೂರು ದಾಖಲಿಸಿದ್ದರು. ಶೌಚಗುಂಡಿಯಲ್ಲಿ ಪತ್ತೆಯಾದ ಶವ ಸೈಫಿ ಅವರದ್ದೇ ಎಂದು ಸೈಫಿ ಸಹೋದರ ಖಚಿತಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೆಲವರ ಮೇಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಐಪಿಸಿ 201 (ಅಪರಾಧದ ಸಾಕ್ಷ್ಯಾಧಾರಗಳು ನಾಪತ್ತೆ) ಮತ್ತು 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT