ಸಾಂದರ್ಭಿಕ ಚಿತ್ರ 
ರಾಜ್ಯ

ಟಿವಿ ರಿಮೋಟ್‌ಗಾಗಿ ಜಗಳ: ತಂದೆಯ ಕೋಪಕ್ಕೆ ಮಗ ಬಲಿ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಟಿವಿ ರಿಮೋಟ್‌ಗಾಗಿ ನಡೆದ ಜಗಳದಲ್ಲಿ ತಂದೆ ಎಸೆದ ಕತ್ತರಿ ಗಂಟಲು ಸೀಳಿದ ಪರಿಣಾಮ 16 ವರ್ಷದ ಬಾಲಕ ಮೃತಪಟ್ಟಿದ್ದಾನೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಟಿವಿ ರಿಮೋಟ್‌ಗಾಗಿ ನಡೆದ ಜಗಳದಲ್ಲಿ ತಂದೆ ಎಸೆದ ಕತ್ತರಿ ಗಂಟಲು ಸೀಳಿದ ಪರಿಣಾಮ 16 ವರ್ಷದ ಬಾಲಕ ಮೃತಪಟ್ಟಿದ್ದಾನೆ.

ಬಾಲಕನ ಗಂಟಲಿಗೆ ಕತ್ತರಿ ಚುಚ್ಚಿದ್ದು, ರಕ್ತಸ್ರಾವವಾಗಿ ಆತ ಸಾವನ್ನಪ್ಪಿದ್ದಾನೆ. ಮೃತನನ್ನು ಆರೋಪಿ ಲಕ್ಷ್ಮಣ್ ಬಾಬುರ ಹಿರಿಯ ಪುತ್ರ ಚಂದ್ರಶೇಖರ್ ಎಂದು ಗುರುತಿಸಲಾಗಿದೆ.

ಚಂದ್ರಶೇಖರ್ ಮತ್ತು ಆತನ ಸಹೋದರ ಪವನ್ ಕುಮಾರ್(14) ಟಿವಿ ಶೋ ವೀಕ್ಷಿಸಲು ರಿಮೋಟ್ ಗಾಗಿ ಜಗಳವಾಡುತ್ತಿದ್ದರು ಎನ್ನಲಾಗಿದೆ. ಇದರಿಂದ ಕುಪಿತಗೊಂಡ ಪಾರ್ಶ್ವವಾಯು ರೋಗಿಯ ಲಕ್ಷ್ಮಣ್ ಬಾಬು ಚಂದ್ರಶೇಖರ್ ಮೇಲೆ ಕತ್ತರಿ ಎಸೆದಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಚಂದ್ರಶೇಖರ್ ನನ್ನು ಆತನ ತಾಯಿ ಲಕ್ಷ್ಮಿ ಮೊಳಕಾಲ್ಮೂರಿನ ತಾಲೂಕು ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿನ ವೈದ್ಯರು ಚಂದ್ರಶೇಖರ್ ನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಸೂಚಿಸಿದರು.

ಬಳ್ಳಾರಿಗೆ ತೆರಳುವ ಮಾರ್ಗ ಮಧ್ಯೆ ಚಂದ್ರಶೇಖರ್ ಮೃತಪಟ್ಟಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಲಕ್ಷ್ಮಣ್ ಬಾಬು ಅವರನ್ನು ವಶಕ್ಕೆ ಪಡೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT